ಐಸಿಸಿ ಅಂಡರ್ 19 ಮಹಿಳಾ ಟಿ20 ವಿಶ್ವಕಪ್‌ ಗೆ ಸಜ್ಜಾದ ಭಾರತ


Team Udayavani, Jan 12, 2023, 2:56 PM IST

under 19 world cup women team

ಕೊನೆಗೂ ಎರಡು ವರ್ಷಗಳ ಕಾಯುವಿಕೆಯ ಅನಂತರ ಬಹು ನಿರೀಕ್ಷಿತ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ ಗೆ ವೇದಿಕೆ ಸಜ್ಜಾಗಿದೆ. ಜನವರಿ 2021ರಲ್ಲಿಯೇ ನಡೆಯಬೇಕಾಗಿದ್ದ ಈ ಟೂರ್ನಿ ಕೋವಿಡ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಇದೀಗ  ದಕ್ಷಿಣ ಆಫ್ರಿಕಾದಲ್ಲಿ ಜನವರಿ 14ರಿಂದ 29ರ ವರೆಗೆ ವಿಶ್ವದ 16 ತಂಡಗಳು ಮೊದಲ U-19 ವಿಶ್ವಕಪ್  ಗಾಗಿ ಸೆಣೆಸಲು ಸಿದ್ಧವಾಗಿವೆ. ಅವುಗಳೆಂದರೇ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯ, ಬಾಂಗ್ಲಾದೇಶ, ಇಂಗ್ಲೆಂಡ್‌, ಐರ್ಲೆಂಡ್‌, ನ್ಯೂಜಿಲ್ಯಾಂಡ್‌, ಪಾಕಿಸ್ಥಾನ, ಶ್ರೀಲಂಕಾ, ವೆಸ್ಟ್ ಇಂಡೀಸ್‌. ಈಗಾಗಲೇ ಈ ಎಲ್ಲ ದೇಶಗಳು ತಂಡದ ಸದಸ್ಯರ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿವೆ.

ಭಾರತವೂ ಸಹ ಆಟಗಾರರ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಹಾರ್ಡ್‌ ಹಿಟ್ಟರ್‌ ಶಫಾಲಿ ವರ್ಮ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇವರ ಜತೆ ವಿಕೆಟ್‌ ಕೀಪಿಂಗ್‌ ಬ್ಯಾಟರ್‌ ರಿಚಾ ಘೋಶ್‌ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರಿಬ್ಬರೂ ಭಾರತದ ರಾಷ್ಟ್ರೀಯ ಮಹಿಳಾ ತಂಡದ ಪರ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಅನುಭವವುಳ್ಳವರಾಗಿದ್ದು, ಇವರ ಉಪಸ್ಥಿತಿ ಭಾರತಕ್ಕೆ ವರವಾಗುವುದರಲ್ಲಿ ಅನುಮಾನವಿಲ್ಲ.

ಗ್ರೂಪ್‌ ಹಂತದಲ್ಲಿ ಪಂದ್ಯಗಳು ನಡೆಯಲಿದ್ದು, 16 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತೀ ಗುಂಪಿನಲ್ಲಿ 4 ತಂಡಗಳು ಸೆಣಸಲಿವೆ. ಪ್ರತೀ ಗುಂಪಿನ ಅಗ್ರ 3 ತಂಡಗಳು ಸೂಪರ್‌ ಸಿಕ್ಸ್ ಹಂತ ತಲುಪಲಿವೆ. ಇಲ್ಲಿ ಎ ಗುಂಪಿನ ಅಗ್ರ ತಂಡಗಳು ಡಿ ಗುಂಪಿನ ವಿರುದ್ಧ, ಬಿ ಗುಂಪಿನ ಅಗ್ರ ತಂಡಗಳು ಸಿ ಗುಂಪಿನ ವಿರುದ್ಧ ಆಡಲಿವೆ. ಇಲ್ಲಿ ಅಗ್ರಸ್ಥಾನ ಗಳಿಸುವ ತಂಡಗಳು ಸೆಮಿ ಫೈನಲ್‌ ತಲುಪಲಿವೆ. ಡಿ ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ ಜ. 14ರಂದು ದಕ್ಷಿಣ‌ ಆಫ್ರಿಕಾ, ಜ. 16ರಂದು ಯುಎಇ, ಜ. 18ರಂದು ಸ್ಕಾಟ್ಲೆಂಡ್‌ ವಿರುದ್ಧ ಸೆಣೆಸಲಿದೆ.

