“ರಾಜ್ಯ ಸರಕಾರ ನಮ್ಮನ್ನು ಕಡೆಗಣಿಸಿದೆ’ ಅಂಧ ಕ್ರಿಕೆಟಿಗರ ಆಕ್ರೋಶ


Team Udayavani, Jan 31, 2018, 10:27 AM IST

31-16.jpg

ಬೆಂಗಳೂರು: ಪಾಕಿಸ್ಥಾನವನ್ನು ಸೋಲಿಸಿ 5ನೇ ಅಂಧರ ವಿಶ್ವಕಪ್‌ ಕ್ರಿಕೆಟ್‌ ಗೆದ್ದು ಬಂದ ಭಾರತ ಕ್ರಿಕೆಟಿಗರನ್ನು ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಶ್ಲಾಘಿಸಿದ್ದಾರೆ. ಆದರೆ ಕರ್ನಾಟಕ ಸರಕಾರ ದೇಶ ಪ್ರತಿನಿಧಿಸಿದ್ದ ತಮ್ಮನ್ನು ಕಡೆಗಣಿಸಿದೆ ಎಂದು ಸುನೀಲ್‌ ರಮೇಶ್‌, ಪ್ರಕಾಶ್‌ ಜಯರಾಮಯ್ಯ, ಬಸಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ವತಃ ರಾಜ್ಯ ಕ್ರಿಕೆಟಿಗರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕ್ರಿಕೆಟಿಗರಿಗೆ ಏಕೆ ಬೇಸರ?: ಹಿಂದೆ ಟಿ20 ವಿಶ್ವಕಪ್‌ ಗೆದ್ದಾಗ ರಾಜ್ಯ ಸರಕಾರ ಅಂಧ ಕ್ರಿಕೆಟಿಗರಿಗೆ ನಿಯಮ ಪ್ರಕಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಿದ್ದಕ್ಕಾಗಿ ತಲಾ 10 ಲಕ್ಷ ರೂ. ನೀಡಬೇಕಾಗಿತ್ತು. ಆದರೆ ಸರಕಾರ ಆ ಬಾರಿ ತಂಡ ಪ್ರತಿನಿಧಿಸಿದ್ದ ಪ್ರಕಾಶ್‌ ಜಯರಾಮಯ್ಯ ಹಾಗೂ ಸುನೀಲ್‌ ರಮೇಶ್‌ಗೆ ತಲಾ 7 ಲಕ್ಷ ರೂ. ಪ್ರಕಟಿಸಿತ್ತು. ಜತೆಗೆ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಉದ್ಯೋಗ ನೀಡುತ್ತಿರುವುದರಿಂದ 10 ಲಕ್ಷ ರೂ. ಕೊಡಲಾಗುವುದಿಲ್ಲ ಎಂದು ಅಂದು ಸರಕಾರ ತಿಳಿಸಿತ್ತು. ಆದರೆ ಇದುವರೆಗೆ ಉದ್ಯೋಗ ನೀಡಿಲ್ಲ ಎಂದು ಕ್ರಿಕೆಟಿಗರು ತಿಳಿಸಿದರು.

ಈ ಬಾರಿಯೂ ನಿರ್ಲಕ್ಷ್ಯ: ವಿಶ್ವಕಪ್‌ ಗೆದ್ದು ಬಂದ ನಮ್ಮನ್ನು ಸರ್ಕಾರ ಈ ಬಾರಿಯೂ ನಿರ್ಲಕ್ಷಿಸಿದೆ. ಉಳಿದ ರಾಜ್ಯಗಳು ತಮ್ಮ ಆಟಗಾರರಿಗೆ ಆರ್ಥಿಕ, ಉದ್ಯೋಗದ ನೆರವನ್ನು ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ಗೌರವ ಸಿಕ್ಕಿಲ್ಲ ಎಂದು ಪ್ರಕಾಶ್‌ ಜಯರಾಮಯ್ಯ ತಿಳಿಸಿದರು.

ಬಿಸಿಸಿಐನಿಂದ ಅಂಧರ ಕ್ರಿಕೆಟ್‌ ಸಂಸ್ಥೆಗೆ ಮಾನ್ಯತೆ?
ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂಧರ ಕ್ರಿಕೆಟ್‌ ಸಂಸ್ಥೆಗೆ ಮಾನ್ಯತೆ ನೀಡಬೇಕು ಎಂದು ಇತ್ತೀಚೆಗೆ ಬಿಸಿಸಿಐ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಬಿಸಿಸಿಐನಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿದೆ. ಇದು ಖುಷಿಯ ವಿಚಾರ ಎಂದು ವಿಶ್ವ ಅಂಧರ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಮಹಾಂತೇಶ್‌ ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು ಐಪಿಎಲ್‌ ಮಾದರಿಯಲ್ಲಿ ಅಂಧರ ಟಿ20 ಕ್ರಿಕೆಟ್‌ ಕೂಟವನ್ನು ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.