ಕಿವೀಸ್ ನೆಲದಲ್ಲಿ ಟೀಂ ಇಂಡಿಯಾಕ್ಕೆ ಒಲಿಯದ T20 ಸರಣಿ


Team Udayavani, Feb 10, 2019, 10:37 AM IST

kiwis-10-2.jpg

ಹ್ಯಾಮಿಲ್ಟನ್ : ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತ ಬಳಿಕ ನ್ಯೂಝಿಲ್ಯಾಂಡ್ ನೆಲದಲ್ಲೂ ಏಕದಿನ ಸರಣಿ ಗೆಲ್ಲುವ ಮೂಲಕ ತನ್ನ ಪರಾಕ್ರಮವನ್ನು ಮೆರೆದಿತ್ತು. ಆದರೆ ಚುಟುಕು ಕ್ರಿಕೆಟ್ ಸರಣಿಯಲ್ಲಿ ಮಾತ್ರ ಟ್ರೋಫಿ ಗೆಲ್ಲುವ ಬ್ಲೂ ಬಾಯ್ಸ್ ಕನಸು ನನಸಾಗಲೇ ಇಲ್ಲ. ಹ್ಯಾಮಿಲ್ಟನ್ ನಲ್ಲಿ ಇಂದು ನಡೆದ ಮೂರನೇ ಮತ್ತು ಅಂತಿಮ ಟಿ20 ಪಂದ್ಯಾಟದಲ್ಲಿ ಸರ್ವಾಂಗೀಣ ಆಟದ ಪ್ರದರ್ಶನ ನೀಡಿದ ನ್ಯೂಝಿಲ್ಯಾಂಡ್ 2-1ರಿಂದ ಟಿ20 ಸರಣಿ ಗೆದ್ದು ಬೀಗಿತು. ಆ ಮೂಲಕ ಬಹುದೀರ್ಘ ಆಸೀಸ್ – ಕಿವೀಸ್ ಪ್ರವಾಸವನ್ನು ಭಾರತವು ಸೋಲಿನೊಂದಿಗೆ ಕೊನೆಗೊಳಿಸುವಂತಾಯಿತು.

ನ್ಯೂಝಿಲ್ಯಾಂಡ್ ನೀಡಿದ 213 ರನ್ನುಗಳ ಬೃಹತ್ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತದ ಆರಂಭ ಅಷ್ಟೇನೂ ಆಶಾದಾಯಕವಾಗಿರಲಿಲ್ಲ. ಅನುಭವಿ ಬ್ಯಾಟ್ಸ್ ಮನ್ ಶಿಖರ್ ಧವನ್ (5) ಸಿಡಿಯಲು ವಿಫಲರಾದರು. ನಾಯಕ ರೋಹಿತ್ ಶರ್ಮಾ (38) ಮತ್ತು ವಿಜಯ ಶಂಕರ್ (43) ಸೇರಿಕೊಂಡು ಬಿರುಸಿನ ಆಟಕ್ಕೆ ಮುಂದಾದರು. ಈ ಹಂತದಲ್ಲಿ 43 ರನ್ನುಗಳನ್ನು ಗಳಿಸಿದ್ದ ವಿಜಯ ಶಂಕರ್ ಔಟಾದರು. ಬಳಿಕ ಬಂದ ರಿಷಭ್ ಪಂತ್ ಹೊಡೆಬಡಿಯ ಆಟಕ್ಕೆ ಮುಂದಾದರು. ಆದರೆ 12 ಎಸೆತಗಳಲ್ಲಿ 28 ರನ್ನು ಗಳಿಸಿ ಅವರೂ ಔಟಾದರು. ಬೆನ್ನು ಬೆನ್ನಿಗೆ ರೋಹಿತ್ ಶರ್ಮಾ, ಹಾರ್ಧಿಕ್ ಪಾಂಡ್ಯ (11 ಎಸೆತಗಳಲ್ಲಿ 21 ರನ್) ಮತ್ತು ಧೋನಿ (2) ವಿಕೆಟ್ ಬಿತ್ತು. ಆಗ ಭಾರತದ ಗೆಲುವಿಗೆ 28 ಎಸೆತಗಳಲ್ಲಿ ಇನ್ನೂ 67 ರನ್ನುಗಳ ಅಗತ್ಯವಿತ್ತು.

