ಐಪಿಎಲ್‌ ಕೆಲಸದ ಒತ್ತಡ ಯುವ ಪ್ರತಿಭೆಗಳ ರಕ್ಷಿಸಲು ಬಿಸಿಸಿಐ ಯತ್ನ


Team Udayavani, Apr 18, 2018, 7:30 AM IST

BCCI-iPL-2018.jpg

ಹೊಸದಿಲ್ಲಿ: ಐಪಿಎಲ್‌ನಲ್ಲಿ ಆಡುತ್ತಿರುವ ಭಾರತೀಯ ಕ್ರಿಕೆಟ್‌ನ ಭವಿಷ್ಯದ ಪ್ರತಿಭೆಗಳನ್ನು ರಕ್ಷಿಸಲು ಬಿಸಿಸಿಐ ಮುಂದಾಗಿದೆ. ಐಪಿಎಲ್‌ನಲ್ಲಿ ವೇಳಾಪಟ್ಟಿ ಬಿಗುವಿನಿಂದ ಕೂಡಿರುತ್ತದೆ. ಬಿಡುವು ಕಡಿಮೆಯಿರುತ್ತದೆ. ಸಹಜವಾಗಿ ಯುವ ಪ್ರತಿಭೆಗಳ ಮೇಲೆ ಕಾರ್ಯದೊತ್ತಡ ಇರುತ್ತದೆ. ಇದರಿಂದ ಈ ಆಟಗಾರರು ಸಮಸ್ಯೆಗೊಳಗಾಗುವುದನ್ನು ತಪ್ಪಿಸಲು ಬಿಸಿಸಿಐ ಇಂತಹ ತೀರ್ಮಾನ ತೆಗೆದುಕೊಂಡಿದ್ದು, ಅದಕ್ಕಾಗಿ 23 ಪ್ರತಿಭೆಗಳ ಮೂರು ಹಂತದ ಪಟ್ಟಿ ತಯಾರಿಸಿದೆ.

ಉದಾಹರಣೆಗೆ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದಲ್ಲಿ ಆಡುತ್ತಿರುವ ವೇಗಿ ಶಿವಂ ಮವಿಗೆ ತಂಡದ ತರಬೇತುದಾರರು ಅಭ್ಯಾಸದ ವೇಳೆ 60ರಿಂದ 100 ಎಸೆತಗಳನ್ನು ಎಸೆಯುವಂತೆ ಹೇಳಬಹುದು. ಆರ್‌ಸಿಬಿಯಲ್ಲಿ ಆಡುತ್ತಿರುವ ವೇಗಿ ನವದೀಪ್‌ ಸೈನಿಗೂ ಹೀಗೆಯೇ ಹೇಳಬಹುದು. ಇಂತಹ ಸಂದರ್ಭದಲ್ಲಿ ಬಿಸಿಸಿಐ ಮಧ್ಯಪ್ರವೇಶಿಸಿ ಈ ಪ್ರತಿಭೆಗಳು ನಮ್ಮ ಆಸ್ತಿ, ಅವರಿಗೆ ಹೆಚ್ಚಿನ ಒತ್ತಡ ಹೇರಬೇಡಿ ಎಂದು ಎಚ್ಚರಿಸುತ್ತದೆ. ಭುವನೇಶ್ವರ್‌ ಕುಮಾರ್‌ನಂತ ಬೌಲರ್‌ಗಳು ಅವರ ದೇಹಸ್ಥಿತಿ ಮತ್ತು ಕೆಲಸದ ಒತ್ತಡವನ್ನು ಅರಿತಿರಬಹುದು. ಆದರೆ ಮವಿ, ನವದೀಪ್‌ ಅಥವಾ ಅವೇಶ್‌ ಖಾನ್‌ ಅವರಂಥ ಬೌಲರ್‌ಗಳ ಬಗ್ಗೆ ನಾವು ಎಚ್ಚರ ವಹಿಸಬೇಕಾಗಿದೆ. ನಾವು ಅವರ ರಕ್ಷಣೆಗೆ ಬರಬೇಕಾಗಿದೆ. ಭಾರತೀಯ ಕ್ರಿಕೆಟ್‌ನ ಹಿತದೃಷ್ಟಿಯಿಂದ ನಾವು ಈ ಕ್ರಮ ಕೈಗೊಳ್ಳಲಿದ್ದೇವೆ ಎಂದು ಭಾರತೀಯ ಕ್ರಿಕೆಟ್‌ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂತಹ ಬೌಲರ್‌ಗಳ ತರಬೇತಿ ಕಾರ್ಯಕ್ರಮವನ್ನು ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ)ಯ ತರಬೇತುದಾರರು ಮತ್ತು ಫಿಸಿಯೋ ಗಮನಿಸಲಿದ್ದಾರೆ ಅಲ್ಲದೇ ಪ್ರತಿ ಫ್ರಾಂಚೈಸಿಗಳ ದೈಹಿಕ ತರಬೇತುದಾರರು ಮತ್ತು ಫಿಸಿಯೋಗಳು ಪ್ರತಿ ಆಟಗಾರರ ಮೇಲಿರುವ ಕಾರ್ಯದೊತ್ತಡದ ಕುರಿತು ಆಗಾಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.

