ಬಾಕ್ಸಿಂಗ್ ಡೇ ಕದನ ಗೆದ್ದ ಭಾರತ


Team Udayavani, Dec 30, 2018, 3:51 AM IST

boxing.jpg

ಮೆಲ್ಬೋರ್ನ್: ಆತಿಥೇಯ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ 137 ರನ್ ಗಾಲ ಅಂತರದಿಂದ ಗೆದ್ದು ಇದೇ ಮೊದಲ ಬಾರಿಗೆ ಬಾಕ್ಸಿಂಗ್ ಡೇ ಪಂದ್ಯ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಭಾರತ ಬಾರ್ಡರ್ – ಗಾವಸ್ಕರ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. 

ನಾಲ್ಕನೇ ದಿನದಾಟದ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 258 ರನ್ ಮಾಡಿದ್ದ ಆಸ್ಟ್ರೇಲಿಯಾ ರವಿವಾರದ ಆಟದಲ್ಲಿ  ಕೇವಲ 3  ರನ್ ಸೇರಿಸಿ ಸೋಲೊಪ್ಪಿಕೊಂಡಿತು. ದಿನದಾಟದ ಆರಂಭದಲ್ಲಿ ಕಾಣಿಸಿಕೊಂಡ ಮಳೆ ಭಾರತದ ಗೆಲುವಿಗೆ ಅಡ್ಡಲಾಗಿತ್ತು. ಆದರೆ ಭೋಜನ ಸಮಯದ ನಂತರ ನಿಂತ ಮಳೆಯಿಂದಾಗಿ ಮತ್ತೆ ಆರಂಭವಾದ ಆಟದಲ್ಲಿ ಭಾರತ ಕೇವಲ 4.3 ಓವರ್ ನಲ್ಲಿ ಆಸೀಸ್ ನ ಕೊನೆಯ ಎರಡು ವಿಕೆಟ್ ಪಡೆದು ಮೆಲ್ಬೋರ್ನ್ ಅಂಗಳದಲ್ಲಿ ವಿಜಯ ಪತಾಕೆ ಹರಿಸಿತು. 

ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದು ಭಾರತದ ಗೆಲುವಿಗೆ ಕಾರಣರಾದ ಜಸ್ಪ್ರೀತ್ ಬುಮ್ರಾಹ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜರಾದರು.

ಸಂಕ್ಷಿಪ್ತ ಸ್ಕೊರ್ : ಭಾರತ ಪ್ರಥಮ ಇನ್ನಿಂಗ್ಸ್; 7 ವಿಕೆಟ್ ಗೆ 443 ಡಿಕ್ಲೇರ್ 
ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್ : 151
ಭಾರತ ದ್ವಿತೀಯ ಇನ್ನಿಂಗ್ಸ್: 8 ವಿಕೆಟ್ ಗೆ 106 ಡಿಕ್ಲೇರ್ 
ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್; 261  

ಎಕ್ಸ್ಟ್ರಾ ಇನ್ನಿಂಗ್ಸ್
*ವಿರಾಟ್ ಕೊಹ್ಲಿ ವಿದೇಶಿ ನೆಲದಲ್ಲಿ ಅತೀ ಹೆಚ್ಚು ಟೆಸ್ಟ್ ಗೆಲುವು ಕಂಡ ಭಾರತೀಯ ನಾಯಕನೆಂಬ ಗಂಗೂಲಿ ದಾಖಲೆ ಸರಿದೂಗಿಸಿದರು . ಕೊಹ್ಲಿ ಒಟ್ಟು 24 ಪಂದ್ಯಗಳಿಂದ 11 ಗೆಲುವು. ಗಂಗೂಲಿ 28 ಪಂದ್ಯಗಳಿಂದ 11 ಗೆಲುವು. 
*  ಈ ಕ್ಯಾಲೆಂಡರ್ ವರ್ಷದಲ್ಲಿ ಭಾರತ ಅತೀ ಹೆಚ್ಚು ಅಂದರೆ 4 ವಿದೇಶಿ ಗೆಲುವು ಕಂಡಿತು. ( ಜೋಹಾನ್ಸ್ ಬರ್ಗ್, ಟ್ರೆಂಟ್ ಬ್ರಿಜ್, ಅಡಿಲೇಡ್, ಮೆಲ್ಬೋರ್ನ್ ) ಈ ಹಿಂದೆ 1968ರಲ್ಲಿ ಭಾರತ 3 ವಿದೇಶಿ ಗೆಲುವು ದಾಖಲಿಸಿತ್ತು. 
* ನಾಯಕ ಕೊಹ್ಲಿಯ ‘ ಟಾಸ್ ವಿನ್ ಮ್ಯಾಚ್ ವಿನ್ ‘ ಮತ್ತೆ ಮುಂದುವರಿಯಿತು. ಕೊಹ್ಲಿ ನಾಯಕನಾಗಿ ಒಟ್ಟು21 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದು 18 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ. 3 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. ವಿದೇಶದಲ್ಲಿ9 ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಅದರಲ್ಲಿ 8 ರಲ್ಲಿ ಭಾರತ ವಿಜಯಿಯಾಗಿದೆ. ಬಾಂಗ್ಲಾದೇಶ ವಿರುದ್ದದ ಒಂದು ಪಂದ್ಯ ಡ್ರಾ ಆಗಿದೆ. 
* ಜಸ್ಪ್ರೀತ್ ಬುಮ್ರಾಹ್ ಪಾದಾರ್ಪಣೆ ಮಾಡಿದ ವರ್ಷದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ದಾಖಲೆ ಬರೆದರು. (48 ವಿಕೆಟ್ ) ಬುಮ್ರಾಹ್ ಇದುವರೆಗೆ ಭಾರತದ  ನೆಲದಲ್ಲಿ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ ಎನ್ನುವುದನ್ನು ಗಮನಿಸಬೇಕು.  
* ಬುಮ್ರಾಹ್ ಆಸ್ಟ್ರೇಲಿಯಾದಲ್ಲಿ ಒಂದು ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ವೇಗದ ಬೌಲರ್ ಆಗಿ ಮೂಡಿಬಂದರು. ( 9) ಈ ಹಿಂದೆ ಕಪಿಲ್ ದೇವ್ ಮತ್ತು ಅಜಿತ್ ಅಗರ್ಕರ್ ತಲಾ 8 ವಿಕೆಟ್ ಪಡೆದ ಸಾಧನೆ ಮಾಡಿದ್ದರು. 
* ರಿಷಭ್ ಪಂಥ್ ಪಾದಾರ್ಪಣೆ ವರ್ಷದಲ್ಲಿ ವಿಕೆಟ್ ಹಿಂದೆ  ಅತೀ  ಹೆಚ್ಚು ಬಳಿ ಪಡೆದ ಬ್ರಾಡ್ ಹ್ಯಾಡಿನ್ ದಾಖಲೆಯನ್ನು ಸರಿದೂಗಿಸಿದರು ( 42)
*ಇಶಾಂತ್ ಶರ್ಮ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 6ನೇ ಬೌಲರ್ ಎಂದೆನಿಸಿದರು( 267) ಇಶಾಂತ್  ಆಸ್ಟ್ರೇಲಿಯಾ ನಾಥನ್ ಲಿಯೋನ್ ವಿಕೆಟ್ ಪಡೆಯುದರೊಂದಿಗೆ ಬಿಷನ್ ಸಿಂಗ್ ಬೇಡಿಯವರ ದಾಖಲೆ ಮುರಿದರು. (ಬೇಡಿ 266)

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.