ಟೆಸ್ಟ್‌ ಸರಣಿ: ಶ್ರೀಲಂಕಾ ತಂಡದೆದುರು ಪಾಕಿಸ್ಥಾನಕ್ಕೆ ನಾಲ್ಕು ವಿಕೆಟ್‌ ಗೆಲುವು


Team Udayavani, Jul 20, 2023, 10:56 PM IST

1-wwqewe

ಗಾಲೆ: ಇಮಾಮ್‌ ಉಲ್‌ ಹಕ್‌ ಅವರ ಉಪಯುಕ್ತ ಆಟದಿಂದಾಗಿ ಪ್ರವಾಸಿ ಪಾಕಿಸ್ಥಾನ ತಂಡವು ಶ್ರೀಲಂಕಾ ತಂಡದೆದುರಿನ ಎರಡು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಗೆಲುವು ಸಾಧಿಸಿದೆ.

ಗೆಲ್ಲಲು 131 ರನ್‌ ಗಳಿಸುವ ಅವಕಾಶ ಪಡೆದಿದ್ದ ಪಾಕಿಸ್ಥಾನ ತಂಡವು ನಾಲ್ಕನೇ ದಿನದಾಟದ ಅಂತ್ಯಕ್ಕೆ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 48 ರನ್ನಿಗೆ 3 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಇಮಾಮ್‌ ಉಲ್‌ ಹಕ್‌ ಮತ್ತು ಬಾಬರ್‌ ಅಜಂ ಕ್ರೀಸ್‌ನಲ್ಲಿದ್ದರು.

ಅಂತಿಮ ದಿನದಾಟ ಆರಂಭಿಸಿದ ಇಮಾಮ್‌ ಮತ್ತು ಬಾಬರ್‌ ಎಚ್ಚರಿಕೆಯಿಂದ ಆಡಿ 31 ರನ್‌ ಪೇರಿಸಿದರು. ಈ ಹಂತದಲ್ಲಿ 24 ರನ್‌ ಗಳಿಸಿದ ಬಾಬರ್‌ ಔಟಾದರು. ಆಬಳಿಕ ಇಮಾಮ್‌ ಅವರನ್ನು ಸೇರಿಕೊಂಡ ಸೌದ್‌ ಶಕೀಲ್‌ ಐದನೇ ವಿಕೆಟಿಗೆ 43 ರನ್‌ ಪೇರಿಸಿ ತಂಡದ ಗೆಲುವನ್ನು ಖಚಿತಪಡಿಸಿದರು. ಗೆಲ್ಲಲು 9 ರನ್‌ ಗಳಿರುವಾಗ ಶಕೀಲ್‌ ಔಟಾದರು. ತಂಡ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದಾಗ ಇಮಾಮ್‌ 50 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಈ ಗೆಲುವಿನಿಂದ ಪಾಕಿಸ್ಥಾನವು ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಸರಣಿಯ ಎರಡನೇ ಪಂದ್ಯ ಕೊಲಂಬೋದಲ್ಲಿ ಜು. 24ರಿಂದ 28ರ ವರೆಗೆ ನಡೆಯಲಿದೆ. ಪಾಕಿಸ್ಥಾನ ಸರಿಯಾಗಿ ಒಂದು ವರ್ಷದ ಹಿಂದೆ ಗಾಲ್‌ನಲ್ಲಿ ನಡೆದ ಪಂದ್ಯದಲ್ಲಿ ಈ ಹಿಂದೆ ಗೆಲುವು ಸಾಧಿಸಿತ್ತು.

ಸಂಕ್ಷಿಪ್ತ ಸ್ಕೋರು: ಪಾಕಿಸ್ಥಾನ 461 ಮತ್ತು 133ಕ್ಕೆ 6 (ಇಮಾಮ್‌ 50 ಔಟಾಗದೆ, ಜಯಸೂರ್ಯ 56ಕ್ಕೆ 4); ಶ್ರೀಲಂಕಾ 312 ಮತ್ತು 279.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.