ಟಿ20 ವಿಶ್ವಕಪ್‌ ಕ್ರಿಕೆಟ್‌:  20 ಸಮರ್ಥ ಆಟಗಾರರ ತಂಡಕ್ಕೆ ಒಲವು


Team Udayavani, Jun 21, 2022, 6:30 AM IST

tdy-20

ಬೆಂಗಳೂರು: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಬೆಂಗಳೂರಿನ ಮಳೆಯಲ್ಲಿ ನೀರಸವಾಗಿ ಕೊನೆಗೊಂಡಿದೆ. ಭಾರತ 2-0 ಹಿನ್ನಡೆ ಬಳಿಕ ಸರಣಿಯನ್ನು 2-2 ಸಮಬಲಕ್ಕೆ ತಂದು ನಿಲ್ಲಿಸಿದ್ದೊಂದು ಗಮನಾರ್ಹ ಸಾಧನೆ. ಇದರಿಂದ ಮುಂಬರುವ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಎಷ್ಟರ ಮಟ್ಟಿಗೆ ಪ್ರಯೋಜನವಾಯಿತು? ಕಾದು ನೋಡಬೇಕು.

ಆಸ್ಟ್ರೇಲಿಯದಲ್ಲಿ ನಡೆಯುವ ಪ್ರತಿಷ್ಠಿತ ಟಿ20 ವಿಶ್ವಕಪ್‌ಗೆ ಇನ್ನಿರುವುದು ನಾಲ್ಕೇ ತಿಂಗಳು. ಇಲ್ಲಿ ಹೋರಾಡಲು 20 ಬಲಿಷ್ಠ ಆಟಗಾರರ ಪಡೆಯೊಂದನ್ನು ಕೂಡಲೇ ಅಂತಿಮಗೊಳಿಸಬೇಕಿದೆ ಎಂದು ಟೀಮ್‌ ಇಂಡಿಯಾದ ಕೋಚ್‌ ರಾಹುಲ್‌ ದ್ರಾವಿಡ್‌ ಅಭಿಪ್ರಾಯಪಟ್ಟಿದ್ದಾರೆ. ಐಸಿಸಿ ವಿಧಿಸಿದ ಗಡುವು ಸೆಪ್ಟಂಬರ್‌ 15.

“ವಿಶ್ವಕಪ್‌ನಂಥ ಪ್ರತಿಷ್ಠಿತ ಸರಣಿ ಸಮೀಪಿಸುತ್ತಿರುವಂತೆಯೇ ತಂಡದ ಸ್ವರೂಪದ ಸ್ಪಷ್ಟತೆಯೊಂದು ನಮ್ಮ ಮುಂದೆ ಇರಬೇಕಾಗುತ್ತದೆ. ವಿಶ್ವಕಪ್‌ಗೆ ಅಗತ್ಯವಿರುವುದು ಕೇವಲ 15 ಆಟಗಾರರಷ್ಟೇ ಆದರೂ 18ರಿಂದ 20 ಸದಸ್ಯರ ಬಲಿಷ್ಠ ತಂಡವೊಂದನ್ನು ನಾವು ರೂಪಿಸುವುದು ಅತ್ಯಗತ್ಯ. ಗಾಯ ಹಾಗೂ ಇನ್ನಿತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಲುವಾಗಿ ಹೆಚ್ಚುವರಿ ಆಟಗಾರರು ಅನಿವಾರ್ಯ. ಸಾಧ್ಯವಾದಷ್ಟು ಬೇಗ ಈ ತಂಡವನ್ನು ಆಂತಿಮಗೊಳಿಸಬೇಕಿದೆ’ ಎಂಬುದಾಗಿ ದ್ರಾವಿಡ್‌ ಹೇಳಿದರು. ಇದಕ್ಕೆ ಉಳಿದಿರುವುದು 4 ಸರಣಿ ಮಾತ್ರ.

