ರಾಷ್ಟ್ರೀಯ ಕಬಡ್ಡಿ ಸಂಭಾವ್ಯ ತಂಡದಲ್ಲಿ ರಾಜ್ಯದ ಏಕೈಕ ಆಟಗಾರ

ಸುಳ್ಯದ ಐವರ್ನಾಡು ಗ್ರಾಮದ ಸಚಿನ್‌ ಪ್ರತಾಪ್‌

Team Udayavani, Mar 14, 2020, 6:33 AM IST

Kabaddi–sTATE

ಸುಳ್ಯ : ಆರ್ಥಿಕ ಬಡತನವಿದ್ದರೂ ಪ್ರತಿಭೆಗೆ ಬಡತನವಿಲ್ಲ. ಇದಕ್ಕೆ ನಿದರ್ಶನ, ಈ ಹಳ್ಳಿ ಯುವಕ. ಈ ಬಾರಿಯ ಭಾರತ ಕಬಡ್ಡಿ ತಂಡದ ಸಂಭಾವ್ಯ ಆಟಗಾರರ ಯಾದಿಯಲ್ಲಿ ಸ್ಥಾನ ಪಡೆದ ಕರ್ನಾಟಕದ ಏಕೈಕ ಕಬಡ್ಡಿ ಪಟು!

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉಜಿರೆ ಎಸ್‌ಡಿಎಂ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಸಚಿನ್‌ ಪ್ರತಾಪ್‌ ಈ ಸಾಧಕ ಯುವಕ. ರಾಷ್ಟ್ರೀಯ ಕಬಡ್ಡಿ ತಂಡದಲ್ಲಿ ಸ್ಥಾನ ಗಳಿಸುವಷ್ಟರ ಮಟ್ಟಿಗೆ ಬೆಳೆದು ನಿಂತಿರುವ ಅಪರೂಪದ ಹಳ್ಳಿ ಪ್ರತಿಭೆ.

ಅತ್ಯುತ್ತಮ ರೈಡರ್‌
ಈಗಾಗಲೇ 50ಕ್ಕೂ ಅಧಿಕ ರಾಜ್ಯ ಮಟ್ಟದ ಕ್ರೀಡಾಕೂಟ, ದಕ್ಷಿಣ ವಲಯ ಕಬಡ್ಡಿ ಕೂಟದಲ್ಲಿ ಭಾಗವಹಿಸಿರುವ ಪ್ರತಾಪ್‌, ಕೆಲವು ದಿನಗಳ ಹಿಂದೆ ಜೈಪುರದಲ್ಲಿ ನಡೆದ ಸೀನಿಯರ್‌ ರಾಷ್ಟ್ರೀಯ ಕಬಡ್ಡಿ ಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಆ ಪಂದ್ಯಾವಳಿಯಲ್ಲಿ ರಾಜ್ಯ ತಂಡ ಕ್ವಾರ್ಟರ್‌ ಪೈನಲ್‌ನಲ್ಲಿ ಪರಾಭವಗೊಂಡರೂ, ಪ್ರತಾಪ್‌ ಎರಡು ಪಂದ್ಯಗಳಲ್ಲಿ “ಅತ್ಯುತ್ತಮ ರೈಡರ್‌’ ಎನಿಸಿಕೊಂಡಿದ್ದರು.

ಈ ತಂಡದಲ್ಲಿ ಸುಖೇಶ್‌ ಹೆಗ್ಡೆ, ಪ್ರಶಾಂತ ರೈ ಮೊದಲಾದ ಆಟಗಾರರಿದ್ದರು ಎನ್ನುವುದು ಗಮನಾರ್ಹ ಸಂಗತಿ. ಅಲ್ಲಿನ ಪ್ರದರ್ಶನ ಇವರನ್ನು ಭಾರತ ತಂಡದ ಕದ ತಟ್ಟುವಂತೆ ಮಾಡಿದೆ. ಜತೆಗೆ ಪ್ರೊ ಕಬಡ್ಡಿ ಹರಾಜು ಬಿಡ್ಡಿಂಗ್‌ನಲ್ಲೂ ಪಾಲ್ಗೊಳ್ಳಲು ಅರ್ಹತೆ ಪಡೆದಿದ್ದಾರೆ.

