ಸೈನಿ, ಠಾಕೂರ್ ದಾಳಿಗೆ ಲಂಕಾ ಕಂಗಾಲು ; ಭಾರತಕ್ಕೆ 2-0 ಸರಣಿ ಜಯ
ನವದೀಪ್ ಸೈನಿ ಸರಣಿ ಶ್ರೇಷ್ಠ ; ಶಾರ್ದೂಲ್ ಠಾಕೂರ್ ಪಂದ್ಯಶ್ರೇಷ್ಠ
Team Udayavani, Jan 10, 2020, 10:21 PM IST
ಪುಣೆ: ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಜಬರ್ದಸ್ತ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ನೇತೃತ್ವದ ಯುವ ಪಡೆ ಶ್ರೀಲಂಕಾ ತಂಡವನ್ನು 78 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿ ಟಿ20 ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.
ಭಾರತ ನೀಡಿದ 201 ರನ್ ಗಳ ಸವಾಲನ್ನು ಬೆನ್ನಟ್ಟಿದ ಮಾಲಿಂಗ ಪಡೆಗೆ ಭಾರತದ ವೇಗಿಗಳು ಪ್ರಾರಂಭದಲ್ಲೇ ಆಘಾತ ನೀಡಿದರು. ಪರಿಣಾಮ ಶ್ರೀಲಂಕಾ ತಂಡದ ಮೊತ್ತ 26 ರನ್ ಗಳಾಗುವಷ್ಟರಲ್ಲಿ ಪ್ರಮುಖ 04 ವಿಕೆಟ್ ಗಳು ಹಾರಿದ್ದವು, ಅದೂ ಕೇವಲ 5.1 ಓವರ್ ಗಳಲ್ಲಿ! ಅಂತಿಮವಾಗಿ ಶ್ರೀಲಂಕಾ 15.5 ಓವರ್ ಗಳಲ್ಲಿ 123 ರನ್ ಗಳಿಗೆ ಆಲೌಟಾಗುವ ಮೂಲಕ 78 ರನ್ ಗಳಿಂದ ಭಾರತಕ್ಕೆ ಶರಣಾಯಿತು.
ಲಂಕಾ ಪರ ಧನಂಜಯ ಡಿ’ಸಿಲ್ವಾ (57) ಅರ್ಧಶತಕ ಬಾರಿಸಿ ಟಾಪ್ ಸ್ಕೋರರ್ ಎಣಿಸಿದರು ಇವರನ್ನು ಹೊರತುಪಡಿಸಿದರೆ ಏಂಜೆಲೋ ಮ್ಯಾಥ್ಯೂಸ್ (31) ಮಾತ್ರವೇ ಎರಡಂಕೆ ಮೊತ್ತವನ್ನು ದಾಖಲಿಸಿದರು.
ಭಾರತದ ಪರ ವೇಗಿಗಳಾದ ನವದೀಪ್ ಸೈನಿ 03 ವಿಕೆಟ್ ಪಡೆದರೆ ಶಾರ್ದೂಲ್ ಠಾಕೂರ್ ಹಾಗೂ ವಾಷಿಂಗ್ಟನ್ ಸುಂದರ್ ತಲಾ 02 ವಿಕೆಟ್ ಪಡೆದರು. 2 ಓವರ್ ಗಳಲ್ಲಿ 1 ಓವರ್ ಮೇಡನ್ ಮಾಡಿ ಕೇವಲ 5 ರನ್ ಕೊಟ್ಟ ವೇಗಿ ಜಸ್ಪ್ರೀತ್ ಬುಮ್ರಾ 1 ವಿಕೆಟ್ ಪಡೆದರು.
ಗೌಹಾತಿಯಲ್ಲಿ ನಡೆಯಬೇಕಿದ್ದ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಬಳಿಕ ಇಂಧೋರ್ ನಲ್ಲಿ ನಡೆದ ಎರಡನೇ ಟಿ20 ಯನ್ನು ಭಾರತ 07 ವಿಕೆಟ್ ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಸರಣಿ ಸಮಬಲ ಸಾಧಿಸಲು ಮಾಲಿಂಗ ಪಡೆಗೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