ಜಿಂಬಾಬ್ವೆಗೆ ಆಗಮಿಸಿದ ಟೀಮ್ ಇಂಡಿಯಾ: ಆಗಸ್ಟ್ 18ರಿಂದ 3 ಪಂದ್ಯಗಳ ಏಕದಿನ ಸರಣಿ
ಕೆ.ಎಲ್. ರಾಹುಲ್ ಸಾರಥ್ಯ
Team Udayavani, Aug 15, 2022, 6:55 AM IST
ಹರಾರೆ: ಮೂರು ಪಂದ್ಯ ಗಳ ಏಕದಿನ ಸರಣಿಗಾಗಿ ಭಾರತ ತಂಡ ಜಿಂಬಾಬ್ವೆ ರಾಜಧಾನಿ ಹರಾರೆಗೆ ಬಂದಿ ಳಿಯಿತು. ಆ. 18ರಿಂದ ಇಲ್ಲಿ 3 ಪಂದ್ಯಗಳ ಮುಖಾಮುಖಿ ಆರಂಭವಾಗಲಿದೆ.”ಅವರೀಗ ಇಲ್ಲಿದ್ದಾರೆ. ಭಾರತ ತಂಡ ಈಗಷ್ಟೇ ಹರಾರೆ ತಲುಪಿದೆ.
ಹರಾರೆ ಸ್ಪೋರ್ಟ್ಸ್ ಕ್ಲಬ್ ಅಂಗಳದಲ್ಲಿ 3 ಪಂದ್ಯಗಳು ನಡೆಯಲಿವೆ’ ಎಂದು ಜಿಂಬಾಬ್ವೆ ಕ್ರಿಕೆಟ್ ಮಂಡಳಿ ತನ್ನ ಟ್ವಿಟರ್ನಲ್ಲಿ ಟೀಮ್ ಇಂಡಿಯಾದ ಆಗಮನವನ್ನು ಸಾರಿದೆ.
ಕಡೇ ಗಳಿಗೆಯಲ್ಲಿ ಕೆ.ಎಲ್. ರಾಹುಲ್ ಫಿಟ್ ಆದ್ದರಿಂದ ಈ ಸರಣಿ ಯಲ್ಲಿ ಅವರು ಟೀಮ್ ಇಂಡಿಯಾ ನೇತೃತ್ವ ವಹಿಸಲಿದ್ದಾರೆ. ಮೊದಲ ಆಯ್ಕೆಯಲ್ಲಿ ಶಿಖರ್ ಧವನ್ಗೆ ನಾಯಕತ್ವ ನೀಡಲಾಗಿತ್ತು. ಅವರೀಗ ಉಪ ನಾಯಕರಾಗಿದ್ದಾರೆ. ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಅವರಿಗೆಲ್ಲ ವಿಶ್ರಾಂತಿ ನೀಡಲಾಗಿದೆ. ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್ ಏಕದಿನ ತಂಡಕ್ಕೆ ಮರಳಿದ್ದಾರೆ. ರಾಹುಲ್ ತ್ರಿಪಾಠಿ ಈ ತಂಡದ ಹೊಸ ಮುಖ.
ರಾಹುಲ್ ದ್ರಾವಿಡ್ ಗೈರಲ್ಲಿ ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಈ ಸರಣಿಯಲ್ಲಿ ಭಾರತ ತಂಡದ ಕೋಚ್ ಆಗಿರಲಿದ್ದಾರೆ.
ಸತತ 2 ಕ್ಲೀನ್ ಸ್ವೀಪ್
2015ರಿಂದೀಚೆ ಭಾರತ ತಂಡದ 3ನೇ ಜಿಂಬಾಬ್ವೆ ಪ್ರವಾಸ ಇದಾಗಿದೆ. ಕೊನೆಯ ಸಲ 2018ರಲ್ಲಿ ಪ್ರವಾಸಗೈದಿತ್ತು. ಕಳೆದೆರಡೂ ಸರಣಿಗಳನ್ನು ಭಾರತ 3-0 ಅಂತರದಿಂದ ವಶಪಡಿಸಿಕೊಂಡಿತ್ತು.2015ರಲ್ಲಿ ಅಜಿಂಕ್ಯ ರಹಾನೆ, 2018ರಲ್ಲಿ ಮಹೇಂದ್ರ ಸಿಂಗ್ ಧೋನಿ ಭಾರತ ತಂಡವನ್ನು ಮುನ್ನಡೆಸಿದ್ದರು.
ಭಾರತ ತಂಡ
ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್ (ಉಪ ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ಸಿರಾಜ್, ದೀಪಕ್ ಚಹರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