Test ಟೀಮ್‌ ರ್‍ಯಾಂಕಿಂಗ್‌: ಆಸ್ಟ್ರೇಲಿಯ ನಂ.1; ಎರಡಕ್ಕಿಳಿದ ಭಾರತ


Team Udayavani, Jan 6, 2024, 5:27 AM IST

1-dffsfsdf

ದುಬಾೖ: ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್‌ಟೌನ್‌ ಟೆಸ್ಟ್‌ ಪಂದ್ಯವನ್ನು ಎರಡೇ ದಿನಗಳಲ್ಲಿ ಗೆದ್ದು, ಸರಣಿಯನ್ನು ಸಮಬಲದಲ್ಲಿ ಮುಗಿಸಿದ ಹೊರತಾಗಿಯೂ ಭಾರತ ನೂತನ ಟೆಸ್ಟ್‌ ಟೀಮ್‌ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಕಳೆದುಕೊಂಡಿದೆ. ಆಸ್ಟ್ರೇಲಿಯ ನಂ.1 ತಂಡವಾಗಿ ಮೂಡಿಬಂದಿದೆ.

ಪಾಕಿಸ್ಥಾನ ವಿರುದ್ಧದ ತವರಿನ ಟೆಸ್ಟ್‌ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವುದೇ ಆಸ್ಟ್ರೇಲಿಯದ ಪ್ರಗತಿಗೆ ಕಾರಣ. ಅದೀಗ 2-0 ಮುನ್ನಡೆಯಲ್ಲಿದೆ. 3ನೇ ಪಂದ್ಯವನ್ನೂ ಗೆಲ್ಲುವ ಹಾದಿಯಲ್ಲಿದೆ. ಆಗ ಆಸ್ಟ್ರೇಲಿಯದ ಅಗ್ರಸ್ಥಾನ ಇನ್ನಷ್ಟು ಗಟ್ಟಿಯಾಗಲಿದೆ. ಸದ್ಯ ಆಸ್ಟ್ರೇಲಿಯ ಮತ್ತು ಭಾರತ ನಡುವೆ ಇರುವುದು ಒಂದೇ ಅಂಕದ ವ್ಯತ್ಯಾಸ. ಉಳಿದಂತೆ ಯಾವ ತಂಡಗಳ ರ್‍ಯಾಂಕಿಂಗ್‌ನಲ್ಲೂ ಬದಲಾವಣೆ ಆಗಿಲ್ಲ.

ಹಿಂದಿನ ರ್‍ಯಾಂಕಿಂಗ್‌ ಪರಿಷ್ಕರಣೆಯ ವೇಳೆ ಭಾರತ ಮತ್ತು ಆಸ್ಟ್ರೇಲಿಯ ಸಮಾನ 118 ಅಂಕಗಳನ್ನು ಹೊಂದಿದ್ದವು. ದಶಮಾಂಶ ಲೆಕ್ಕಾಚಾರದಲ್ಲಿ ಭಾರತ ಮುಂದಿತ್ತು. ಸೆಂಚುರಿಯನ್‌ನಲ್ಲಿ ಅನುಭವಿಸಿದ ಸೋಲು ಭಾರತಕ್ಕೆ ಹಿನ್ನಡೆಯಾಗಿ ಪರಿಣಮಿಸಿತು.

ಮುಂಬರುವ ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮತ್ತೆ ಅಗ್ರಸ್ಥಾನಕ್ಕೆ ಏರುವ ಅವಕಾಶ ಭಾರತಕ್ಕೆ ಎದುರಾಗಲಿದೆ.

ಟೆಸ್ಟ್‌ ಚಾಂಪಿಯನ್‌ಶಿಪ್‌
ಕೇಪ್‌ಟೌನ್‌ ಗೆಲುವಿನ ಬಳಿಕ ಭಾರತ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅಗ್ರಸ್ಥಾನಕ್ಕೆ ಬಂದಿದೆ. 4 ಟೆಸ್ಟ್‌ಗಳಲ್ಲಿ 2 ಗೆಲುವು ಸಾಧಿಸಿದ ಭಾರತ 54.16 ಸರಾಸರಿ ಅಂಕಗಳನ್ನು ಹೊಂದಿದೆ. ದಕ್ಷಿಣ ಆಫ್ರಿಕಾ 2ನೇ, ನ್ಯೂಜಿಲ್ಯಾಂಡ್‌ 3ನೇ ಮತ್ತು ಆಸ್ಟ್ರೇಲಿಯ 4ನೇ ಸ್ಥಾನದಲ್ಲಿವೆ.

ಆದರೆ ಭಾರತದ ಈ ಅಗ್ರಸ್ಥಾನ ಹೆಚ್ಚು ಕಾಲ ಉಳಿಯದು. ಕಾರಣ, ಪಾಕಿಸ್ಥಾನ ವಿರುದ್ಧದ ಸಿಡ್ನಿ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯ ಮೇಲುಗೈ ಸಾಧಿಸಿದೆ. ಅದು ಈ ಪಂದ್ಯವನ್ನು ಗೆದ್ದು ಸರಣಿಯನ್ನು 3-0 ಕ್ಲೀನ್‌ಸಿÌàಪ್‌ ಆಗಿ ವಶಪಡಿಸಿಕೊಳ್ಳುವುದು ಬಹುತೇಕ ಖಚಿತ. ಆಗ ಆಸ್ಟ್ರೇಲಿಯದ ಗೆಲುವಿನ ಸರಾಸರಿ 56.25ಕ್ಕೆ ಏರುತ್ತದೆ. ಭಾರತ ದ್ವಿತೀಯ ಸ್ಥಾನಕ್ಕೆ ಇಳಿಯುತ್ತದೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.