ಈ ಹಂತದಲ್ಲಿ ದಿನೇಶ್ ಕಾರ್ತಿಕ್ ಅವರಿಗೆ ಜೊತೆಯಾದ ಕುನಾಲ್ ಪಾಂಡ್ಯ ಬಿರುಸಿನ ಆಟವಾಡಲಾರಂಭಿಸಿದರು. ಕಾರ್ತಿಕ್ ಮತ್ತು ಕುನಾಲ್ ಪಾಂಡ್ಯ ಸೇರಿಕೊಂಡು ತಂಡದ ಗೆಲುವಿನ ಹೋರಾಟ ಮುಂದುವರೆಸಿದರಾದರೂ ಫೈನಲ್ ಓವರ್ ಟೆನ್ಷನ್ ಅನ್ನು ಗೆಲ್ಲಲು ಮಾತ್ರ ಅವರಿಬ್ಬರಿಗೂ ಸಾಧ್ಯವಾಗಲಿಲ್ಲ. ದಿನೇಶ್ ಕಾರ್ತಿಕ್ 16 ಎಸೆತಗಳಲ್ಲಿ 33 ರನ್ನುಗಳನ್ನು ಗಳಿಸಿದರೆ, ಪಾಂಡ್ಯ 13 ಎಸೆತಗಳಲ್ಲಿ 26 ರನ್ನುಗಳನ್ನು ಗಳಿಸಿದರು. ಇವರಿಬ್ಬರೂ ಅಜೇಯರಾಗಿ ಉಳಿದರು.


ಫೈನಲ್ ಓವರ್ ಟೆನ್ಷನ್
ಅಂತಿಮವಾಗಿ ಟೀಂ ಇಂಡಿಯಾ ಗೆಲುವಿಗೆ 6 ಎಸೆತಗಳಲ್ಲಿ 16 ರನ್ನುಗಳ ಅಗತ್ಯವಿತ್ತು. ಮೊದಲ ಎಸೆತದಲ್ಲಿ 2 ರನ್ ಬಂತು. ಎರಡನೇ ಎಸೆತ ಡಾಟ್ ಬಾಲ್, ಮೂರನೇ ಎಸೆತ ಮತ್ತೆ ಡಾಟ್ ಬಾಲ್ ಆಯಿತು. ನಾಲ್ಕನೇ ಎಸೆತದಲ್ಲಿ 1 ರನ್ ಬಂತು. ಐದನೇ ಎಸೆತವನ್ನು ಎದುರಿಸಿದ ಪಾಂಡ್ಯ 1 ರನ್ ಮಾತ್ರ ಗಳಿಸಿದರು. ಅಂತಿಮ ಎಸೆತದಲ್ಲಿ 12 ರನ್ನುಗಳ ಅಗತ್ಯವಿತ್ತು ಆದರೆ ಆ ಚೆಂಡನ್ನು ಅಂಪೈರ್ ವೈಡ್ ಎಂದು ಘೋಷಿಸಿದರು, ಅಂತಿಮ ಎಸೆತವನ್ನು ಕಾರ್ತಿಕ್ ಸಿಕ್ಸರ್ ಗೆ ತಳ್ಳಿದರಾದರೂ ಆ ಹೊತ್ತಿಗಾಗಲೇ ಭಾರತದ ಜಯದ ಕನಸು ಕಮರಿ ಹೋಗಿತ್ತು. ಅಂತಿಮವಾಗಿ 4 ರನ್ನುಗಳಿಂದ ಸೋಲುವ ಮೂಲಕ ಕಿವೀಸ್ ನೆಲದಲ್ಲಿ ಟಿ20 ಸರಣಿ ಗೆಲ್ಲುವ ಕನಸು ನನಸಾಗಲಿಲ್ಲ.

►1st Innings News►ಅಂತಿಮ T20 : ಮನ್ರೋ ಮಿಂಚು ; Team India ಟಾರ್ಗೆಟ್ 213: https://bit.ly/2MWv5mh​​​​​​​

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.