ಟೀಂ ಇಂಡಿಯಾದ ಈ ಧಿಗ್ಗಜರಿಗೆ Farewell Match ಆಡುವ ಸೌಭಾಗ್ಯವೇ ಸಿಗಲಿಲ್ಲ!


Team Udayavani, Aug 17, 2020, 12:11 AM IST

ಟೀಂ ಇಂಡಿಯಾದ ಈ ಧಿಗ್ಗಜರಿಗೆ Farewell Match ಆಡುವ ಸೌಭಾಗ್ಯವೇ ಸಿಗಲಿಲ್ಲ!

ಮಣಿಪಾಲ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಕ್ಯಾಪ್ಟನ್‌ ಕೂಲ್‌ ಎಂದೇ ಭಾರತೀಯರ ಮನದಲ್ಲಿ ವಿರಾಜಮಾನರಾಗಿದ್ದ ಮಹೇಂದ್ರ ಸಿಂಗ್‌ ಧೋನಿ ಅವರು ಆಗಸ್ಟ್‌ 15ರಂದು ದಿಢೀರನೇ ತಮ್ಮ ಕ್ರಿಕೆಟ್‌ ಜೀವನಕ್ಕೆ ನಿವೃತ್ತಿ ಘೋಷಿಸಿ ನಿರಾಸೆ ಮೂಡಿಸಿದರು. ಧೋನಿ ನಿವೃತ್ತಿ ಘೋಷಿಸಿದ ಬೆನ್ನೆಲ್ಲೆ ಇನ್ನೋರ್ವ ಸ್ಪುರದ್ರೂಪಿ ಆಟಗಾರ ಸುರೇಶ್‌ ರೈನಾ ಕೂಡ ತಮ್ಮ ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ್ದಾರೆ.

ಇದು ಭಾರತೀಯ ಕ್ರಿಕೆಟ್‌ ಮನಸ್ಸುಗಳಿಗೆ ಸರಣಿ ಅಘಾತವಾಗಿ ಪರಿಣಮಿಸಿದೆ. ಇನ್ನು ಒಂದು ನೋವಿನ ಸಂಗತಿ ಎಂದರೆ ಧೋನಿ ಮತ್ತು ಸುರೇಶ್‌ ರೈನಾ ಅವರು ತಮ್ಮ ಕ್ರಿಕಟ್‌ ವೃತ್ತಿ ಜೀವನದ ಕೊನೆಯ ಪಂದ್ಯ ಆಡದೇ ವಿದಾಯ ಹೇಳಿದ್ದು.

ಇದಿಂದಾಗಿ ಅವರ ಕೊನೆಯ ಆಟವನ್ನು ಕಣ್ತುಂಬಿಕೊಳ್ಳಬೇಕು ಎಂದು ಆಸೆ ಹೊಂದಿದ್ದ ಅವರ ಆಪಾರ ಅಭಿಮಾನಿಗಳಿಗೆ ಈ ನಡೆಯಿಂದ ನಿರಾಸೆಯ ಜತೆಗೆ ಕಣ್ಣಲ್ಲಿ ನೀರು ತರುವಂತೆ ಮಾಡಿದೆ.

ಭಾರತ ಕ್ರಿಕೆಟ್‌ ತಂಡದ ಆಟಗಾರರ ಪೈಕಿ ತಮ್ಮ ಕೊನೆಯ ಪಂದ್ಯವನ್ನು ಆಡದೇ ವಿದಾಯ ಹೇಳಿರುವುದು ಧೋನಿ, ಸುರೇಶ್‌ ರೈನಾ ಅವರೇ ಮೊದಲಲ್ಲ. ಈ ಮುಂಚೆ ಹಲವು ಕ್ರಿಕೆಟಿಗರು ತಮ್ಮ ಕೊನೆಯ ಪಂದ್ಯವನ್ನಾವಾಡದೆ ವಿದಾಯ ಘೋಷಿಸಿದ್ದಾರೆ.

