
ಆಸೀಸ್ ವೇಗಿಗಳ ದಾಳಿಗೆ ಪತರುಗಟ್ಟಿದ ಟೀಂ ಇಂಡಿಯಾ; ಕೇವಲ 26 ಓವರ್ ನಲ್ಲಿ ಆಲೌಟ್
Team Udayavani, Mar 19, 2023, 3:58 PM IST

ವಿಶಾಖಪಟ್ಟಣ: ಆಸೀಸ್ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾ ಬ್ಯಾಟರ್ ಗಳು ವಿಶಾಖಪಟ್ಟಣದಲ್ಲಿ ರನ್ ಗಳಿಸಲು ಪರದಾಡಿದ್ದಾರೆ. ಸ್ಟಾರ್ಕ್- ಅಬೋಟ್- ಎಲ್ಲಿಸ್ ವೇಗಕ್ಕೆ ಸಿಲುಕಿದ ಟೀಂ ಇಂಡಿಯಾ ಕೇವಲ 26 ಓವರ್ ನಲ್ಲಿ 117 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ.
ವಿಶಾಖಪಟ್ಟದ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ನಾಯಕನ ಈ ನಿರ್ಧಾರವನ್ನು ಸಮರ್ಥಿಸಿದ ಬೌಲರ್ ಗಳು ಆರಂಭದಿಂದಲೇ ವಿಕೆಟ್ ಪಡೆಯಲಾರಂಭಿಸಿದರು.
ಮೊದಲ ಓವರ್ ನಲ್ಲೇ ಗಿಲ್ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ನಾಯಕ ರೋಹಿತ್ ಕೂಡಾ 13 ರನ್ ಗೆ ವಿಕೆಟ್ ಒಪ್ಪಿಸಿದರು. ಸೂರ್ಯಕುಮಾರ್ ಮತ್ತೊಂದು ಗೋಲ್ಡಕ್ ಡಕ್ ಗೆ ಔಟಾದರು. ರಾಹುಲ್ 9 ರನ್ ಮತ್ತು ಪಾಂಡ್ಯ 1 ರನ್ ಗೆ ಔಟಾದರು.
ಇದನ್ನೂ ಓದಿ:ಚುನಾವಣೆ ಕೆಲಸಕ್ಕೆ ನಿರ್ಲಕ್ಷ್ಯ: ಬೀದರ್ ನಲ್ಲಿ ಇಬ್ಬರು ಅಧಿಕಾರಿಗಳ ಅಮಾನತು
ಅಲ್ಪ ಪ್ರತಿರೋಧ ತೋರಿದ ವಿರಾಟ್ ಕೊಹ್ಲಿ 31 ರನ್ ಮಾಡಿದರೆ, ಅಕ್ಷರ್ ಪಟೇಲ್ ಅಜೇಯ 29 ರನ್ ಗಳಿಸಿದರು. ರವೀಂದ್ರ ಜಡೇಜಾ 16 ರನ್ ಮಾಡಿದರು.
ಆಸೀಸ್ ಪರ ಘಾತಕ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಪಡೆದರು. ಸೀನ್ ಅಬೋಟ್ ಮೂರು ಮತ್ತು ನಥನ್ ಎಲ್ಲಿಸ್ ಎರಡು ವಿಕೆಟ್ ಪಡೆದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?
MUST WATCH
ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!