ಭಾರತ ತಂಡ ಎಲ್ಲ ರೀತಿಯಿಂದಲೂ ಬಲಿಷ್ಠವಾಗಿಯೇ ಇದೆ. ನ್ಯೂಜಿಲ್ಯಾಂಡ್‌ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ 5-0 ಅಂತರದಿಂದ ಗೆದ್ದರೆ, ದಕ್ಷಿಣ ಆಫ್ರಿಕಾದ ವಿರುದ್ಧ ಅವರದೇ ನೆಲದಲ್ಲಿ ಆಡಿದ ಸರಣಿಯನ್ನು 4-0 ಅಂತರದಿಂದ ಗೆದ್ದು  ಬೀಗಿದೆ. ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 18 ರನ್‌ಗಳಿಂದ ಸೋಲಿಸಿದೆ. ಆದರೆ ಬಾಂಗ್ಲಾದೇಶ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಕೇವಲ 3 ರನ್‌ಗಳಿಂದ ಸೋಲನುಭವಿಸಿದೆ.

ಬಾಂಗ್ಲಾದ ವಿರುದ್ಧ ಸೋತ ಮಾತ್ರಕ್ಕೆ ಭಾರತವನ್ನು ಅಲ್ಲಗಳೆಯುವಂತಿಲ್ಲ. ಎಲ್ಲ ವಿಭಾಗದಲ್ಲೂ ಭಾರತ ತಂಡ ಸದೃಢವಾಗಿಯೇ ಇದೆ. ಬ್ಯಾಟಿಂಗ್ ನಲ್ಲಿ ಸೌಮ್ಯಾ ತಿವಾರಿ, ಉಪನಾಯಕಿ ಶ್ವೇತಾ ಸೆಹ್ರಾವತ್‌, ಜಿ.ವಿ. ತೃಶಾ ಬಲ ತುಂಬಿದರೆ, ಬೌಲಿಂಗ್‌ನಲ್ಲಿ ಹರ್ಲಿ ಗಾಲಾ, ಸೋನಮ್‌ ಯಾದವ್‌, ಮನ್ನತ್‌ ಕಶ್ಯಪ್‌ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇವರಲ್ಲದೆ ಅರ್ಚನಾ ದೇವಿ, ಪ್ರಾಶ್ವಿ ಚೋಪ್ರಾ, ಶಭ್ನಂ ಅವರನ್ನು ಕಡೆಗಣಿಸುವಂತಿಲ್ಲ. ಜತೆಗೆ ಅನುಭವಿ ಶಫಾಲಿ ಮತ್ತು ರಿಚಾ ಉಪಸ್ಥಿತಿ ತಂಡಕ್ಕೆ ವರವಾಗಿದೆ.

ಇದೇ ರೀತಿಯ ಸಾಂಘಿಕ ಪ್ರದರ್ಶನವನ್ನು ವಿಶ್ವಕಪ್‌ನಲ್ಲೂ ತೋರಿದಲ್ಲಿ ಭಾರತ ಕಪ್‌ ಎತ್ತುವುದರಲ್ಲಿ ಅನುಮಾನವಿಲ್ಲ.

ಭಾರತ ತಂಡ: ಶಫಾಲಿ ವರ್ಮ(ನಾಯಕಿ), ಶ್ವೇತಾ ಸೆಹ್ರಾವತ್‌ (ಉಪ ನಾಯಕಿ), ರಿಚಾ ಘೋಶ್‌(ವಿಕೆಟ್‌ ಕೀಪರ್‌), ಜಿ. ತಿೃಷಾ, ಸೌಮ್ಯಾ ತಿವಾರಿ, ಸೋನಿಯಾ ಮೆಹ್ದಿಯಾ, ಹರ್ಲಿ ಗಾಲಾ, ಹೃಶಿತಾ ಬಸು (ವಿಕೆಟ್‌ ಕೀಪರ್‌), ಸೋನಮ್‌ ಯಾದವ್‌, ಮನ್ನತ್‌ ಕಶ್ಯಪ್‌, ಅರ್ಚನಾ ದೇವಿ, ಪ್ರಾಶ್ವಿ ಚೋಪ್ರಾ, ಟಿಟಾಸ್‌ ಸಾದು, ಫಲಕ್‌ ನಾಜ್‌, ಶಭ್ನಂ ಎಂ.ಡಿ.

-ಸುಶ್ಮಿತಾ ನೇರಳಕಟ್ಟೆ

ಟಾಪ್ ನ್ಯೂಸ್

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

trodisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

Odisha Train Accident; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

Odisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

DAIRY FARMING

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

ADITHYA ROA

Mangalore ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆದಿತ್ಯ ವಿರುದ್ಧ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC INDIA

ICC WTC Final: ಫೈನಲ್‌ ಭಾರತದ ಸ್ಪಿನ್‌ ದಾಳಿ ಕುರಿತು ಆಸೀಸ್‌ ಚಿಂತನೆ

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

trodisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

Odisha Train Accident; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

Odisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