T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Team Udayavani, May 6, 2024, 1:23 PM IST
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀ ಗ್(ಐಪಿಎಲ್) ಮುಗಿದ ಬಳಿಕ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಜೂನ್ 1ರಿಂದ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ಚುಟುಕು ಕ್ರಿಕೆಟ್ ವಿಶ್ವಕಪ್ ಆರಂಭವಾಗಲಿದೆ.
ಟಿ20 ವಿಶ್ವಕಪ್ ಗಾಗಿ ಈಗಾಗಲೇ ಹಲವು ದೇಶಗಳು ತಮ್ಮ ಜೆರ್ಸಿ ಕಿಟ್ ಗಳನ್ನು ಬಹಿರಂಗಪಡಿಸಿದೆ. ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ತಂಡಗಳು ಟಿ20 ವಿಶ್ವಕಪ್ ಗಾಗಿ ಜೆರ್ಸಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ನ್ಯೂಜಿಲ್ಯಾಂಡ್ ತಂಡವು ಹಳೆಯ ವಿಶ್ವಕಪ್ ಜೆರ್ಸಿಯನ್ನು ಈ ಬಾರಿ ಧರಿಸಲಿದೆ.
ಬಿಸಿಸಿಐ ವಿಶ್ವಕಪ್ ಗಾಗಿ ಈಗಾಗಲೇ ತಂಡವನ್ನು ಪ್ರಕಟಿಸಿದೆ. 15 ಜನರ ತಂಡವನ್ನು ಪ್ರಕಟಿಸಿದ್ದು, ರೋಹಿತ್ ಶರ್ಮಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಉಪ ನಾಯಕರಾಗಿದ್ದು, ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅವರು ವಿಕೆಟ್ ಕೀಪರ್ ಗಳಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಟಿ20 ವಿಶ್ವಕಪ್ ಜೆರ್ಸಿ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ. ಲೀಕ್ ಆದ ಚಿತ್ರಗಳು ಜೆರ್ಸಿಯು ವಿ-ಶೇಪ್ ಕುತ್ತಿಗೆಯ ಮೇಲೆ ತ್ರಿವರ್ಣದ ಪಟ್ಟಿಗಳನ್ನು ಹೊಂದಿದೆ. ನೀಲಿ ಜೆರ್ಸಿಯು ಕೇಸರಿ ತೋಳುಗಳನ್ನು ಹೊಂದಿದೆ. ಟೀಂ ಇಂಡಿಯಾದ ಕಿಟ್ ಪ್ರಾಯೋಜಕರಾದ ಅಡಿಡಾಸ್ ನ ಲೋಗೋ ಕೂಡಾ ಕಾಣಬಹುದು.
Team India jersey for T20 World Cup 2024#PBKSvCSK #T20WorldCup24 pic.twitter.com/EokA9AHYTF
— TATA IPL 2024 Commentary #IPL2024 (@TATAIPL2024Club) May 5, 2024
ಟೀಮ್ ಇಂಡಿಯಾದ ಹೊಸ ಕಿಟ್ ಸೋಷಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿರುವುದು ಇದೇ ಮೊದಲಲ್ಲ, ಹಿಂದೆಯೂ ಇದೇ ರೀತಿ ಆಗಿತ್ತು.
ಹೊಸ ಜೆರ್ಸಿಗೆ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಹಲವರು ಜೆರ್ಸಿ ಉತ್ತಮವಾಗಿದೆ ಎಂದರೆ, ಮತ್ತೆ ಹಲವರು ಇದು ತುಂಬಾ ಕೆಟ್ಟದಾಗಿದೆ, ಯಾರು ಇದನ್ನು ವಿನ್ಯಾಸಗೊಳಿಸಿದವರು ಎಂದು ಝಾಡಿಸಿದ್ದಾರೆ.
ಟಿ20 ವಿಶ್ವಕಪ್ ಗಾಗಿ ಭಾರತ ತಂಡ
ರೋಹಿತ್ ಶರ್ಮಾ (ನಾ), ಹಾರ್ದಿಕ್ ಪಾಂಡ್ಯ (ಉ.ನಾ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಮೀಸಲು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
IPL ಇಂದು ಲೀಗ್ ಪಂದ್ಯಗಳಿಗೆ ತೆರೆ: KKR vs RR ಟೇಬಲ್ ಟಾಪರ್ಗಳ ಸೆಣಸಾಟ
T20 ವಿಶ್ವಕಪ್: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್ಗೆ
IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!
ಇಟಾಲಿಯನ್ ಓಪನ್ ಟೆನಿಸ್ : ಜರ್ರಿ-ಜ್ವೆರೇವ್ ನಡುವೆ ಫೈನಲ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!