ಟೆನಿಸ್‌: ಚಿಗುರುತ್ತಿರುವ ಏಶ್ಯ ಭಾರತದಿಂದ ಯಾರು?


Team Udayavani, Feb 7, 2019, 12:30 AM IST

indian-tennis-federation.jpg

ವರ್ಷಾರಂಭದ ಗ್ರ್ಯಾನ್‌ಸ್ಲಾಮ್‌ “ಆಸ್ಟ್ರೇಲಿಯನ್‌ ಓಪನ್‌’ ವನಿತಾ ಸಿಂಗಲ್ಸ್‌ನಲ್ಲಿ ನವೋಮಿ ಒಸಾಕಾ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಜಪಾನಿ ಕ್ರೀಡಾತಾರೆಯ ಪಾಲಿಗೆ ಇದು ನಿಜಕ್ಕೂ ಅಮೋಘ ಸಾಧನೆ. 

ಏಶ್ಯದ ಆಟಗಾರ್ತಿಯೊಬ್ಬರು ಸತತ 2 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಗೆದ್ದರೆಂಬುದು ನಂಬಲೇಬೇಕಾದ ವಿದ್ಯಮಾನ. ವರ್ಷಾಂತ್ಯದ ಯುಎಸ್‌ ಓಪನ್‌ ಪ್ರಶಸ್ತಿ ಗೆದ್ದು ಮೊದಲ ಗ್ರ್ಯಾನ್‌ಸ್ಲಾಮ್‌ ಟ್ರೋಫಿಗೆ ಮುತ್ತಿಕ್ಕಿದ ಒಸಾಕಾ, ಈಗ “ಮೆಲ್ಬರ್ನ್ ಪಾರ್ಕ್‌ ಕ್ವೀನ್‌’ ಆಗಿಯೂ ಮೆರೆದಾಡಿದರು. ಕೇವಲ ಯುರೋಪಿಯನ್ನರ ಮೆರೆದಾಟಕ್ಕೆ ಮೀಸಲಾಗಿರುವ ಜಾಗತಿಕ ಟೆನಿಸ್‌ನಲ್ಲಿ ಏಶ್ಯನ್ನರೂ ದಿಟ್ಟ ಹೆಜ್ಜೆಗಳನ್ನಿಡುತ್ತಿರುವುದರ ಸೂಚನೆ ಇದೆಂಬುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕಿದೆ. ಹಾಗೆಯೇ ಈ ಸಂದರ್ಭದಲ್ಲಿ ಭಾರತದಿಂದ ಯಾರು ಎಂಬ ಪ್ರಶ್ನೆ ಮೂಡುವುದೂ ಸಹಜ.

ಚೀನೀ ಮಿಂಚು-ಲೀ ನಾ
ಡಬಲ್ಸ್‌ಗಿಂತ ಮಿಗಿಲಾಗಿ ಸಿಂಗಲ್ಸ್‌ ಪ್ರಶಸ್ತಿ, ಅದರಲ್ಲೂ ಗ್ರ್ಯಾನ್‌ಸ್ಲಾಮ್‌ ಸಿಂಗಲ್ಸ್‌ ಚಾಂಪಿಯನ್‌ ಆಗುವುದರಲ್ಲಿ ಹೆಚ್ಚಿನ ಗರಿಮೆ ಇದೆ. ಕೇವಲ ಮಾರ್ಟಿನಾ ನವ್ರಾಟಿಲೋವಾ, ಸ್ಟೆಫಿ ಗ್ರಾಫ್, ಸೆರೆನಾ ವಿಲಿಯಮ್ಸ್‌ ಮೊದಲಾದ ಯೂರೋಪ್‌, ಅಮೆರಿಕದ ಹೆಸರುಗಳೇ ಇಲ್ಲಿ ರಾರಾಜಿಸುತ್ತಿರುವಾಗ ಜಪಾನಿನ ನವೋಮಿ ಒಸಾಕಾ ಹೆಸರು ಹೊಳೆದದ್ದು ಏಶ್ಯನ್ನರಲ್ಲಿ ಸಹಜವಾಗಿಯೇ ರೋಮಾಂಚನವಾಗುತ್ತದೆ.

ಏಶ್ಯದ ಮಟ್ಟಿಗೆ ಟೆನಿಸ್‌ ಪ್ರಾಬಲ್ಯ ಹೊಂದಿರುವ ದೇಶಗಳೆಂದರೆ ಜಪಾನ್‌, ಚೀನ ಮತ್ತು ಭಾರತ. ಇವುಗಳಲ್ಲಿ ಭಾರತ ಹೊರತುಪಡಿಸಿ ಉಳಿದೆರಡು ದೇಶಗಳಲ್ಲಿ ಗ್ರ್ಯಾನ್‌ಸ್ಲಾಮ್‌ ಸಿಂಗಲ್ಸ್‌ ತಾರೆಗಳು ಮೂಡಿಬಂದಿವೆ. ಒಸಾಕಾಗಿಂತ ಮೊದಲು ಚೀನದ ಲೀ ನಾ ಅಮೋಘ ಸಾಧನೆಯೊಂದಿಗೆ ಸುದ್ದಿಯಾಗಿದ್ದರು. 2011ರ ಫ್ರೆಂಚ್‌ ಓಪನ್‌ ವನಿತಾ ಸಿಂಗಲ್ಸ್‌ ಪ್ರಶಸ್ತಿ ಗೆದ್ದ ಲೀ ನಾ ಹೊಸ ಇತಿಹಾಸವನ್ನೇ ಬರೆದರು. 