ಬಿಸಿಸಿಐಯ ಕೇಂದ್ರೀಯ ಗುತ್ತಿಗೆಯಲ್ಲಿ ಇರದ 23 ಭರವಸೆಯ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಭವಿಷ್ಯದಲ್ಲಿ ರಾಷ್ಟ್ರೀಯ ಅಥವಾ “ಎ’ ತಂಡದಲ್ಲಿ ಸ್ಥಾನ ಪಡೆಯಲು ಯೋಗ್ಯರಾದ ಆಟಗಾರರು ಇದರಲ್ಲಿ ಸೇರಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಮೂರು ಬಣಗಳಲ್ಲಿ ವಿಂಗಡಿಸಲಾಗಿದೆ. ಮೊದಲ ಬಣದಲ್ಲಿ ಹಾಲಿ ಅಂಡರ್‌-19 ಆಟಗಾರರು ಇರಲಿದ್ದಾರೆ. ಅಂಡರ್‌-19ನ ಹಳೆಯ ಆಟಗಾರರು ಎರಡನೇ ಬಣದಲ್ಲಿದ್ದಾರೆ. ಕಳೆದ ಮೂರರಿಂದ ನಾಲ್ಕು ವರ್ಷ ಅಂಡರ್‌ 19ರಲ್ಲಿ ಆಡಿದ ಆಟಗಾರರು ಈ ಬಣದಲ್ಲಿ ಇರಲಿದ್ದಾರೆ. ಹಾಲಿ ಭಾರತ “ಎ’ ತಂಡದ ಆಟಗಾರರು ಮೂರನೇ ಬಣದಲ್ಲಿರಲಿದ್ದಾರೆ.

ಹಾಲಿ ಅಂಡರ್‌-19 ಆಟಗಾರರು: ಪೃಥ್ವಿ ಶಾ, ಶುಭ ಗಿಲ್‌, ಶಿವಂ ಮವಿ ಮತ್ತು ಕಮಲೇಶ್‌ ನಗರ್‌ಕೋಟಿ.ಹಳೇ ಅಂಡರ್‌-19: ಇಶಾನ್‌ ಕಿಶನ್‌, ರಿಷಬ್‌ ಪಂತ್‌, ಅವೇಶ್‌ ಖಾನ್‌, ಖಲೀಲ್‌ ಅಹ್ಮದ್‌, ಸಂಜು ಸ್ಯಾಮ್ಸನ್‌ ಭಾರತ  “ಎ’: ಶ್ರೇಯಸ್‌ ಅಯ್ಯರ್‌, ವಾಷಿಂಗ್ಟನ್‌ ಸುಂದರ್‌, ವಿಜಯ್‌ ಶಂಕರ್‌, ಜಯದೇವ್‌ ಉನಾದ್ಕತ್‌, ಬಾಸಿಲ್‌ ಥಂಪಿ, ದೀಪಕ್‌ ಹೂಡ, ಮಯಾಂಕ್‌ ಅಗರ್ವಾಲ್‌, ರವಿಕುಮಾರ್‌ ಸಮರ್ಥ್, ನವದೀಪ್‌ ಸೈನಿ, ಸಿದ್ಧಾರ್ಥ್ ಕೌಲ್‌, ಹನುಮ ವಿಹಾರಿ, ಅಂಕಿತ್‌ ಭಾವೆ°.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.