ಕಪಿಲ್‌ ಸಮಿತಿಗೆ ನೂತನ ಕೋಚ್‌ ಆಯ್ಕೆ ಹೊಣೆ


Team Udayavani, Jul 27, 2019, 5:55 AM IST

KAPIL

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ನೂತನ ತರಬೇತುದಾರರನ್ನು ಆಯ್ಕೆ ಮಾಡುವ ಜವಾಬ್ದಾರಿ, ಕಪಿಲ್‌ದೇವ್‌ ನೇತೃತ್ವದ ಉನ್ನತ ಸಲಹಾ ಸಮಿತಿ ಹೆಗಲೇರಿದೆ. ಕಪಿಲ್‌ ಜತೆಗೆ ಮಾಜಿ ಆಟಗಾರ್ತಿ ಶಾಂತಾ ರಂಗಸ್ವಾಮಿ, ಮಾಜಿ ಆರಂಭಕಾರ ಹಾಗೂ ತರಬೇತುದಾರ ಅಂಶುಮಾನ್‌ ಗಾಯಕ್ವಾಡ್‌ ಕೂಡ ಇರಲಿದ್ದಾರೆ.

ಇಲ್ಲೂ ಸ್ವಹಿತಾಸಕ್ತಿ ಸಂಘರ್ಷ!
ಇದೇ ವೇಳೆ ಈ ಸಮಿತಿಗೂ ಸ್ವಹಿತಾಸಕ್ತಿ ಸಂಘರ್ಷದ ಸಮಸ್ಯೆ ಎದುರಾಗಿದೆ. ಬಿಸಿಸಿಐ ಇದನ್ನು ಹೇಗೆ ತೀರ್ಮಾನಿಸುತ್ತದೆ ಎಂದು ಕಾದು ನೋಡಬೇಕು.

ಕಪಿಲ್‌ ಸಮಿತಿಗೆ ಈ ಜವಾಬ್ದಾರಿ ನೀಡುವ ಮೂಲಕ, ಇದುವರೆಗೆ ಈ ಕಾರ್ಯ ನಿರ್ವಹಿಸುತ್ತಿದ್ದ ತೆಂಡುಲ್ಕರ್‌, ಗಂಗೂಲಿ, ಲಕ್ಷ್ಮಣ್‌ ಹೊರನಡೆದಂತಾಗಿದೆ. ಈ ಮೂವರಿಗೆ ಇದೇ ವಿಚಾರದಲ್ಲಿ ಸ್ವಹಿತಾಸಕ್ತಿ ಸಮಸ್ಯೆ ಎದುರಾಗಿರುವುದರಿಂದ ಆಯ್ಕೆ ಮಾಡುವ ಅವಕಾಶವನ್ನು ಬಿಟ್ಟುಕೊಟ್ಟಿದ್ದಾರೆ. ಬಿಸಿಸಿಐ ಅಧಿಕೃತ ಒಪ್ಪಂದ ಪತ್ರ ನೀಡದೇ ಇದ್ದರೆ ಈ ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲವೆಂದು ತೆಂಡುಲ್ಕರ್‌ ಈಗಾಗಲೇ ಖಚಿತಪಡಿಸಿದ್ದಾರೆ. ಗಂಗೂಲಿ, ಲಕ್ಷ್ಮಣ್‌ ವಿಚಾರ ಇನ್ನೂ ಇತ್ಯರ್ಥವಾಗಿಲ್ಲ.

