ಸಾಯ್‌-ಜಿಮ್ನಾಸ್ಟಿಕ್‌ ಸಂಸ್ಥೆ ನಡುವೆ ಬಿಕ್ಕಟ್ಟು


Team Udayavani, May 9, 2019, 6:15 AM IST

India-Gymnastics

ನವದೆಹಲಿ: ಭಾರತದ ಕ್ರೀಡಾವಲಯದಲ್ಲಿ ಪ್ರತೀಬಾರಿಯೂ ಏನಾದರೊಂದು ವಿವಾದ ಇದ್ದೇ ಇರುತ್ತದೆ. ಇನ್ನೂ ವೃತ್ತಿಪರತೆ, ಸಂಪೂರ್ಣ ಶಿಸ್ತಿನ ವಾತಾವರಣ ಇಲ್ಲದಿರುವುದರಿಂದ ಆಗಾಗ ಭಾರೀ ಘರ್ಷಣೆಗಳು ಸಂಭವಿಸುತ್ತಿರುತ್ತವೆ. ಈ ಬಾರಿ ಅಂತಹದ್ದೇ ಅಶಿಸ್ತಿನ ಪ್ರಕರಣ ಬೆಳಕಿಗೆ ಬಂದಿದೆ. ಭಾರತೀಯ ಕ್ರೀಡಾಪ್ರಾಧಿಕಾರ (ಸಾಯ್‌) ಮತ್ತು ಭಾರತ ಜಿಮ್ನಾಸ್ಟಿಕ್‌ ಒಕ್ಕೂಟದ (ಜಿಎಫ್ಐ) ನಡುವೆ ಒಳಜಗಳ ತೀವ್ರಗೊಂಡಿದೆ.

ಜೂ.19ರಿಂದ 23ರವರೆಗೆ ಮಂಗೋಲಿಯಾದ ಉಲಾನ್‌ಬಾತರ್‌ನಲ್ಲಿ ಏಷ್ಯಾ ಜಿಮ್ನಾಸ್ಟಿಕ್‌ ಚಾಂಪಿಯನ್‌ಶಿಪ್‌ ನಡೆಯಲಿದೆ. ಅದಕ್ಕೆ ಅರ್ಹ ಸ್ಪರ್ಧಿಗಳನ್ನು ಕಳುಹಿಸಲು ಸಾಯ್‌ ಸ್ವತಃ ಅರ್ಹತಾ ಶಿಬಿರ ನಡೆಸಿದೆ. ಆದರೆ ಇನ್ನೂ ಅಂತಿಮ ಹೆಸರನ್ನು ಪ್ರಕಟಿಸಿಲ್ಲ. ಹೆಸರು ಕಳುಹಿಸಲು ಮೇ 17 ಅಂತಿಮ ದಿನಾಂಕ ಎಂದು ಏ.24ರಂದೇ ಜಿಎಫ್ಐ, ಸಾಯ್‌ಗೆ ತಿಳಿಸಿದೆ. ಇನ್ನೂ ಸಾಯ್‌ ಮೌನವಾಗಿರುವುದರಿಂದ ಸ್ಪರ್ಧಿಗಳು ಆತಂಕಕ್ಕೊಳಗಾಗಿದ್ದಾರೆ. ಮತ್ತೂಂದು ಕಡೆ ಜಿಎಫ್ಐ ಕೂಡ ಗೊಂದಲಗೊಂಡಿದೆ.

