ಸೈನಾ, ಶ್ರೀಕಾಂತ್ಗೆ ಸೋಲಿನ ಆಘಾತ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್
Team Udayavani, Aug 2, 2019, 5:44 AM IST
ಬ್ಯಾಂಕಾಕ್: ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಗುರುವಾರ ಭಾರತದ ತಾರಾ ಆಟಗಾರರ ಪತನವಾಗಿದೆ. ವನಿತಾ ಸಿಂಗಲ್ಸ್ನಲ್ಲಿ ಸೈನಾ ನೆಹ್ವಾಲ್, ಪುರುಷರ ಸಿಂಗಲ್ಸ್ನಲ್ಲಿ ಕೆ. ಶ್ರೀಕಾಂತ್ ತಮ್ಮ ಆಟ ಮುಗಿಸಿ ಕೂಟದಿಂದ ನಿರ್ಗಮಿಸಿದ್ದಾರೆ. ಆದರೆ ಪುರುಷರ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಕ್ವಾರ್ಟರ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಂಧು ಗೈರಲ್ಲಿ ಭಾರತದ ಪ್ರಮುಖ ಆಟಗಾರ್ತಿಯಾಗಿದ್ದ ಸೈನಾ ನೆಹ್ವಾಲ್ ಅವರನ್ನು ಜಪಾನಿನ ಸಯಾಕಾ ಟಕಹಾಶಿ 16-21, 21-11, 21-14 ಅಂತರದಿಂದ ಪರಾಭವಗೊಳಿಸಿದರು. ಟಕಹಾಶಿ ಈ ಕೂಟದಲ್ಲಿ ಯಾವುದೇ ಶ್ರೇಯಾಂಕ ಪಡೆದಿಲ್ಲ ಎಂಬುದು ಗಮನಾರ್ಹ.
ಗಾಯದ ಕಾರಣದಿಂದ ಸೈನಾ ನೆಹ್ವಾಲ್ ಕಳೆದ ಇಂಡೋನೇಶ್ಯ ಓಪನ್ ಮತ್ತು ಜಪಾನ್ ಓಪನ್ ಕೂಟದಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದಿದ್ದರು.
ವಿಶ್ವದ ನಂ. 10 ಆಟಗಾರ ಕೆ. ಶ್ರೀಕಾಂತ್ ಇಂಡೋನೇಶ್ಯದ ಖೊಸಿತ್ ಫೆತ್ಪ್ರದಾಬ್ ವಿರುದ್ಧ ದಿಟ್ಟ ಹೋರಾಟ ನೀಡಿ 3 ಗೇಮ್ಗಳಿಂದ ಎಡವಿದರು. ಮೊದಲ ಗೇಮ್ನಲ್ಲಿ 21-11 ಮೇಲುಗೈ ಸಾಧಿಸಿದರೂ ಅನಂತರದ ಗೇಮ್ಗಳಲ್ಲಿ 16-21, 12-21 ಅಂತರದಿಂದ ಹಿಂದುಳಿದರು.
ರಾಂಕಿರೆಡ್ಡಿ-ಚಿರಾಗ್ ಮುನ್ನಡೆ
ಪುರುಷರ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿ ರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ಭರವಸೆ ಮೂಡಿಸಿದ್ದಾರೆ. ಇವರು ಇಂಡೋನೇಶ್ಯದ ಫಜರ್ ಅಲ್ಫಿಯಾನ್-ಮುಹಮ್ಮದ್ ರಿಯಾನ್ ಅರ್ದಿಯಾಂತೊ ಜೋಡಿಯನ್ನು 21-17, 21-19ರಿಂದ ಪರಾಭವಗೊಳಿಸಿದರು.
ಪ್ರಣಯ್ ಪರಾಭವ
ದಿನದ ಕೊನೆಯ ಪಂದ್ಯದಲ್ಲಿ ಎಚ್.ಎಸ್. ಪ್ರಣಯ್ ಕೂಡ ಸೋಲಿನ ಸುದ್ದಿ ನೀಡಿದರು. ಜಪಾನಿನ ಕೆಂಟ ನಿಶಿಮೊಟೊ ವಿರುದ್ಧ 17-21, 10-21 ಅಂತರದಿಂದ ಕಳೆದುಕೊಂಡು ಕೂಟದಿಂದ ನಿರ್ಗಮಿಸಿದರು.
ಶುಭಂಕರ್ಗೆ ಸೋಲುಣಿಸಿದ ಪ್ರಣೀತ್
ಭಾರತೀಯರ ಮೇಲಾಟದಲ್ಲಿ ಬಿ. ಸಾಯಿಪ್ರಣೀತ್ 21-18, 21-19 ಅಂತರದಿಂದ ಶುಭಂಕರ್ ಡೇ ವಿರುದ್ಧ ಗೆದ್ದು ಬಂದರು. ಸಾಯಿ ಪ್ರಣೀತ್ ಕ್ವಾ.ಫೈನಲ್ನಲ್ಲಿ ಜಪಾನಿನ 7ನೇ ಶ್ರೇಯಾಂಕಿತ ಆಟಗಾರ ಕಾಂಟ ತ್ಸುನೆಯಾಮ ವಿರುದ್ಧ ಸೆಣಸಲಿದ್ದಾರೆ. ಆದರೆ ಪಾರುಪಳ್ಳಿ ಕಶ್ಯಪ್ ಚೈನೀಸ್ ತೈಪೆಯ ಚೋ ಟೀನ್ ಚೆನ್ ವಿರುದ್ಧ 9-21, 14-21 ಅಂಕಗಳಿಂದ ಎಡವಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