ಕಪಿಲ್‌ ಸಮಿತಿಗೆ ಸಮಸ್ಯೆ ಹೇಗೆ?
ಸಚಿನ್‌, ಗಂಗೂಲಿ, ಲಕ್ಷ್ಮಣ್‌ ಸಮಿತಿಗೆ ಸ್ವಹಿತಾಸಕ್ತಿ ಸಮಸ್ಯೆಯಿದೆಯೆಂದು, ಕಪಿಲ್‌ ಸಮಿತಿಗೆ ತರಬೇತುದಾರರನ್ನು ಆಯ್ಕೆ ಮಾಡುವ ಹೊಣೆ ನೀಡಲಾಗಿದೆ. ಇಲ್ಲೂ ಅದೇ ಸಮಸ್ಯೆ ಎದುರಾಗಿದೆ! ಕಪಿಲ್‌ದೇವ್‌ ಮತ್ತು ಶಾಂತಾ ರಂಗಸ್ವಾಮಿ ಭಾರತೀಯ ಕ್ರಿಕೆಟಿಗರ ಸಂಘದಲ್ಲಿ ಜವಾಬ್ದಾರಿ ಹೊಂದಿದ್ದಾರೆ. ಇದು ಸ್ವಹಿತಾಸಕ್ತಿ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಬಿಸಿಸಿಐ ವಿಶೇಷ ವಿಚಾರಣಾಧಿಕಾರಿ ಡಿ.ಕೆ. ಜೈನ್‌ ಅಂತಿಮ ತೀರ್ಪು ನೀಡಬೇಕಿದೆ.

ಆಗಸ್ಟ್‌ ಮಧ್ಯಭಾಗದಲ್ಲಿ ಆಯ್ಕೆ
ಸದ್ಯ ರವಿಶಾಸ್ತ್ರಿ ಭಾರತ ತಂಡದ ಮುಖ್ಯ ತರಬೇತುದಾ ರರಾಗಿದ್ದಾರೆ. ಮುಂದಿನ ಕೋಚ್‌ ಆಯ್ಕೆ ಪ್ರಕ್ರಿಯೆಯಲ್ಲಿ ಅವರಿಗೆ ನೇರ ಪ್ರವೇಶ ನೀಡಲಾಗುತ್ತದೆ. ಅವರೊಂದಿಗೆ ಹಲವರು ಪೈಪೋಟಿಯಲ್ಲಿದ್ದಾರೆ. ಆಗಸ್ಟ್‌ ಮಧ್ಯಭಾಗದಲ್ಲಿ ನೂತನ ತರಬೇತುದಾರರ ಆಯ್ಕೆ ಅಂತಿಮಗೊಳ್ಳಲಿದೆ.

ಶಾಸ್ತ್ರಿ ಬದಲಾವಣೆ ಸೂಕ್ತವಲ್ಲ!
ನೂತನ ತರಬೇತುದಾರನ ಆಯ್ಕೆಗೆ ಬಿಸಿಸಿಐ ಸಜ್ಜಾಗಿರುವಂತೆಯೇ, ಪ್ರಸ್ತುತ ಇರುವ ತರಬೇತುದಾರರನ್ನು ಬದಲಿಸುವುದು ಸೂಕ್ತವಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿಯಾಗಿದೆ. ನಾಯಕ ಕೊಹ್ಲಿ ಮತ್ತು ತರಬೇತುದಾರ ರವಿಶಾಸ್ತ್ರಿ ನಡುವೆ ಉತ್ತಮ ಬಾಂಧವ್ಯವಿದೆ. ಇಬ್ಬರೂ ಸೇರಿ ಕಳೆದ 2 ವರ್ಷಗಳಿಂದ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಈಗ ದಿಢೀರನೆ ತರಬೇತುದಾರರನ್ನು ಬದಲಿಸಿದರೆ, ಈ ಯೋಜನೆಗಳೆಲ್ಲ ಹಳಿ ತಪ್ಪಬಹುದು. ಅಲ್ಲದೇ ತಂಡದಲ್ಲಿ ಈಗಾಗಲೇ ಒಂದು ವ್ಯವಸ್ಥೆ ರೂಪುಗೊಂಡಿರುವುದರಿಂದ, ಹೊಸ ತರಬೇತುದಾರನ ನೂತನ ಕಾರ್ಯಶೈಲಿಗೆ ಒಗ್ಗಿಕೊಳ್ಳುವುದು ಆಟಗಾರರಿಗೆ ಕಷ್ಟವಾಗಿ ಪರಿಣಮಿಸಬಹುದು ಎಂದು ಬಿಸಿಸಿಐ ಮೂಲಗಳು ಅಭಿಪ್ರಾಯಪಟ್ಟಿವೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.