ಈ ಹಿಂದೆ ಇಂತಹದ್ದೇ ಗೊಂದಲ ಸಂಭವಿಸಿ ಬಾಕು (ಮಾ.14ರಿಂದ 17) ಮತ್ತು ದೋಹಾ (ಮಾ.20ರಿಂದ 23) ವಿಶ್ವಕಪ್‌ಗೆ ಭಾರತದಿಂದ ತಲಾ ಇಬ್ಬರು ಮಾತ್ರ ಸ್ಪರ್ಧಿಗಳು ತಲುಪಿದ್ದರು. ಈಗ ಮತ್ತೆ ಅಂತಹದ್ದೇ ಶೀತಲ ಸಮರ ನಡೆಯುತ್ತಿರುವುದರಿಂದ, ಬಿಗು ವಾತಾವರಣ ನಿರ್ಮಾಣವಾಗಿದೆ. ಸಾಯ್‌ನ ಈ ವಿಳಂಬ ಧೋರಣೆಯಿಂದ ಸಿಟ್ಟಾಗಿರುವ ಜಿಎಫ್ಐ ತಾನೇ ಸ್ವತಃ ಅರ್ಹತಾ ಶಿಬಿರ ನಡೆಸಿ, ಆಟಗಾರರನ್ನು ಆಯ್ಕೆ ಮಾಡಲು ಮುಂದಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಒಂದು ತೊಡಕಿದೆ. ಸ್ಪರ್ಧಿಗಳ ವಯೋಮಿತಿ ನಿಯಮವನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಸರ್ಕಾರ 2012ರಲ್ಲಿ ಜಿಎಫ್ಐ ಮಾನ್ಯತೆಯನ್ನು ರದ್ದುಗೊಳಿಸಿದೆ. ಆದರೆ ಜಾಗತಿಕ ಜಿಮ್ನಾಸ್ಟಿಕ್‌ ಸಂಸ್ಥೆಯ ಮಾನ್ಯತೆ ಜಿಎಫ್ಐಗಿದೆ. ಆದ್ದರಿಂದ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಅಂತಿಮ ನಿರ್ಧಾರ ಜಿಎಫ್ಐನದ್ದೇ ಆಗಿದೆ. ಆದರೆ ಸರ್ಕಾರ ಬೆಂಬಲವಿಲ್ಲದಿದ್ದರೆ, ಜಿಎಫ್ಐಗೆ ಭಾರೀ ಆರ್ಥಿಕ ಹೊರೆ ಬೀಳಲಿದೆ.

ಸದ್ಯ ಸಾಯ್‌ ತನ್ನ ಪಟ್ಟಿಯನ್ನು ಬೇಗ ಬಿಡುಗಡೆ ಮಾಡದ ಪಕ್ಷದಲ್ಲಿ, ಆಟಗಾರರು ಸ್ವತಃ 2 ಲಕ್ಷ ರೂ. ಹಣ ಹಾಕಿ ಮಂಗೋಲಿಯಾ ಕೂಟಕ್ಕೆ ತೆರಳಬೇಕಾಗುತ್ತದೆ. ಇದಕ್ಕೆ ತಾನು ಸಿದ್ಧನಿದ್ದೇನೆ ಎಂದು ಭಾರತದ ಅಗ್ರ ಜಿಮ್ನಾಸ್ಟ್‌ ಯೋಗೇಶ್ವರ್‌ ಸಿಂಗ್‌ ತಿಳಿಸಿದ್ದಾರೆ. ಮತ್ತೂಂದು ಕಡೆ ಘಟನೆಗೆ ಪ್ರತಿಕ್ರಿಯಿಸಿದ ಕೇಂದ್ರ ಕ್ರೀಡಾ ಇಲಾಖೆ ಕಾರ್ಯದರ್ಶಿ ರಾಧೇಶ್ಯಾಮ್‌, ಕೆಲವು ಕ್ರೀಡಾ ಸಂಸ್ಥೆಗಳು ಸರಿಯಾದ ಪ್ರಕ್ರಿಯೆ ಪಾಲಿಸುವುದಿಲ್ಲ. ಅದೇ ಕಾರಣಕ್ಕೆ ತಡವಾಗುತ್ತದೆ. ತಂಡಗಳನ್ನು ನಿರ್ಧರಿಸುವುದು ಅರ್ಹತೆ ಆಧಾರದಲ್ಲಿ. ನಾವು ಆಟಗಾರರ ಪ್ರಸ್ತುತ ಲಯವನ್ನು ಪರಿಗಣಿಸುತ್ತೇವೆಂದು ಹೇಳಿದ್ದಾರೆ.

ಟಾಪ್ ನ್ಯೂಸ್

12-mng

ನೇಹಾ ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

ನೇಹಾ ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.