ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ತಂಡದ ಆಯ್ಕೆ ಸವಾಲು


Team Udayavani, Jul 19, 2019, 5:46 AM IST

IMD

ಮುಂಬಯಿ: ವಿಶ್ವಕಪ್‌ ಸೆಮಿಫೈನಲ್‌ ಆಘಾತದಿಂದ ಇನ್ನಷ್ಟೇ ಹೊರಬರಬೇಕಿರುವ ಟೀಮ್‌ ಇಂಡಿಯಾ, ಇನ್ನು ಕೆಲವೇ ದಿನಗಳಲ್ಲಿ ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ಹೊರಡಲಿದೆ.

ಇದಕ್ಕಾಗಿ ತಂಡದ ಆಯ್ಕೆ ಪ್ರಕ್ರಿಯೆ ರವಿವಾರ ನಡೆಯಲಿದ್ದು, ಎಂ.ಎಸ್‌.ಕೆ. ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿ ಮುಂದೆ ಅನೇಕ ಜಟಿಲ ಸಂಗತಿಗಳನ್ನು ಇತ್ಯರ್ಥಗೊಳಿಸುವ ಸವಾಲು ಕಾದಿದೆ.

ಇದರಲ್ಲಿ ಮುಖ್ಯವಾಗಿರುವುದು ಹಿರಿಯ ಆಟಗಾರ ಮಹೇಂದ್ರ ಸಿಂಗ್‌ ಧೋನಿ ಅವರನ್ನು ತಂಡದಲ್ಲಿ ಮುಂದುವರಿಸಬೇಕೇ, ಬೇಡವೇ ಎಂಬುದು. ಹಾಗೆಯೇ ನಾಯಕ ವಿರಾಟ್‌ ಕೊಹ್ಲಿ, ಸೀಮರ್‌ ಜಸ್‌ಪ್ರೀತ್‌ ಬುಮ್ರಾ ಮೊದಲಾದವರನ್ನು ಪೂರ್ಣ ಪ್ರವಾಸಕ್ಕೆ ಆರಿಸಬೇಕೇ ಅಥವಾ ವಿಶ್ರಾಂತಿ ನೀಡಬೇಕೇ ಎಂಬುದು.

ಈ ಪ್ರವಾಸದ ವೇಳೆ 3 ಟಿ20 (ಆ. 3-6), 3 ಏಕದಿನ (ಆ. 8-14) ಹಾಗೂ 2 ಟೆಸ್ಟ್‌ ಪಂದ್ಯಗಳನ್ನು (ಆ. 22-ಸೆ. 3) ಆಡಲಾಗುವುದು. ಟೆಸ್ಟ್‌ ಪಂದ್ಯಗಳು “ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌’ ವ್ಯಾಪ್ತಿಗೆ ಬರುವುದರಿಂದ ಪೂರ್ಣ ಸಾಮರ್ಥ್ಯದ ತಂಡವನ್ನೇ ಆರಿಸಬೇಕಾದ ಅಗತ್ಯವಿದೆ. ಹಾಗೆಯೇ ಮುಂದಿನ ವರ್ಷ ಟಿ20 ವಿಶ್ವಕಪ್‌ ಪಂದ್ಯಾವಳಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ತಂಡವನ್ನು ಸಜ್ಜುಗೊಳಿಸಬೇಕಿದೆ. ಈ ಎಲ್ಲ ಅಂಶಗಳನ್ನು ಗಮನ ದಲ್ಲಿರಿಸಿ ತಂಡವನ್ನು ಅಂತಿಮ ಗೊಳಿಸಬೇಕಾಗುತ್ತದೆ.

ಒಂದು ವೇಳೆ ಕೊಹ್ಲಿಗೆ ತುಸು ವಿಶ್ರಾಂತಿ ನೀಡುವುದಾದರೆ ಅಥವಾ ವಿಭಿನ್ನ ನಾಯಕರ ಪ್ರಯೋಗಕ್ಕೆ ಮುಂದಾಗುವುದಾದರೆ ರೋಹಿತ್‌ ಶರ್ಮ ಅವರಿಗೆ ಏಕದಿನ, ಟಿ20 ನಾಯಕತ್ವ ಲಭಿಸಲೂಬಹುದು.

