ಅಹ್ಮದಾಬಾದ್‌ನಲ್ಲಿ ತಲೆ ಎತ್ತಲಿದೆ ವಿಶ್ವದ ಬೃಹತ್‌ ಕ್ರಿಕೆಟ್ ಸ್ಟೇಡಿಯಂ


Team Udayavani, Sep 1, 2019, 5:19 AM IST

ALLAHABAD

ಅಹ್ಮದಾಬಾದ್‌ (ಗುಜರಾತ್‌): ಜಾಗತಿಕ ಕ್ರಿಕೆಟ್‌ನಲ್ಲಿ ಭಾರತ ಮತ್ತೂಂದು ಮಹಾನ್‌ ಸಾಧನೆಯ ಕ್ಷಣಗಣನೆಯಲ್ಲಿದೆ. ಇದು ಬೃಹತ್‌ ಸ್ಟೇಡಿಯಂಗೆ ಸಂಬಂಧಿಸಿದ ದಾಖಲೆ. 1.10 ಲಕ್ಷ ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ವಿಶ್ವದ ಈ ಬೃಹತ್‌ ಕ್ರಿಕೆಟ್ ಸ್ಟೇಡಿಯಂ ಇನ್ನು ಕೆಲವೇ ತಿಂಗಳಲ್ಲಿ ತಲೆ ಎತ್ತಲಿದೆ. ಅಹ್ಮದಾಬಾದ್‌ನ ಮೊಟೆರಾದಲ್ಲಿ 65 ಎಕರೆ ಜಾಗದಲ್ಲಿ ಈ ವರ್ಷದ ಕೊನೆಯ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಪುನರ್ನಿರ್ಮಾಣಗೊಂಡಿರುವ ‘ಸರ್ದಾರ್‌ ವಲ್ಲಭಭಾಯ್‌ ಪಟೇಲ್ ಸ್ಟೇಡಿಯಂ’ ಉದ್ಘಾಟನೆಗೊಳ್ಳಲಿದೆ.

ಇಂಥ ಅದ್ಭುತ ಮೈದಾನದ ನಿರ್ಮಾಣದ ಕನಸು ಕಂಡವರು ಪ್ರಧಾನಿ ನರೇಂದ್ರ ಮೋದಿ ಎಂದು ಬಹಿರಂಗಪಡಿಸಿದ್ದಾರೆ ಕೇಂದ್ರ ಗೃಹಸಚಿವ ಅಮಿತ್‌ ಶಾ.

ಬೃಹತ್‌ ಯೋಜನೆ

2013ರ ವರೆಗೆ ಗುಜರಾತ್‌ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರೂ ಆಗಿದ್ದ ನರೇಂದ್ರ ಮೋದಿ, 2017ರಲ್ಲಿ ತಮ್ಮ ಈ ಕನಸಿನ ಯೋಜನೆಯನ್ನು ಗುಜರಾತ್‌ ಕ್ರಿಕೆಟ್ ಸಂಸ್ಥೆಯ ಮುಂದೆ ಸಾದರಪಡಿಸಿದರು. ಆಗ 30 ವರ್ಷ ಹಳೆಯದಾದ ಸರ್ದಾರ್‌ ವಲ್ಲಭಭಾಯ್‌ ಮೈದಾ ನವನ್ನು ನವೀಕರಣ ಮಾಡುವ ಯೋಜನೆ ಯನ್ನಷ್ಟೇ ಗುಜರಾತ್‌ ಕ್ರಿಕೆಟ್ ಸಂಸ್ಥೆ ಹೊಂದಿತ್ತು. ಇದನ್ನು ಮೋದಿಯವರಲ್ಲಿ ಪ್ರಸ್ತಾವಿಸಿದಾಗ, ಏನೇ ಮಾಡಿದರೂ ವಿಶ್ವದಲ್ಲೇ ಬೃಹತ್‌ ಎನ್ನುವ ರೀತಿಯಲ್ಲೇ ಮಾಡಬೇಕು ಎಂಬ ಸಲಹೆ ಕೊಟ್ಟರು. ಅದನ್ನೇ ಅನುಸರಿಸಿ ಈ ದೊಡ್ಡ ಯೋಜನೆ ಕೈಗೆತ್ತಿಕೊಳ್ಳಲಾಯಿತು ಎಂದು ಗುಜರಾತ್‌ ಕ್ರಿಕೆಟ್ ಸಂಸ್ಥೆಯ ಉಪಾ ಧ್ಯಕ್ಷ ಪರಿಮಳ್‌ ನಾಥ್ವಾನಿ ಹೇಳಿದ್ದಾರೆ.

4 ಒಳಾಂಗಣ ಕ್ರೀಡೆ

ಒಟ್ಟು 65 ಎಕರೆ ವಿಸ್ತೀರ್ಣದ ಜಾಗದಲ್ಲಿ ಈ ಮೈದಾನ ನಿರ್ಮಾಣ ವಾಗಿದೆ. ಇದಕ್ಕೆ ಹೊಂದಿಕೊಂಡಂತೆ ಇನ್ನೂ ಎರಡು ಮೈದಾನಗಳು ತಲೆ ಯೆತ್ತಿವೆ. ಅತ್ಯಾಧುನಿಕ ತಂತ್ರಜ್ಞಾ ನಗಳನ್ನೂ ಬಳಸಿಕೊಳ್ಳಲಾಗಿದೆ. ಏಕಕಾಲದಲ್ಲಿ 4 ಒಳಾಂಗಣ ಕ್ರೀಡೆ ನಡೆಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಈಗ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನವೆಂಬ ಹೆಗ್ಗಳಿಕೆ ಇರುವುದು ಆಸ್ಟ್ರೇಲಿಯದ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌’ಗೆ. ಇದರ ಸಾಮರ್ಥ್ಯ 1,00,024. ಕೋಲ್ಕತಾದ ‘ಈಡನ್‌ ಗಾರ್ಡನ್ಸ್‌’ಗೆ ದ್ವಿತೀಯ ಸ್ಥಾನ (66 ಸಾವಿರ). ಇನ್ನು ಅಹ್ಮದಾಬಾದ್‌ ಸ್ಟೇಡಿಯಂ ಮೆಲ್ಬರ್ನ್ ದಾಖಲೆಯನ್ನು ಮುರಿಯಲಿದೆ.

ಗಾವಸ್ಕರ್‌ ಟೆಸ್ಟ್‌ನ‌ಲ್ಲಿ 10 ಸಾವಿರ ರನ್‌ ಪೂರೈಸಿದ್ದು, ಕಪಿಲ್ ಸರ್ವಾಧಿಕ ಟೆಸ್ಟ್‌ ವಿಕೆಟ್‌ಗಳ ವಿಶ್ವದಾಖಲೆ ಸ್ಥಾಪಿಸಿದ್ದಕ್ಕೆಲ್ಲ ಈ ಸ್ಟೇಡಿಯಂ ಸಾಕ್ಷಿಯಾಗಿದೆ.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.