ಹಾಗಾದರೆ ತಮ್ಮ ಕೊನೆಯ ಪಂದ್ಯವನ್ನು ಆಡದೇ ವಿದಾಯ ಘೋಷಿಸಿದವರು ಯಾರು ಯಾರು ಎಂಬುದನ್ನು ತಿಳಿಯೋಣ ಬನ್ನಿ…

ರಾಹುಲ್‌ ದ್ರಾವಿಡ್‌

ಭಾರತ ಕ್ರಿಕಟ್‌ ತಂಡದ ಗೋಡೆ ಎಂದೇ ಪ್ರಸಿದ್ಧಗೊಂಡಿದ್ದ ರಾಹುಲ್‌ ದ್ರಾವಿಡ್‌ ಅವರು ತಮ್ಮ ಕ್ರಿಕೆಟ್‌ ಜೀವನದ ಕೊನೆಯ ಪಂದ್ಯವನ್ನು ಆಡದೇ ನಿವೃತ್ತಿ ಘೋಷಿಸಿದ್ದರು. ಅವರು 2012ರ ಜನವರಿ ತಿಂಗಳ ಅಡಿಲೇಡ್‌ನ‌ಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆಡಿದ್ದ ಟೆಸ್ಟ್‌ ಪಂದ್ಯವೇ ಅವರಿಗೆ ಅದು ಕೊನೆಯ ಪಂದ್ಯವಾಗಿತ್ತು. ಅದೇ ವರ್ಷದ ಮಾರ್ಚ್‌ನಲ್ಲಿ ನಿವೃತ್ತಿ ಘೋಷಿಸಿದ್ದರು. ಆದರೆ ಜ್ಯಾಮಿ ತಮ್ಮ ನಿವೃತ್ತಿ ಪಂದ್ಯವನ್ನು ಆಡುವ ಸೌಭಾಗ್ಯದಿಂದ ವಂಚಿತರಾಗಿದ್ದರು.

ವಿವಿಎಸ್‌ ಲಕ್ಷ್ಮಣ್‌

ಭಾರತ ತಂಡದ ಉತ್ತಮ ಬ್ಯಾಟ್ಸ್‌ಮನ್‌ ವಿವಿಎಸ್‌ ಲಕ್ಷ್ಮಣ್‌ ಅವರು ತಮ್ಮ ಕ್ರಿಕಟ್‌ ಜೀವನದ ಕೊನೆಯ ಪಂದ್ಯವನ್ನು ಆಡದೇ ನಿವೃತ್ತಿ ಘೋಷಿಸಿದ್ದರು. ಇವರಿಗೆ ಕೂಡ ಅಡಿಲೇಡ್‌ನ‌ಲ್ಲಿ ಆಸ್ಟ್ರೇಲಿಯದ ವಿರುದ್ಧ ಆಡಿದ ಪಂದ್ಯವೇ ಕೊನೆಯ ಪಂದ್ಯವಾಗಿತ್ತು. 134 ಪಂದ್ಯಗಳಿಂದ ಸುಮಾರು 8,781 ರನ್‌ ಗಳಿಸಿದ್ದ ಇವರು 17 ಶತಕ, 56 ಅರ್ಧ ಶತಕ ಬಾರಿಸಿದ್ದರು.

ವೀರೇಂದ್ರ ಸೆಹವಾಗ್‌

ಭಾರತ ಕ್ರಿಕಟ್‌ ತಂಡದ ಸ್ಫೋಟಕ ದಾಂಡಿಗ, ತ್ರಿಶತಕ ವೀರ ವೀರೇಂದ್ರ ಸೆಹವಾಗ್‌ ಅವರು ಕ್ರೀಸ್‌ಗೆ ಬಂದರೆ ಬೌಲರ್‌ಗೆ ಬೆವರಿಳಿಸದೇ ಇವರು ಪೆವಿಲಿಯನ್‌ಗೆ ತೆರಳುತ್ತಿರಲಿಲ್ಲ. ಆದರೆ ದುರ್ದೈವ ಎಂದರೆ ಇಂತಹ ಸ್ಫೋಟಕ ಬ್ಯಾಟ್ಸ್‌ಮನ್‌ ಅವರು ಕೊನೆಯ ಪಂದ್ಯದಲ್ಲಿ ಬೌಲರ್‌ಗಳಿಗೆ ಬೆವರಳಿಸದೇ ವೃತ್ತಿ ಜೀವನಕ್ಕೆ ಗುಡ್‌ ಬೈ ಹೇಳಿ, ಇಡೀ ಕ್ರಿಕಟ್‌ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದು ವಿಪರ್ಯಾಸವೇ ಸರಿ. ಇವರು ಮಾರ್ಚ್‌ 2013ರಲ್ಲಿ ಹೈದ್ರಬಾದ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆಡಿದ ಪಂದ್ಯವೇ ಇವರಿಗೆ ಕೊನೆಯ ಪಂದ್ಯವಾಗಿತ್ತು. ಇವರು 2015ರಂದು ತಮ್ಮ ಹುಟ್ಟು ಹಬ್ಬದ ದಿನವೇ ನಿವೃತ್ತಿ ಘೋಷಿಸಿದ್ದರು.

