ಅಂತಿಮ ಪಂದ್ಯದಲ್ಲೂ ಟಿಂ ಇಂಡಿಯಾ ಕಮಾಲ್: ಐತಿಹಾಸಿಕ ಕ್ಲೀನ್ ಸ್ವೀಪ್


Team Udayavani, Feb 2, 2020, 4:08 PM IST

team

ಮೌಂಟ್ ಮೌಂಗನಿ: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಟಿ20 ಪಂದ್ಯ ಗೆದ್ದ ಟೀಂ ಇಂಡಿಯಾ ಐತಿಹಾಸಿಕ ಸರಣಿ ಗೆದ್ದು ಬೀಗಿದೆ.

ಅಂತಿಮ ಪಂದ್ಯವನ್ನು 7 ರನ್ ಅಂತರದಿಂದ ಗೆದ್ದ ಟೀಂ ಇಂಡಿಯಾ 5-0 ಅಂತರದಿಂದ ಸರಣಿಯನ್ನು ಜಯಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ163 ರನ್ ಗಳಿಸಿತು. ಇದನ್ನು ಬೆನ್ನತ್ತಿದ ಕಿವೀಸ್ 9 ವಿಕೆಟ್ ಕಳೆದುಕೊಂಡು 156 ರನ್ ಗಳಿಸಲಷ್ಟೇ ಶಕ್ತವಾಯಿತು.

ಭಾರತ ಇಂದು ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ ಕಾರಣ ರೋಹಿತ್ ಶರ್ಮಾ ನಾಯಕತ್ವ ವಹಿಸಿದರು. ಆರಂಭಿಕರಾಗಿ ಸಂಜು ಸ್ಯಾಮ್ಸನ್ ಮತ್ತು ರಾಹುಲ್ ಕಣಕ್ಕಿಳಿದರು. ಸಂಜು ಮತ್ತೊಂದು ಅವಕಾಶವನ್ನು ವ್ಯರ್ಥ ಮಾಡಿದರೆ, ರಾಹುಲ್ 45 ರನ್ ಗಳಿಸಿದರು.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ರೋಹಿತ್ 60 ರನ್ ಗಳಿಸಿದರು. ಈ ವೇಳೆ ಸ್ನಾಯು ಸೆಳೆತಕ್ಕೆ ಒಳಗಾದ ಅವರು ಮೈದಾನ ತೆರೆದರು. ಅಂತಿಮವಾಗಿ ಅಯ್ಯರ್ 33 ರನ್ ಮತ್ತು ಮನೀಷ್ ಪಾಂಡೆ ನಾಲ್ಕು ಎಸೆತದಲ್ಲಿ 11 ರನ್ ಬಾರಿಸಿದರು.

ಸಾಧಾರಣ ಗುರಿಯನ್ನು ಬೆನ್ನತ್ತಿದ ಕಿವೀಸ್ ಆರಂಭದಲ್ಲಿಯೇ ಆಘಾತ ಅನುಭವಿಸಿತು. ತಂಡ ಮೊತ್ತ 17 ರನ್ ಆಗುವಷ್ಟರಲ್ಲಿ ಮೂವರು ಔಟ್ ಆಗಿದ್ದರು. ನಂತರ ಜೊತೆಯಾಟವಾಡಿದ ಟೇಲರ್ ಮತ್ತು ಟಿಮ್ ಸೀಫರ್ಟ್ 99 ರನ್ ಜೊತೆಯಾಟವಾಡಿದರು. ಇಬ್ಬರೂ ತಲಾ ಅರ್ಧಶತಕ ಬಾರಿಸಿದರು. ಒಂದು ಹಂತದಲ್ಲಿ ಕಿವೀಸ್ ಸುಲಭ ಜಯದತ್ತ ಹೆಜ್ಜೆ ಹಾಕಿತ್ತು.

50 ರನ್ ಗಳಿಸಿದ್ದ ಸೀಫರ್ಟ್ ಸೈನಿ ಬಲೆಗೆ ಬೀಳುವುದರೊಂದಿಗೆ ಕಿವೀಸ್ ಕೊಲ್ಯಾಪ್ಸ್ ಆರಂಭವಾಯಿತು. ಟೇಲರ್ ಕೂಡಾ 53 ರನ್ ಗಳಿಸಿ ಔಟಾದರು. ಭಾರತೀಯ ಬೌಲರ್ ಗಳ ಕರಾರುವಾಕ್ ದಾಳಿಗೆ ನಲುಗಿದ ಕಿವೀಸ್ ಅಂತಿಮವಾಗಿ 156 ರನ್ ಅಷ್ಟೇ ಗಳಿಸಿತು.

ಭಾರತದ ಪರ ಬುಮ್ರಾ ಮೂರು ವಿಕೆಟ್ ಪಡೆದರೆ, ಸೈನಿ ಮತ್ತು ಶಾರ್ದೂಲ್ ತಲಾ ಎರಡು ವಿಕೆಟ್ ಪಡೆದರು. ಬುಮ್ರಾ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರೆ, ಕೆ ಎಲ್ ರಾಹುಲ್ ಸರಣಿ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

ರಾಹುಲ್ ಗೆ ನಾಯಕತ್ವ

ರೋಹಿತ್ ಗಾಯದಿಂದ ಮೈದಾನ ತೊರೆದ ಕಾರಣ ಫೀಲ್ಡಿಂಗ್ ವೇಳೆ ಕನ್ನಡಿಗ ಕೆ ಎಲ್ ರಾಹುಲ್ ನಾಯಕತ್ವದ ಹೊಣೆ ಹೊತ್ತರು. ಅದೃಷ್ಟವೆಂದರೆ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಕಂಡರು ಕೂಡ.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.