ಬ್ರಹ್ಮಾವರ: ಟೆನಿಸ್ ಪಂದ್ಯಾವಳಿ ಆರಂಭ
Team Udayavani, Mar 16, 2018, 11:05 AM IST
ಬ್ರಹ್ಮಾವರ: ಇಲ್ಲಿನ ಎಸ್.ಎಂ.ಎಸ್. ಕಾಲೇಜು ಮತ್ತು ಮಂಗಳೂರು ವಿ.ವಿ. ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಟೆನಿಸ್ ಪಂದ್ಯಾವಳಿ ‘ಲಾರೆನ್ ಮತ್ತು ಎಸ್ಡಿಎಂ ಟ್ರೋಫಿ’ ಆರಂಭಗೊಂಡಿತು.
ಮಾಬುಕಳ ಬಿ.ಡಿ. ಶೆಟ್ಟಿ ಕಾಲೇಜಿನ ಪ್ರಾಂಶುಪಾಲ ಮೇಜರ್ ಜಿ. ಬಾಲ ಕೃಷ್ಣ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ, ಬ್ರಹ್ಮಾವರದಲ್ಲಿ ಟೆನಿಸ್ಗೆ ಸುಮಾರು 25 ವರ್ಷಗಳ ಇತಿಹಾಸವಿದೆ. ಇಂಥ ಗ್ರಾಮಾಂತರ ಭಾಗದಲ್ಲಿ 11 ಟೆನಿಸ್ ಕೋರ್ಟ್ಗಳಿರುವುದು ವೈಶಿಷ್ಟ್ಯವಾಗಿದೆ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೊ| ಎಂ.ಶ್ರೀಪಾದ್ ಅಧ್ಯಕ್ಷತೆ ವಹಿಸಿ ದ್ದರು. ಬ್ರಹ್ಮಾವರ ಓ.ಎಸ್.ಸಿ. ಎಜುಕೇಶನಲ್ ಸೊಸೈಟಿ ಖಜಾಂಚಿ ನೋವೆಲ್ ಡಿ’ಸೋಜಾ, ದೈ.ಶಿ. ಉಪನ್ಯಾಸಕ ಜೇಮ್ಸ್ ಒಲಿವೆರಾ ಉಪಸ್ಥಿತರಿದ್ದರು. ದೈ.ಶಿ. ಉಪನ್ಯಾಸಕ ವೆಂಕಟೇಶ್ ಭಟ್ ಸ್ವಾಗತಿಸಿ, ಅಶ್ವಿನ್ ಶೆಟ್ಟಿ ವಂದಿಸಿದರು. ಮಮತಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