ಧೋನಿ ಭವಿಷ್ಯದ ದಿಕ್ಸೂಚಿ
38ರ ಹರೆಯದ ಮಹೇಂದ್ರ ಸಿಂಗ್‌ ಧೋನಿ ತಮ್ಮ ಫಿನಿಶಿಂಗ್‌ ಸಾಮರ್ಥ್ಯವನ್ನು ಕಳೆದುಕೊಂಡದ್ದು ಈಗಾಗಲೇ ಏಕದಿನ ವಿಶ್ವಕಪ್‌ನಲ್ಲಿ ಸಾಬೀತಾಗಿದೆ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯುವರೋ ಅಥವಾ ನಿವೃತ್ತಿಯ ನಿರ್ಧಾರವನ್ನೇನಾದರೂ ತೆಗೆದುಕೊಳ್ಳುವರೋ ಎಂಬುದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕಳೆದ ವರ್ಷಾಂತ್ಯ ವೆಸ್ಟ್‌ ಇಂಡೀಸ್‌ ಮತ್ತು ಆಸ್ಟ್ರೇಲಿಯ ವಿರುದ್ಧ ನಡೆದ ಟಿ20 ಸರಣಿಯಿಂದ ಧೋನಿ ಅವರನ್ನು ಕೈಬಿಡಲಾಗಿತ್ತು. ಹೀಗಾಗಿ ವಿಂಡೀಸ್‌ ಟಿ20 ಸರಣಿಗೂ ಅನುಮಾನ ಎಂದು ಭಾವಿಸಲಾಗಿದೆ. ಆಗ ಈ ಸ್ಥಾನ ರಿಷಭ್‌ ಪಂತ್‌ ಪಾಲಾಗಲಿದೆ.

ತಂಡದ ಮಧ್ಯಮ ಕ್ರಮಾಂಕ ವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸ್ಪಷ್ಟ ಯೋಜನೆ ಯೊಂದನ್ನು ರೂಪಿಸುವ ಅಗತ್ಯವೂ ಇದೆ. ವಿಶ್ವಕಪ್‌ನಲ್ಲಿ ಮಿಡ್ಲ್ ಆರ್ಡರ್‌ ವೈಫ‌ಲ್ಯ ಭಾರತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ವಿಜಯ್‌ ಶಂಕರ್‌ ವೈಫ‌ಲ್ಯ, ರಾಯುಡು ದಿಢೀರ್‌ ನಿವೃತ್ತಿಯಿಂದಾಗಿ ಈ ಜಾಗಕ್ಕೆ ಮನೀಷ್‌ ಪಾಂಡೆ, ಶ್ರೇಯಸ್‌ ಅಯ್ಯರ್‌, ಗಿಲ್‌ ಮೊದಲಾದವರು ರೇಸ್‌ನಲ್ಲಿದ್ದಾರೆ. ಪಾಂಡೆ ಸದ್ಯ “ಎ’ ತಂಡದ ನಾಯಕ ನಾಗಿ ವೆಸ್ಟ್‌ ಇಂಡೀಸ್‌ನಲ್ಲೇ ಸರಣಿ ಆಡುತ್ತಿದ್ದು, ಗಿಲ್‌ ಕೂಡ ಈ ತಂಡದಲ್ಲಿದ್ದಾರೆ.

ಆಯ್ಕೆ ಸಮಿತಿ ಸಭೆ ಮುಂದೂಡಿಕೆ
ಸುಪ್ರೀಂ ಕೋರ್ಟ್‌ ನೇಮಕ ಮಾಡಿದ ಆಡಳಿತಗಾರರ ಸಮಿತಿಯು ಕ್ರಿಕೆಟ್‌ ಆಯ್ಕೆ ಸಮಿತಿ ಸಭೆಯಲ್ಲಿ ಸುಧಾರಣೆ ತರುವ ನಿಟ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಿದೆ. ಆಡಳಿತಗಾರರ ಸಮಿತಿಯ ನಿರ್ದೇಶನದಂತೆ ಬಿಸಿಸಿಐ ಪ್ರಧಾನ ಕಾರ್ಯದರ್ಶಿಯ ಬದಲು ಆಯ್ಕೆಗಾರರ ಚೇರ್ಮನ್‌ ಆಯ್ಕೆ ಸಮಿತಿಯ ಸಂಚಾಲಕರಾಗಿರುತ್ತಾರೆ ಮತ್ತು ಸಭೆಯನ್ನು ಕರೆಯಲಿದ್ದಾರೆ. ಈ ಕಾರಣಕ್ಕಾಗಿ ಶುಕ್ರವಾರ ನಡೆಯಬೇಕಿದ್ದ ತಂಡದ ಆಯ್ಕೆ ರವಿವಾರಕ್ಕೆ ಮುಂದೂಡಲ್ಪಟ್ಟಿದೆ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.