ವಿಂಡೀಸ್ ವಿರುದ್ದ ಏಕದಿನ ಸರಣಿ: ಟಾಸ್ ಗೆದ್ದ ಭಾರತ; ಮುಖೇಶ್ ಪದಾರ್ಪಣೆ
Team Udayavani, Jul 27, 2023, 6:44 PM IST
ಬಾರ್ಬಡೋಸ್: ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದ ಭಾರತ ತಂಡವು ಇಂದಿನಿಂದ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿದೆ. ಮೊದಲ ಏಕದಿನ ಪಂದ್ಯವು ಬಾರ್ಬಡೋಸ್ ನ ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ಟಾಸ್ ಗೆದ್ದ ಭಾರತ ತಂಡವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದೆ.
ಭಾರತದ ಪರ ಮುಖೇಶ್ ಕುಮಾರ್ ಅವರು ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದೆ. ಭಾರತವು ಇಂದು ನಾಲ್ಕು ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿದೆ.
ಟಾಸ್ ಸಮಯದಲ್ಲಿ ಮಾತನಾಡಿದ ನಾಯಕ ರೋಹಿತ್, ನಾವು ಕೆಲವು ವಿಭಿನ್ನ ವಿಷಯಗಳನ್ನು ಪ್ರಯತ್ನಿಸುತ್ತೇವೆ. ನಾವು ಸ್ಪಷ್ಟ ಮನಸ್ಥಿತಿಯೊಂದಿಗೆ ವಿಶ್ವಕಪ್ ಗೆ ಹೋಗಲು ಬಯಸುತ್ತೇವೆ. ನಮಗೆ ಫಲಿತಾಂಶಗಳು ಸಹ ಮುಖ್ಯವಾಗಿದೆ. ಕೆಲವೊಮ್ಮೆ, ನಾವು ವಿಭಿನ್ನ ಆಟಗಾರರನ್ನು ಪ್ರಯತ್ನಿಸಲಿದ್ದೇವೆ ಆದರೆ ಫಲಿತಾಂಶಗಳು ನಮಗೆ ಮುಖ್ಯವಾಗಿದೆ ಎಂದರು.
ವೆಸ್ಟ್ ಇಂಡೀಸ್: ಶಾಯ್ ಹೋಪ್ (ನಾ/ವಿ.ಕೀ), ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಅಲಿಕ್ ಅಥಾನಾಜೆ, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಡೊಮಿನಿಕ್ ಡ್ರೇಕ್ಸ್, ಜೇಡನ್ ಸೀಲ್ಸ್, ಗುಡಕೇಶ್ ಮೋಟಿ
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?