ಟೀಮ್‌ ಇಂಡಿಯಾ ಸ್ವಾತಂತ್ರ್ಯ ಸಂಭ್ರಮ: ಕೊಹ್ಲಿ  ಧ್ವಜಾರೋಹಣ


Team Udayavani, Aug 16, 2017, 11:35 AM IST

11-SPORTS-11.jpg

ಕ್ಯಾಂಡಿ: ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್‌ ತಂಡ ಮಂಗಳವಾರ ಕ್ಯಾಂಡಿಯಲ್ಲಿ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸಿತು. ನಾಯಕ ವಿರಾಟ್‌ ಕೊಹ್ಲಿ, ಕೋಚ್‌ ರವಿಶಾಸ್ತ್ರಿ ಸಹಿತ ತಂಡದ ಎಲ್ಲ ಸದಸ್ಯರೂ ಸ್ವಾತಂತ್ರ್ಯ ಸಂಭ್ರ ಮದಲ್ಲಿ ಪಾಲ್ಗೊಂಡರು. 

ಈ ಸಂದರ್ಭದಲ್ಲಿ ಕೊಹ್ಲಿ ಧ್ವಜಾರೋಹಣ ಮಾಡಿದರು. ಕ್ರಿಕೆಟಿಗರೆಲ್ಲ ಸಾಲಾಗಿ ನಿಂತು ರಾಷ್ಟ್ರಗೀತೆ ಹಾಡಿದರು. ತಂಡದ ಸಹಾಯಕ ಸಿಬಂದಿಗಳು, ಕೆಲವು ಆಟಗಾರರ ಕುಟುಂಬದ ಸದಸ್ಯರೂ ಈ ಸಮಾ ರಂಭಕ್ಕೆ ಸಾಕ್ಷಿಯಾದರು. ಭಾರತೀಯ ಕ್ರಿಕೆಟಿಗರ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಸಿಸಿಐ ತನ್ನ ಟ್ವಿಟರ್‌ನಲ್ಲಿ ಚಿತ್ರ ಸಹಿತ ಪ್ರಕಟಿ ಸಿದೆ. ಇದರ ವೀಡಿಯೋವನ್ನು “ಡಬ್ಲ್ಯುಡಬ್ಲ್ಯುಡಬ್ಲ್ಯು.ಬಿಸಿಸಿಐ.ಟಿವಿ’ಯಲ್ಲಿ ವೀಕ್ಷಿಸಬಹುದು.

3ನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ ಕಾರಣ ಭಾರತೀಯ ಕ್ರಿಕೆಟಿಗರ ಸ್ವಾತಂತ್ರ್ಯ ದಿನಾಚರಣೆಗೆ ಹೆಚ್ಚಿನ ಕಾಲಾವಕಾಶ ಲಭಿಸಿತ್ತು. ಭಾರತದ ಸ್ವಾತಂತ್ರ್ಯ ದಿನೋ ತ್ಸವದ ಶುಭ ಸಂದರ್ಭದಲ್ಲಿ ಅನಿಲ್‌ ಕುಂಬ್ಳೆ, ವೀರೇಂದ್ರ ಸೆಹವಾಗ್‌, ಗೌತಮ್‌ ಗಂಭೀರ್‌ ಮೊದಲಾದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಶುಭ ಹಾರೈಸಿ ಟ್ವೀಟ್‌ ಮಾಡಿದ್ದಾರೆ.

ಧೋನಿ ದಾಖಲೆ ಮುರಿದ ಕೊಹ್ಲಿ
ಪಲ್ಲೆಕಿಲೆ: ಶ್ರೀಲಂಕಾ ವಿರುದ್ಧದ ಪಲ್ಲೆಕಿಲೆ ಟೆಸ್ಟ್‌ ಪಂದ್ಯವನ್ನು ಇನ್ನಿಂಗ್ಸ್‌ ಅಂತರದಿಂದ ಗೆಲ್ಲುವುದರೊಂದಿಗೆ ನಾಯಕ ವಿರಾಟ್‌ ಕೊಹ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ವಿದೇಶಗಳಲ್ಲಿ ಅತ್ಯಧಿಕ ಟೆಸ್ಟ್‌ ಪಂದ್ಯಗಳನ್ನು ಗೆದ್ದ ದ್ವಿತೀಯ ಭಾರತೀಯ ನಾಯಕನೆನಿಸಿದ್ದಾರೆ. 

ಇದು ಕೊಹ್ಲಿ ನಾಯಕತ್ವದಲ್ಲಿ ಭಾರತಕ್ಕೆ ವಿದೇಶದಲ್ಲಿ ಒಲಿದ 7ನೇ ಗೆಲುವು. ಇದರೊಂದಿಗೆ ಅವರು 6 ಟೆಸ್ಟ್‌ ಪಂದ್ಯಗಳನ್ನು ಗೆದ್ದ ಮಹೇಂದ್ರ ಸಿಂಗ್‌ ಧೋನಿ ದಾಖಲೆಯನ್ನು ಮುರಿದರು. ವಿದೇಶದಲ್ಲಿ ಭಾರತಕ್ಕೆ ಅತ್ಯಧಿಕ ಟೆಸ್ಟ್‌ ಗೆಲುವುಗಳನ್ನು ತಂದಿತ್ತ ನಾಯಕನೆಂಬ ದಾಖಲೆ ಸೌರವ್‌ ಗಂಗೂಲಿ ಹೆಸರಲ್ಲಿದೆ (11 ಟೆಸ್ಟ್‌). ಇದು ವಿರಾಟ್‌ ಕೊಹ್ಲಿ ನೇತೃತ್ವದಲ್ಲಿ ಭಾರತಕ್ಕೆ ಒಲಿದ ಸತತ 8ನೇ ಟೆಸ್ಟ್‌ ಸರಣಿ ಗೆಲುವು.

