ಎರಡನೇ ಟಿ20: ಕೊಹ್ಲಿ – ಅಯ್ಯರ್ ಸೂಪರ್ ಬ್ಯಾಟಿಂಗ್ ; ಭಾರತಕ್ಕೆ 07 ವಿಕೆಟ್ ಜಯ


Team Udayavani, Jan 7, 2020, 10:15 PM IST

T-20-SL-730

ಇಂದೋರ್: ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಇಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಭಾರತ 07 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಶ್ರೀಲಂಕಾ ನೀಡಿದ 142 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಕೆ.ಎಲ್. ರಾಹುಲ್ (45) ಮತ್ತು ಶಿಖರ್ ಧವನ್ (32) ಅವರ ಉತ್ತಮ ಜೊತೆಯಾಟದ ನೆರವಿನಿಂದ 17.3 ಓವರುಗಳಲ್ಲಿ 03 ವಿಕೆಟ್ ಗಳ ನಷ್ಟದಲ್ಲಿ ಗೆಲುವಿನ ಗುರಿಯನ್ನು ತಲುಪಿತು.

ಉತ್ತಮ ಬೌಲಿಂಗ್ ದಾಳಿ ನಡೆಸಿ 04 ಓವರ್ ಗಳಲ್ಲಿ 18 ರನ್ ನೀಡಿ 02 ವಿಕೆಟ್ ಪಡೆದ ವೇಗಿ ನವದೀಪ್ ಸೈನಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಗುಹವಾಟಿಯಲ್ಲಿ ರವಿವಾರದಂದು ನಡೆಯಬೇಕಿದ್ದ ಮೊದಲನೇ ಟಿ20 ಪಂದ್ಯ ಮಳೆಯ ಕಾರಣದಿಂದಾಗಿ ಒಂದೂ ಎಸೆತವನ್ನು ಕಾಣದೆ ರದ್ದುಗೊಂಡಿತ್ತು.

ರಾಹುಲ್ ಮತ್ತು ಧವನ್ ಅವರ ಬಳಿಕ ಉತ್ತಮ ಜೊತೆಯಾಟ ಕಟ್ಟಿದ ಕ್ಯಾಪ್ಟನ್ ಕೊಹ್ಲಿ (ಅಜೇಯ 30) ಮತ್ತು ಶ್ರೇಯಸ್ ಅಯ್ಯರ್ (34) ತಂಡದ ಗೆಲುವನ್ನು ಸರಾಗಗೊಳಿಸಿದರು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸಿದ ಕ್ಯಾಪ್ಟನ್ ಕೊಹ್ಲಿ ಕೇವಲ 17 ಎಸೆತಗಳಿಂದ 30 ರನ್ ಸಿಡಿಸಿ ಅಜೇಯರಾಗಿ ಉಳಿದರು. ಮಾತ್ರವಲ್ಲದೇ ತನ್ನ ಈ ಸ್ಪೋಟಕ ಇನ್ನಿಂಗ್ಸ್ ವೇಳೆ ವಿರಾಟ್ ಕೊಹ್ಲಿ ಅವರು ನಾಯಕನಾಗಿ ಅಂತಾರಾಷ್ಟ್ರೀಯ ಟಿ20ಯಲ್ಲಿ 1000 ರನ್ ಗಳಿಸಿದ ದಾಖಲೆಯನ್ನೂ ಬರೆದರು.

ಟಾಸ್ ಗೆದ್ದ ಭಾರತ ಶ್ರೀಲಂಕಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಭಾರತದ ಬಿಗು ದಾಳಿಯ ಎದುರು ಲಂಕಾ ಬ್ಯಾಟ್ಸ್ ಮನ್ ಗಳು ಸಿಡಿಯಲು ವಿಫಲರಾದರು. ತಂಡದ ಮೊತ್ತ 104 ಆಗುವಷ್ಟರಲ್ಲಿ 5 ಜನ ಬ್ಯಾಟ್ಸ್ ಮನ್ ಗಳು ಔಟಾಗಿದ್ದರು.

ವಿಕೆಟ್ ಕೀಪರ್ ಕುಸಲ್ ಪೆರೆರಾ (34) ಅವರದ್ದೇ ಗರಿಷ್ಠ ಗಳಿಕೆ. ಉಳಿದಂತೆ ಧನುಷ್ಕ ಗುಣತಿಲಕ (20), ಅವಿಷ್ಕ ಫೆರ್ನಾಂಡೋ (22) ಮತ್ತು ಕೊನೇ ಹಂತದಲ್ಲಿ ಧನಂಜಯ ಡಿಸಿಲ್ವಾ (13 ಎಸೆತೆಗಳಲ್ಲಿ 17) ಮತ್ತು ಹಸ್ ರಂಗ ಡಿಸಿಲ್ವಾ (10 ಎಸೆತಗಳಲ್ಲಿ ಅಜೇಯ 16) ಸಿಡಿದ ಕಾರಣ ಲಂಕಾ ನಿಗದಿತ 20 ಓವರುಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳನ್ನು ಕಲೆ ಹಾಕಿತು.

ಭಾರತದ ಪರ ವೇಗಿ ಶಾರ್ದೂಲ್ ಠಾಕೂರ್ ಉತ್ತಮ ಬೌಲಿಂಗ್ ದಾಳಿ ನಡೆಸಿ 03 ವಿಕೆಟ್ ಪಡೆದರೆ ಇನ್ನೊಬ್ಬ ವೇಗಿ ನವದೀಪ್ ಸೈನಿ 02 ವಿಕೆಟ್ ಪಡೆದರು. ದುಬಾರಿಯೆಣಿಸಿದರೂ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಸಹ 02 ವಿಕೆಟ್ ಪಡೆದು ಮಿಂಚಿದರು. ಬುಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ತಲಾ 01 ವಿಕೆಟ್ ಪಡೆದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.