ಮತ್ತೆ ಸೋತ ಮಹಿಳೆಯರು: ಸರಣಿ ವಶಪಡಿಸಿಕೊಂಡ ಇಂಗ್ಲೆಂಡ್


Team Udayavani, Mar 7, 2019, 10:31 AM IST

englandw.jpg

ಗುವಾಹಟಿ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಚುಟುಕು ಪಂದ್ಯದಲ್ಲೂ ಭಾರತೀಯ ಮಹಿಳೆಯರು ಮುಗ್ಗರಿಸಿದ್ದಾರೆ. ಸ್ಮೃತಿ ಮಂಧನಾ ನಾಯಕತ್ವದ ಟೀಂ ಇಂಡಿಯಾವನ್ನು ಎರಡೂ ಪಂದ್ಯವನ್ನು ಸೋಲಿಸಿದ ಇಂಗ್ಲೆಂಡ್ ವನಿತೆಯರು ಸರಣಿಯಲ್ಲಿ ಒಂದು ಪಂದ್ಯ ಬಾಕಿ ಇರುವಂತೆ ಸರಣಿಯನ್ನು 2-0 ಅಂತರದಿಂದ ಗೆದ್ದು ಬೀಗಿದೆ. 

ಇಲ್ಲಿನ ಬರ್ಸಾಪುರ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿತು. ಇಂಗ್ಲೆಂಡ್ ನಾಯಕಿ ಹೀತರ್ ನೈಟ್ಸ್ ಈ ಲೆಕ್ಕಚಾರ ವಿಫಲವಾಗಲಿಲ್ಲ. ಭಾರತ 34 ರನ್ ಗಳಿಸಿಕೊಳ್ಳುವಷ್ಟರಲ್ಲಿ ಮೊದಲ ಮೂರು ವಿಕೆಟ್ ಕಳೆದುಕೊಂಡಾಗಿತ್ತು. 
ಹರ್ಮನ್ ಪ್ರೀತ್ ಅನುಪಸ್ಥಿತಿಯಲ್ಲಿ ತಂಡದ ನಾಯಕಿಯಾಗಿರುವ ಸ್ಮೃತಿ ಮಂಧನಾ ಈ ಪಂದ್ಯದಲ್ಲೂ ವಿಫಲಾರದರು. ಮಂಧನಾ ಗಳಿಸಿದ್ದು ಕೇವಲ 12 ರನ್. ಜೆಮಿಮಾ ರೋಡ್ರಿಗಸ್ ತನ್ನ ಖಾತೆಗೆ ಎರಡು ರನ್ ಸೇರಿಸಿ ಪೆವಿಲಿಯನ್ ಗೆ ಸೇರಿದರು. ಮೊದಲ ಸರಣಿ ಆಡುತ್ತಿರುವ ಹರ್ಲಿನ್ ಡಿಯೋಲ್ ಕೂಡಾ 14 ರನ್ ಗಳಿಸಲಷ್ಟೇ ಶಕ್ತರಾದರು. 

ಮಧ್ಯಮ ಕ್ರಮಾಂಕದಲ್ಲಿ ಮಿಥಾಲಿ ರಾಜ್ 20 ರನ್ ಗಳಿಸಿದರೆ, ದೀಪ್ತಿ ಶರ್ಮಾ ಮತ್ತು ಭಾರತಿ ಫುಲ್ಮಾಲಿ ತಲಾ 18 ರನ್ ಗಳಿಸಿದರು. ಅಂತಿಮವಾಗಿ ಭಾರತ ನಿಗದಿತ 20 ಓವರ್ ಗಳಲ್ಲಿ 111  ರನ್ ಗಳಿಸಿತು. ಇಂಗ್ಲೆಂಡ್ ಪರ ಕ್ಯಾಥರಿನ್ ಬ್ರಂಟ್ ಮೂರು ವಿಕೆಟ್ ಪಡೆದರೆ, ಲಿನ್ಸೆ ಸ್ಮಿತ್ ಎರಡು ವಿಕೆಟ್ ಪಡೆದರು. 

ಆಂಗ್ಲರ ಆಧರಿಸಿದ ಡೇನಿಯಲ್ ವ್ಯಾಟ್: ಭಾರತ ನೀಡಿದ ಸಾಧಾರಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಕೂಡಾ ಸ್ವಲ್ಪ ತಿಣುಕಾಡಿತು. ಟಾಮಿ ಬೇಮಂಟ್, ಆಮಿ ಜೋನ್ಸ್, ನಥಾಲಿ ಶಿವರ್  ಮತ್ತು ನಾಯಕಿ ಹೇತರ್ ನೈಟ್ ಎರಡಂಕಿ ರನ್ ಗಳಿಸಲೂ ವಿಫಲರಾದರು. ಆದರೆ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತು ಭಾರತೀಯ ಬೌಲರ್ ಗಳನ್ನು ಕಾಡಿದ ಡ್ಯಾನಿಯೆಲ್ ವ್ಯಾಟ್ ಅಜೇಯ ಅರ್ಧಶತಕ ಬಾರಿಸಿದರು. 55 ಎಸೆತ ಎದುರಿಸಿದ ವ್ಯಾಟ್ 64 ರನ್ ಗಳಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಲಾರೆನ್ ವಿನ್ ಫೀಲ್ಡ್ 29 ರನ್ ಗಳಿಸಿದರು.

ಅಂತಿಮವಾಗಿ ಇಂಗ್ಲೆಂಡ್ 19.1 ಓವರ್ ನಲ್ಲಿ ಐದು ವಿಕೆಟ್ ಕಳೆದುಕೊಂಡು 114  ರನ್ ಗಳಿಸಿ ಗೆಲುವಿನ ಗೆರೆ ದಾಟಿತು. ಭಾರತದ ಪರ ಏಕ್ತಾ ಬಿಷ್ಟ್ ಎರಡು ವಿಕೆಟ್ ಪಡೆದರು. ಉತ್ತಮ ಇನ್ನಿಂಗ್ಸ್ ಆಡಿದ ಡ್ಯಾನಿಯೆಲ್ ವ್ಯಾಟ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. 

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.