ಟೆಸ್ಟ್ : ಭಾರತ “ಎ’ ಇನ್ನಿಂಗ್ಸ್ ಜಯಭೇರಿ
ಚತುರ್ದಿನ ಪಂದ್ಯ ಮೂರೇ ದಿನಕ್ಕೆ ಮುಕ್ತಾಯ
Team Udayavani, May 28, 2019, 6:00 AM IST
ಬೆಳಗಾವಿ: ಇಲ್ಲಿನ ಆಟೋ ನಗರದ ಕೆಎಸ್ಸಿಎ ಮೈದಾನದಲ್ಲಿ ನಡೆದ ಭಾರತ “ಎ’ ಮತ್ತು ಶ್ರೀಲಂಕಾ “ಎ’ ತಂಡಗಳ ನಡುವಿನ ಚತುರ್ದಿನ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಮುಗಿದಿದೆ. ಭಾರತ “ಎ’ ಇನ್ನಿಂಗ್ಸ್ ಹಾಗೂ 205 ರನ್ನುಗಳ ಭರ್ಜರಿ ಜಯ ಸಾಧಿಸಿದೆ.
ಸೋಮವಾರ ಭಾರತದ ಮಾರಕ ಬೌಲಿಂಗ್ಗೆ ತತ್ತರಿಸಿದ ಶ್ರೀಲಂಕಾ “ಎ’ ತಂಡದ ಆಟಗಾರರು ಪೆವಿಲಿಯನ್ ಹಾದಿ ಹಿಡಿದರು. ಮೂರನೇ ದಿನದಾಟದಲ್ಲಿ ಭಾರತ ಒಟ್ಟು 17 ವಿಕೆಟ್ಗಳನ್ನು ಕಬಳಿಸಿ ವಿಜಯದ ನಗೆ ಬೀರಿತು. ಮೊದಲ ಇನ್ನಿಂಗ್ಸ್ನಲ್ಲಿ ದ್ವಿಶತಕ ಬಾರಿಸಿದ್ದ ಅಭಿಮನ್ಯು ಈಶ್ವರನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಭಾರತ ಮೊದಲನೇ ಇನಿಂಗ್ಸ್ ನಲ್ಲಿ ಗಳಿಸಿದ್ದ ಬೃಹತ್ 622 ರನ್ (5 ವಿಕೆಟಿಗೆ ಡಿಕ್ಲೇರ್) ಬೆನ್ನತ್ತಿದ್ದ ಶ್ರೀಲಂಕಾ ಮೊದಲನೇ ಇನ್ನಿಂಗ್ಸ್ನಲ್ಲಿ 232 ರನ್ನುಗಳಿಗೆ ಆಲೌಟ್ ಆಯಿತು. ಫಾಲೋಆನ್ಗೆ ತುತ್ತಾಗಿ ಮತ್ತೆ ಬ್ಯಾಟಿಂಗಿಗೆ ಇಳಿದು 185ಕ್ಕೆ ಕುಸಿಯಿತು.
ರಾಹುಲ್ ಚಹರ್ ಮತ್ತೆ 4 ವಿಕೆಟ್ ಕಬಳಿಸಿದರು. ಮೊದಲ ಪಂದ್ಯದಲ್ಲೂ ಅವರಿಗೆ 4 ವಿಕೆಟ್ ಸಿಕ್ಕಿತ್ತು. ಅಂಕಿತ್ ರಜಪೂತ್, ಸಂದೀಪ್ ವಾರಿಯರ್, ಸ್ಪಿನ್ನರ್ ಜಯಂತ್ ಯಾದವ್ ತಲಾ 2 ವಿಕೆಟ್ ಉರುಳಿಸಿದರು.
ಸಂಕ್ಷಿಪ್ತ ಸ್ಕೋರ್: ಭಾರತ “ಎ’-5 ವಿಕೆಟಿಗೆ 622 ಡಿಕ್ಲೇರ್. ಶ್ರೀಲಂಕಾ “ಎ’-232 ಮತ್ತು 185.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