ಟೆಸ್ಟ್‌ ಸರಣಿ: ವೈಟ್‌ವಾಶ್‌ ಕಥನ
ಈವರೆಗೆ 3 ಹಾಗೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಪಂದ್ಯಗಳ ಸರಣಿಯಲ್ಲಿ 57 ಕ್ಲೀನ್‌ಸ್ವೀಪ್‌ ಫ‌ಲಿತಾಂಶ ದಾಖಲಾಗಿದೆ. ಇವುಗಳಲ್ಲಿ ಆಗ್ರಸ್ಥಾನದಲ್ಲಿರುವ ತಂಡ ಆಸ್ಟ್ರೇಲಿಯ. ಕಾಂಗರೂ ಪಡೆ ಸರ್ವಾಧಿಕ 22 ಸರಣಿಗಳನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ. ಅನಂತರದ ಸ್ಥಾನದಲ್ಲಿರುವ ತಂಡಗಳೆಂದರೆ ಇಂಗ್ಲೆಂಡ್‌ (13), ಪಾಕಿಸ್ಥಾನ (5), ಭಾರತ (5), ದಕ್ಷಿಣ ಆಫ್ರಿಕಾ, ಶ್ರೀಲಂಕಾ (ತಲಾ 4), ವೆಸ್ಟ್‌ ಇಂಡೀಸ್‌ (3) ಮತ್ತು ಬಾಂಗ್ಲಾದೇಶ (1). 

ಟೆಸ್ಟ್‌ ಇತಿಹಾದಲ್ಲಿ ಮೊದಲ ಕ್ಲೀನ್‌ಸ್ವೀಪ್‌ ಸಾಹಸಕ್ಕೆ ನಿದರ್ಶನವಾದ ತಂಡ ಇಂಗ್ಲೆಂಡ್‌. ಅದು 1886ರ ತವರಿನ ಸರಣಿಯಲ್ಲಿ ಆಸ್ಟ್ರೇಲಿಯಕ್ಕೆ 3-0 ಸೋಲುಣಿಸಿತ್ತು.

ಈವರೆಗೆ ಯಾವುದೇ ತಂಡಗಳು 6 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿಲ್ಲ. ಆದರೆ 5 ಪಂದ್ಯಗಳ 10 ಸರಣಿಗಳಲ್ಲಿ ಬೇರೆ ಬೇರೆ ತಂಡಗಳು ಕ್ಲೀನ್‌ಸ್ವೀಪ್‌ ಸಾಧನೆಗೈದಿವೆ. ಇವುಗಳಲ್ಲಿ ಆಸ್ಟ್ರೇಲಿಯಕ್ಕೆ ಅಗ್ರಸ್ಥಾನ (5). 

ಭಾರತ ಈವರೆಗಿನ ಮೊದಲ 4 ಸರಣಿ ಗೆಲುವುಗಳನ್ನು ತವರಿನಲ್ಲೇ ಒಲಿಸಿಕೊಂಡಿದೆ. ಇವುಗಳೆಂದರೆ 1993ರಲ್ಲಿ ಇಂಗ್ಲೆಂಡ್‌ ವಿರುದ್ಧ 3-0, 1994ರಲ್ಲಿ ಶ್ರೀಲಂಕಾ ವಿರುದ್ಧ 3-0, 2013ರಲ್ಲಿ ಆಸ್ಟ್ರೇಲಿಯ ವಿರುದ್ಧ 4-0 ಹಾಗೂ ಕಳೆದ ವರ್ಷ ನ್ಯೂಜಿಲ್ಯಾಂಡ್‌ ವಿರುದ್ಧ 3-0 ಸರಣಿ ಗೆಲುವು. ಶ್ರೀಲಂಕಾವನ್ನು 3-0 ಅಂತರದಿಂದ ಮಣಿಸುವ ಮೂಲಕ ವಿದೇಶದಲ್ಲೂ ಕ್ಲೀನ್‌ಸ್ವೀಪ್‌ ಖಾತೆ ತೆರೆಯಿತು.

ಅಜರುದ್ದೀನ್‌ ಮತ್ತು ವಿರಾಟ್‌ ಕೊಹ್ಲಿ ಅತೀ ಹೆಚ್ಚು 2 ಸಲ ಕ್ಲೀನ್‌ಸ್ವೀಪ್‌ ಸರಣಿಗೆ ಸಾಕ್ಷಿಯಾದ ಭಾರತದ ನಾಯಕರಾಗಿದ್ದಾರೆ. 1993ರ ಇಂಗ್ಲೆಂಡ್‌ ವಿರುದ್ಧದ 3-0 ಹಾಗೂ 1994ರ ಶ್ರೀಲಂಕಾ ವಿರುದ್ಧದ 3-0 ಗೆಲುವು ಅಜರ್‌ ನಾಯಕತ್ವದಲ್ಲೇ ಒಲಿದಿತ್ತು. 2016ರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ 3-0 ಗೆಲುವಿನ ವೇಳೆ ವಿರಾಟ್‌ ಕೊಹ್ಲಿ ನಾಯಕರಾಗಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.