ಏಶ್ಯಕ್ಕೆ ಮೊದಲ ಸಿಂಗಲ್ಸ್‌ ಗ್ರ್ಯಾನ್‌ಸ್ಲಾಮ್‌ ತಂದಿತ್ತ ಹಿರಿಮೆ ಈ ಚೀನೀ ಆಟಗಾರ್ತಿಯದ್ದಾಗಿತ್ತು. ಇದು ಆಕಸ್ಮಿಕವಲ್ಲ ಎಂದು ನಿರೂಪಿಸಲೇನೋ ಎಂಬಂತೆ, 3 ವರ್ಷಗಳ ಬಳಿಕ ಆಸ್ಟ್ರೇಲಿಯನ್‌ ಓಪನ್‌ ಪ್ರಶಸ್ತಿಯನ್ನೂ ಗೆದ್ದರು. 2011 ಮತ್ತು 2013ರ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ರನ್ನರ್ ಅಪ್‌ ಎನಿಸಿದ ಹೆಗ್ಗಳಿಕೆಯೂ ಈಕೆಯ ಪಾಲಿಗಿದೆ. ಈಗ ಒಸಾಕಾ ಸರದಿ. ಹಾಗೆಯೇ ಪುರುಷರ ಸಿಂಗಲ್ಸ್‌ನಲ್ಲಿ ಜಪಾನಿನವರೇ ಆದ ಕೀ ನಿಶಿಕೊರಿ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯನ್ನು ಸಮೀಪಿಸುತ್ತ ಇದ್ದಾರೆ.

ಭಾರತದವರ ಡಬಲ್ಸ್‌ ಆಸಕ್ತಿ
ಭಾರತ ಕೂಡ ಟೆನಿಸ್‌ನಲ್ಲಿ ಸಾಕಷ್ಟು ಸುದ್ದಿ ಮಾಡಿರುವ ದೇಶ. ವಿಜಯ್‌ ಅಮೃತ್‌ರಾಜ್‌, ಲಿಯಾಂಡರ್‌ ಪೇಸ್‌, ಮಹೇಶ್‌ ಭೂಪತಿ, ಸಾನಿಯಾ ಮಿರ್ಜಾ, ರಾಮನಾಥನ್‌ ಕೃಷ್ಣನ್‌ ಅವರೆಲ್ಲ ಏಶ್ಯದ ಟಾಪ್‌-10 ಟೆನಿಸ್‌ ಸಾಧಕರ ಯಾದಿಯಲ್ಲಿ ಕಂಡು ಬರುವ ಭಾರತದ ಸಾಧಕರು. ಆದರೆ ಸಿಂಗಲ್ಸ್‌ನಲ್ಲಿ ಅಲ್ಲ.

ಜಪಾನ್‌ನಂಥ ಪುಟ್ಟ ದೇಶ ವಿಶ್ವ ಮಟ್ಟದಲ್ಲಿ ಮಿಂಚುತ್ತಿರುವಾಗ ಭಾರತದಿಂದ ಯಾರಾದರೂ ಈ ಎತ್ತರ ತಲುಪಬಾರದಿತ್ತೇ ಎಂಬ ಪ್ರಶ್ನೆ ಕಾಡುವುದು ಸಹಜ. ಭಾರತದ ಆಶಾಕಿರಣಗಳಾಗಿ ಗೋಚರಿಸುತ್ತಿರುವವರಲ್ಲಿ ಅಂಕಿತಾ ರೈನಾ, ಕರ್ಮನ್‌ ಕೌರ್‌ ಥಾಂಡಿ ಮಾತ್ರ. ಆದರೆ ಇಬ್ಬರೂ ವಿಶ್ವ ರ್‍ಯಾಂಕಿಂಗ್‌ನಲ್ಲಿ ಇನ್ನೂರರಾಚೆಯ ಸ್ಥಾನದಲ್ಲಿದ್ದಾರೆ. ಭಾರತೀಯ ಟೆನಿಸ್‌ ಫೆಡರೇಶನ್‌ ಚಿಗುರು ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರೂ ಎಲ್ಲರೂ ಡಬಲ್ಸ್‌ನಲ್ಲೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಇವರ ಆಸಕ್ತಿ ಸಿಂಗಲ್ಸ್‌ನತ್ತ ಹರಿಯುವುದು ಮುಖ್ಯ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.