Maharaja Trophy: ಶಿವಮೊಗ್ಗ ಮಣಿಸಿದ ಮೈಸೂರು; ಬೆಂಗಳೂರನ್ನು ಮಗುಚಿದ ಮಂಗಳೂರು


Team Udayavani, Aug 18, 2023, 11:12 PM IST

1-sadasd

ಬೆಂಗಳೂರು: ಮಹಾರಾಜ ಟ್ರೋಫಿ ಟಿ20 ಲೀಗ್‌ನಲ್ಲಿ ಶಿವಮೊಗ್ಗ ಲಯನ್ಸ್‌ ಮೊದಲ ಬಾರಿಗೆ ಸೋಲಿನ ರುಚಿ ಕಂಡಿದೆ. ಶುಕ್ರವಾರದ ಆರಂಭಿಕ ಪಂದ್ಯದಲ್ಲಿ ಮೈಸೂರು ವಾರಿಯರ್ 12 ರನ್ನುಗಳ ರೋಚಕ ಜಯ ದಾಖಲಿಸಿ ಲಯನ್ಸ್‌ಗೆ ಆಘಾತವಿಕ್ಕಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಮೈಸೂರು 9 ವಿಕೆಟಿಗೆ 190 ರನ್ನುಗಳ ಬೃಹತ್‌ ಮೊತ್ತ ಪೇರಿಸಿದರೆ, ಶಿವಮೊಗ್ಗ 9 ವಿಕೆಟಿಗೆ 178 ರನ್‌ ಗಳಿಸಿ ಶರಣಾಯಿತು. ಇದು 4 ಪಂದ್ಯಗಳಲ್ಲಿ ಶ್ರೇಯಸ್‌ ಗೋಪಾಲ್‌ ಪಡೆಗೆ ಎದುರಾದ ಮೊದಲ ಸೋಲು. ಕರುಣ್‌ ನಾಯರ್‌ ನಾಯಕತ್ವದ ಮೈಸೂರು 4 ಪಂದ್ಯಗಳಲ್ಲಿ 2ನೇ ಜಯ ಸಾಧಿಸಿತು.

ಕಪ್ತಾನನ ಆಟವಾಡಿದ ಕರುಣ್‌ ನಾಯರ್‌ ಸರ್ವಾಧಿಕ 60 ರನ್‌, ಆರಂಭಕಾರ ಕಾರ್ತಿಕ್‌ ಸಿ.ಎ. 48 ರನ್‌ ಹೊಡೆದು ಮೈಸೂರು ವಾರಿಯರ್ನ ದೊಡ್ಡ ಮೊತ್ತಕ್ಕೆ ಕಾರಣರಾದರು. ಕೊನೆಯಲ್ಲಿ ಮನೋಜ್‌ ಭಾಂಡಗೆ ಸಿಡಿದು ನಿಂತರು. 12 ಎಸೆತಗಳಿಂದ 29 ರನ್‌ ಬಾರಿಸಿದರು (3 ಬೌಂಡರಿ, 2 ಸಿಕ್ಸರ್‌). ಶಿವಮೊಗ್ಗ ಸರದಿಯಲ್ಲಿ ಯಾರಿಂದಲೂ ದೊಡ್ಡ ಮೊತ್ತ ದಾಖಲಾಗಲಿಲ್ಲ. 31 ರನ್‌ ಮಾಡಿದ ರೋಹನ್‌ ಕದಂ ಅವರದೇ ಹೆಚ್ಚಿನ ಗಳಿಕೆ.

ಬೆಂಗಳೂರನ್ನು ಮಗುಚಿದ ಮಂಗಳೂರು
ದಿನದ 2ನೇ ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್‌ 23 ರನ್ನುಗಳಿಂದ ಬೆಂಗಳೂರು ಬ್ಲಾಸ್ಟರ್ ತಂಡವನ್ನು ಮಗುಚಿತು. ಆರಂಭಕಾರ ಸಿದ್ಧಾರ್ಥ್ ಅವರ ಅಜೇಯ ಶತಕ ಸಾಹಸದಿಂದ ಮಂಗಳೂರು 3 ವಿಕೆಟಿಗೆ 194 ರನ್‌ ರಾಶಿ ಹಾಕಿತು. ಸಿದ್ಧಾರ್ಥ್ 64 ಎಸೆತಗಳಿಂದ ಅಜೇಯ 100 ರನ್‌ ಬಾರಿಸಿದರು (9 ಬೌಂಡರಿ, 4 ಸಿಕ್ಸರ್‌). ಬಿ.ಯು. ಶಿವಕುಮಾರ್‌ 40, ಅನಿರುದ್ಧ್ ಜೋಶಿ ಔಟಾಗದೆ 31 ರನ್‌ ಮಾಡಿದರು.

ಬೆಂಗಳೂರು ತಂಡ ಆರಂಭಿಕ ಕುಸಿತಕ್ಕೆ ಸಿಲುಕಿತು. ಬಳಿಕ ಡಿ. ನಿಶ್ಚಲ್‌ (61), ಶುಭಾಂಗ್‌ ಹೆಗ್ಡೆ (45) ಮತ್ತು ಸೂರಜ್‌ ಅಹುಜಾ (32) ಹೋರಾಟ ನಡೆಸಿದರೂ ಫ‌ಲಪ್ರದವಾಗಲಿಲ್ಲ. ಬೆಂಗಳೂರು 8 ವಿಕೆಟಿಗೆ 171 ರನ್‌ ಮಾಡಿ ಸತತ 4ನೇ ಸೋಲನುಭವಿಸಿತು. ಆದಿತ್ಯ ಗೋಯಲ್‌ 3, ಸಂಕಲ್ಪ್ ಶೆಟ್ಟಣ್ಣನವರ್‌ 2 ವಿಕೆಟ್‌ ಕೆಡವಿದರು. ಇದು ಮಂಗಳೂರು ತಂಡಕ್ಕೆ 4 ಪಂದ್ಯಗಳಲ್ಲಿ ಒಲಿದ 2ನೇ ಜಯ.

ಟಾಪ್ ನ್ಯೂಸ್

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.