ಭಾರತವಿನ್ನು ಐರ್ಲೆಂಡ್‌ ವಿರುದ್ಧ 2 ಪಂದ್ಯಗಳ ಟಿ20 ಸರಣಿ ಆಡಲಿದೆ. ಇಲ್ಲಿ ಹಾರ್ದಿಕ್‌ ಪಾಂಡ್ಯ ನಾಯಕ. ಬಳಿಕ ಇಂಗ್ಲೆಂಡ್‌ ವಿರುದ್ಧ ರೋಹಿತ್‌ ಶರ್ಮ ನಾಯಕತ್ವದಲ್ಲಿ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಬಳಿಕ ವೆಸ್ಟ್‌ ಇಂಡೀಸ್‌ಗೆ ತೆರಳಿ ಅಲ್ಲಿಯೂ 3 ಟಿ20 ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ. ಆ. 27ರಂದು ಏಷ್ಯಾ ಕಪ್‌ ಆರಂಭವಾಗಲಿದೆ. ಈ 4 ಸರಣಿಯಲ್ಲಿ ಕ್ರಿಕೆಟಿಗರ ಸಾಮರ್ಥ್ಯವನ್ನು ಅಳೆದು ತಂಡವನ್ನು ಅಂತಿಮಗೊಳಿಸಬೇಕಿದೆ.

ಅವಕಾಶ ನೀಡದೇ ಸಾಮರ್ಥ್ಯ ಅಳೆಯಲು ಸಾಧ್ಯವೇ? :

ವಿಪರ್ಯಾಸವೆಂದರೆ, ಐಪಿಎಲ್‌ ಬಳಿಕ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ಪ್ರಯೋಗ ನಡೆಸುವಲ್ಲಿ ಹಿಂದುಳಿದದ್ದು. ಐದೂ ಪಂದ್ಯಕ್ಕೆ 11 ಸದಸ್ಯರ ಒಂದೇ ತಂಡವನ್ನು ಕಟ್ಟಿಕೊಂಡು ಆಡಲಿಳಿಯಿತು. ಐಪಿಎಲ್‌ನಲ್ಲಿ ಮಿಂಚಿದ ಉಮ್ರಾನ್‌ ಮಲಿಕ್‌, ಆರ್ಷದೀಪ್‌ ಸಿಂಗ್‌, ದೀಪಕ್‌ ಹೂಡಾ ಮತ್ತು ರವಿ ಬಿಷ್ಣೋಯಿ ಅವರಿಗೆ ಒಂದೂ ಅವಕಾಶ ನೀಡಲಿಲ್ಲ. ಅರ್ಹತೆ ಇರುವುದರಿಂದಲೇ ಇವರೆಲ್ಲ ಭಾರತ ತಂಡಕ್ಕೆ ಆಯ್ಕೆಯಾದವರು. ಆದರೆ ಕೊನೆಯ ತನಕ ಇವರು ವೀಕ್ಷಕರಾಗಿಯೇ ಉಳಿಯಬೇಕಾಯಿತು. ಒಂದೂ ಪಂದ್ಯ ಆಡಿಸದೆ ಇವರ ಸಾಮರ್ಥ್ಯವನ್ನು ಅಳೆಯುವುದು ಹೇಗೆ? ವಿಶ್ವಕಪ್‌ಗೆ ತಂಡವನ್ನು ರೂಪಿಸುವುದು ಹೇಗೆ?

ವಿಶ್ವಕಪ್‌ ಗೂ ಮುನ್ನ ಭಾರತವಿನ್ನೂ 4 ಟಿ20 ಸರಣಿ ಆಡಲಿಕ್ಕಿದೆ. ಆದರೆ ಇಲ್ಲಿ ತವರಿನ ಸರಣಿ ಇಲ್ಲ. ಹೀಗಿರುವಾಗ ದಕ್ಷಿಣ ಆಫ್ರಿಕಾ ವಿರುದ್ಧ ಎಲ್ಲರಿಗೂ ಒಂದು ಚಾನ್ಸ್‌ ಕೊಟ್ಟು ನೋಡಬೇಕಿತ್ತು. 8 ತಿಂಗಳಲ್ಲಿ 6 ನಾಯಕರನ್ನು ಪ್ರಯೋಗಿಸಿದ ಭಾರತಕ್ಕೆ ಈ ಸಂಗತಿ ಹೊಳೆಯದಿದ್ದುದೊಂದು ಅಚ್ಚರಿ.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.