ಲಂಕಾ ಟೆಸ್ಟ್ ತಂಡಕ್ಕೆ ತಿರಿಮನ್ನೆ,ನುವಾನ್ ಪ್ರದೀಪ್ ವಾಪಸ್
Team Udayavani, Dec 1, 2018, 6:15 AM IST
ಕೊಲಂಬೊ: ಮುಂಬರುವ ನ್ಯೂಜಿಲ್ಯಾಂಡ್ ಎದುರಿನ ಟೆಸ್ಟ್ ಸರಣಿಗೆ 17 ಸದಸ್ಯರ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಬ್ಯಾಟ್ಸ್ಮನ್ ಲಹಿರು ತಿರಿಮನ್ನೆ, ವೇಗಿಗಳಾದ ನುವಾನ್ ಪ್ರದೀಪ್, ಲಹಿರು ಕುಮಾರ ಅವರನ್ನು ಮರಳಿ ಕರೆಸಿಕೊಳ್ಳಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸದೀರ ಸಮರವಿಕ್ರಮ ಕೂಡ ಮರಳಿದ್ದಾರೆ.
32ರ ಹರೆಯದ ನುವಾನ್ ಪ್ರದೀಪ್ ಸೇರ್ಪಡೆಯಿಂದ ತಂಡದ ಬೌಲಿಂಗ್ ವಿಭಾಗಕ್ಕೆ ಹೆಚ್ಚಿನ ಬಲ ಬಂದಿದೆ. ಅವರು ಗಾಯಾಳಾಗಿ ವಿಶ್ರಾಂತಿಯಲ್ಲಿದ್ದರು. 21ರ ಹರೆಯದ ಲಹಿರು ಕುಮಾರ ಕಳೆದ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.
ಇಂಗ್ಲೆಂಡ್ ಎದುರಿನ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ದಿನೇಶ್ ಚಂಡಿಮಾಲ್ ಮರಳಿ ಶ್ರೀಲಂಕಾ ತಂಡದ ನೇತೃತ್ವ ವಹಿಸಲಿದ್ದಾರೆ. ಬೌಲಿಂಗ್ ಆ್ಯಕ್ಷನ್ ವಿವಾದಕ್ಕೆ ಸಿಲುಕಿರುವ ಅಖೀಲ ಧನಂಜಯ ಅವರನ್ನು ಕೈಬಿಡಲಾಗಿದೆ.
ನ್ಯೂಜಿಲ್ಯಾಂಡ್ ಪ್ರವಾಸದ ವೇಳೆ 2 ಟೆಸ್ಟ್, 3 ಏಕದಿನ ಹಾಗೂ ಏಕೈಕ ಟಿ20 ಪಂದ್ಯವನ್ನು ಆಡಲಾಗುವುದು. ಮೊದಲ ಟೆಸ್ಟ್ ಡಿ. 15ರಿಂದ ಕ್ರೈಸ್ಟ್ಚರ್ಚ್ನಲ್ಲಿ ಆರಂಭವಾಗಲಿದೆ.
ಶ್ರೀಲಂಕಾ ತಂಡ: ದಿನೇಶ್ ಚಂಡಿಮಾಲ್ (ನಾಯಕ), ದಿಮುತ್ ಕರುಣರತ್ನೆ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಏಂಜೆಲೊ ಮ್ಯಾಥ್ಯೂಸ್, ರೋಷನ್ ಸಿಲ್ವ, ನಿರೋಷನ್ ಡಿಕ್ವೆಲ್ಲ, ದನುಷ್ಕ ಗುಣತಿಲಕ, ಲಹಿರು ತಿರಿಮನ್ನೆ, ಸದೀರ ಸಮರವಿಕ್ರಮ, ದಿಲುÅವಾನ್ ಪೆರೆರ, ಲಕ್ಷಣ ಸಂದಕನ್, ಸುರಂಗ ಲಕ್ಮಲ್, ನುವಾನ್ ಪ್ರದೀಪ್, ಕಸುನ್ ರಜಿತ, ಲಹಿರು ಕುಮಾರ, ದುಷ್ಮಂತ ಚಮೀರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