ಯುವರಾಜ್‌ ಸಿಂಗ್‌

ಸಿಕ್ಸರ್‌ ವೀರ, ಕ್ಯಾನ್ಸರ್‌ ನೋವಿನಲ್ಲೂ ದೇಶಕ್ಕೆ ವಿಶ್ವಕಪ್‌ ಗೆಲ್ಲಿಸಿಕೊಟ್ಟಿದ್ದ ಯುವರಾಜ್‌ ಸಿಂಗ್‌ ಅವರು ತಮ್ಮ ಕೊನೆಯ ಪಂದ್ಯದಲ್ಲಿ ಸಿಕ್ಸರ್‌ ಬಾರಿಸುವುದನ್ನು ಅವರು ಅಭಿಮಾನಿಗಳು ಕಣ್ತುಂಬಿಕೊಳ್ಳಲು ಆಗಲಿಲ್ಲ. ಯಾಕೆಂದರೆ ಅವರು ಕೊನೆಯ ಪಂದ್ಯ ಆಡದೇ ನಿವೃತ್ತಿ ಘೋಷಿಸಿದ್ದರು. 2017ರಲ್ಲಿ ವೆಸ್ಟ್‌ ವಿಂಡೀಸ್‌ ಸರಣಿಯೇ ಅವರ ಆಡಿದ್ದ ಕೊನೆಯ ಸರಣಿ ಪಂದ್ಯವಾಗಿತ್ತು. ಕೆಲ ದಿನಗಳ ಬಳಿಕ ಅವರು ನಿವೃತ್ತಿ ಘೋಷಿಸಿ ಅವರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.


ಇವರಷ್ಟೇ ಅಲ್ಲದೇ, ಎಡಗೈ ವೇಗಿ ಜಹೀರ್‌ ಖಾನ್‌, ಇರ್ಫಾನ್‌ ಪಠಾಣ್‌, ವೇಗದ ಬೌಲರ್‌ ಅಜಿತ್‌ ಅಗರ್ಕರ್‌, ಹರಭಜನ್‌ ಸಿಂಗ್‌ ಅವರು ಕೂಡ ತಮ್ಮ ವೃತ್ತಿ ಜೀವನದ ಕೊನೆಯ ಪಂದ್ಯವನ್ನು ಆಡಿರಲಿಲ್ಲ. ಈ ಸಾಲಿಗೆ ಸೇರ್ಪಡೆಯಾಗಿ ಕೂಲ್‌ ಕ್ಯಾಪ್ಟನ್ ಮಹೇಂದ್ರ ಸಿಂಗ್‌ ಧೋನಿ ಮತ್ತು ಸುರೇಶ್‌ ರೈನಾ ಅವರು ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಆದರೆ ಈಗ ಸಾಮಾಜಿಕ ಜಾಲತಾಣದಲ್ಲಿ ಧೋನಿ ಮತ್ತು ಸುರೇಶ್‌ ರೈನಾ ಅವರಿಗೆ ತಮ್ಮ ವೃತ್ತಿ ಜೀವನದ ಕೊನೆಯ ಪಂದ್ಯ ಆಡಲು ಬಿಸಿಸಿಐ ಅವಕಾಶ ಮಾಡಿಕೊಡಬೇಕು ಎಂಬ ಕೂಗೊಂದು ಪ್ರಬಲವಾಗಿ ಕೇಳಿಬರುತ್ತಿದೆ.

– ಶಿವ ಸ್ಥಾವರಮಠ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.