ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌: ಭಾರತದ ನಂ. 1 ಸ್ಥಾನ ಇನ್ನಷ್ಟು ಭದ್ರ


Team Udayavani, Oct 23, 2019, 12:20 AM IST

t-34

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯನ್ನು ಕ್ಲೀನ್‌ಸ್ವೀಪ್‌ ಮಾಡಿರುವ ಭಾರತ ಒಟ್ಟು ಐದು ಪಂದ್ಯಗಳಲ್ಲಿ ಭರ್ತಿ 240 ಅಂಕ ಕಲೆಹಾಕಿ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಭದ್ರಗೊಳಿಸಿದೆ.

ಮೂರು ಪಂದ್ಯಗಳ ಈ ಸರಣಿಯಲ್ಲಿ ಭಾರತ ಒಟ್ಟು 120 ಅಂಕ ಗಳಿಸಿದೆ. ಪ್ರತಿ ಟೆಸ್ಟ್‌ಗೆ 40 ಅಂಕ ನೀಡಲಾಗುತ್ತದೆ. ಎರಡು ಪಂದ್ಯಗಳ ಟೆಸ್ಟ್‌ ಸರಣಿಯಾಗಿದ್ದರೆ ಪ್ರತಿ ಟೆಸ್ಟ್‌ ಗೆ 60 ಅಂಕ ನೀಡಲಾಗುತ್ತದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯಾಗಿದ್ದರೆ ಪ್ರತಿ ಟೆಸ್ಟ್‌ಗೆ ತಲಾ 24 ಅಂಕ ನೀಡಲಾಗುತ್ತದೆ ಎಂದು ಐಸಿಸಿ ಪ್ರಕಟನೆಯಲ್ಲಿ ತಿಳಿಸಿದೆ.

ಟೆಸ್ಟ್‌ ಚಾಂಪಿಯನ್‌ಶಿಪ್‌ ಆರಂಭ ವಾದ ಬಳಿಕ ಭಾರತ ಅದ್ಭುತ ನಿರ್ವಹಣೆ ನೀಡುತ್ತ ಬಂದಿದೆ. ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲೂ ಟೀಮ್‌ ಇಂಡಿಯಾ ವೈಟ್‌ವಾಶ್‌ ಸಾಧನೆ ಮಾಡಿ ಮೆರೆದಿತ್ತು. ಒಟ್ಟಾರೆಯಾಗಿ ಆಡಿದ ಎರಡು ಟೆಸ್ಟ್‌ ಸರಣಿಗಳಲ್ಲಿ (ಒಟ್ಟು 5 ಪಂದ್ಯ) ಭಾರತ ಗರಿಷ್ಠ 240 ಅಂಕಗಳನ್ನು ಕಲೆಹಾಕಿದೆ.

ಭಾರತದ ಸರಣಿಯೊಂದಿಗೆ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ಗೆ ಕಾಲಿರಿಸಿತ್ತು. ಆದರೆ ಭಾರತದ ನೆಲದಲ್ಲಿ ಹೀನಾಯ ಸೋಲಿಗೆ ಗುರಿಯಾಗಿದೆ. ಅಂಕ ಖಾತೆ ತೆರೆಯಲಿಲ್ಲ.

ಬಾಂಗ್ಲಾ ವಿರುದ್ಧವೂ ಪ್ರಾಬಲ್ಯ
ಟೆಸ್ಟ್‌ನಲ್ಲಿ ನಂ.1 ತಂಡವಾದ ಭಾರತ ಮುಂದಿನ ಸರಣಿಯನ್ನು ಬಾಂಗ್ಲಾ ವಿರುದ್ಧ ಆಡಲಿದೆ. ತವರಿನಲ್ಲೇ ನಡೆ ಯುವ ಈ ಎರಡು ಪಂದ್ಯಗಳ ಸರಣಿಯನ್ನು ಗೆದ್ದು ಅಂಕಗಳನ್ನು ಇನ್ನಷ್ಟು ಹೆಚ್ಚಿಸುವ ಇರಾದೆಯಲ್ಲಿದೆ. ಈ ಸರಣಿ ನ. 14ರಿಂದ ಆರಂಭವಾಗಲಿದೆ. ಬಾಂಗ್ಲಾ ವಿರುದ್ಧ ಭಾರತ ಪ್ರಾಬಲ್ಯ ಮೆರೆಯುವುದು ಖಚಿತವೆಂದು ಹೇಳಬಹುದು. ಆದರೆ ಟೆಸ್ಟ್‌ ಪಂದ್ಯ ವಾಗಿರುವ ಕಾರಣ ಬಾಂಗ್ಲಾ ತೀವ್ರ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಶ್ರೀಲಕಾ ಮತ್ತು ನ್ಯೂಜಿಲ್ಯಾಂಡ್‌ 60 ಅಂಕಗಳೊಂದಿಗೆ ಅನಂತರದ ಸ್ಥಾನದಲ್ಲಿವೆ. ಈ ಎರಡು ತಂಡಗಳ ನಡುವಣ ಎರಡು ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲದಲ್ಲಿ ಅಂತ್ಯಗೊಂಡಿತ್ತು. ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ತಲಾ 56 ಅಂಕ ಗಳಿಸಿವೆ. ಈ 2 ತಂಡಗಳ ನಡುವಣ 5 ಪಂದ್ಯಗಳ ಆ್ಯಶಸ್‌ ಸರಣಿ 2-2 ಅಂತರದಿಂದ ಸಮಬಲದಲ್ಲಿ ಅಂತ್ಯಗೊಂಡಿತ್ತು.

2021ರಲ್ಲಿ ಫೈನಲ್‌
ಲೀಗ್‌ ಹಂತದ ಅಗ್ರ ಎರಡು ತಂಡಗಳು 2021ರ ಜೂನ್‌ನಲ್ಲಿ ಇಂಗ್ಲೆಂಡಿನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಗೆದ್ದ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್ಸ್‌ ಪಟ್ಟ ಪಡೆಯಲಿದೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.