36 ಸಂಭಾವ್ಯ ಆಟಗಾರರು
ಸೀನಿಯರ್‌ ರಾಷ್ಟ್ರೀಯ ಕಬಡ್ಡಿ ಕೂಟದಲ್ಲಿ ತೋರಿದ ಅಮೋಘ ಪ್ರದರ್ಶನದಿಂದಾಗಿ ಸಚಿನ್‌ ಪ್ರತಾಪ್‌ ಭಾರತ ಕಬಡ್ಡಿ ತಂಡದ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಗೊಂಡ ಏಕೈಕ ಆಟಗಾರ ಎಂಬುದು ಇವರ ಹೆಗ್ಗಳಿಕೆ. 36 ಮಂದಿ ಆಟಗಾರರಿದ್ದು, ತರಬೇತಿ ಶಿಬಿರಕ್ಕೆ ಇವರೆಲ್ಲರೂ ಆಯ್ಕೆಗೊಂಡಿದ್ದಾರೆ. ಅಲ್ಲಿ 12 ಮಂದಿಯನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುತ್ತಾರೆ.

ಕೆಎಫ್ಡಿಸಿ ನೌಕರರಾದ ಸುಂದರಲಿಂಗಂ ಮತ್ತು ವಲ್ಲಿ ದಂಪತಿಯ ಮೂವರು ಮಕ್ಕಳಲ್ಲಿ ಸಚಿನ್‌ ಪ್ರತಾಪ್‌ ಎರಡನೆಯವರು. ಮನೆಯಲ್ಲಿ ಆರ್ಥಿಕ ಬಡತನವಿದ್ದರೂ, ಕಬಡ್ಡಿ ಆಟಗಾರರಾಗಬೇಕೆಂಬ ಆಸಕ್ತಿಗೆ ಹೆತ್ತವರು, ಬಂಧುಗಳು ಪ್ರೋತ್ಸಾಹ ನೀಡಿದರು. ಹಿರಿಯ ಸಹೋದರಿ ಶರ್ಮಿಳಾ ರಾಜ್ಯ ಮಟ್ಟದ ಕಬಡ್ಡಿ ಆಟಗಾರ್ತಿ. ಕಿರಿಯ ಸಹೋದರಿ ಸುಮಾ ಎನ್‌ಎಂಸಿ ಕಾಲೇಜಿನಲ್ಲಿ ಕ್ರೀಡಾ ಕೋಟಾದಡಿ ತರಬೇತಿ ಪಡೆಯುತ್ತಿದ್ದಾರೆ.

ನನ್ನ ಸಾಧನೆಗೆ ಪ್ರಾಥಮಿಕ, ಪ್ರೌಢಶಾಲಾ, ಪಿಯು ಹಂತದಲ್ಲಿನ ತರಬೇತುದಾರರು, ಮುಖ್ಯವಾಗಿ ಉಜಿರೆ ಎಸ್‌ಡಿಎಂ ಕಾಲೇಜಿನ ಕಬಡ್ಡಿ ತರಬೇತುದಾರ ಕೃಷ್ಣಾನಂದ ಅವರ ಪ್ರೋತ್ಸಾಹ ಮುಖ್ಯವಾದುದು. ಆರ್ಥಿಕವಾಗಿ ಕಷ್ಟ ಇದ್ದರೂ, ಮನೆ ಮಂದಿಯ ಜತೆ ಊರವರು ಸೇರಿದಂತೆ ಹಲವರು ನನಗೆ ಸಹಕಾರ ನೀಡಿದ್ದಾರೆ. ರಾಷ್ಟ್ರೀಯ ತಂಡದ ಸಂಭಾವ್ಯ ಪಟ್ಟಿಯಲ್ಲಿ ಕರ್ನಾಟಕದಿಂದ ಸ್ಥಾನ ಪಡೆದಿರುವುದು ಖುಷಿ ತಂದಿದೆ.
-ಸಚಿನ್‌ ಪ್ರತಾಪ್‌

ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯ. ಎಳೆಯ ಪ್ರಾಯದಲ್ಲೇ ಉತ್ತಮ ಆಟಗಾರನಾಗಿ ಗುರುತಿಸಿಕೊಂಡಿದ್ದ ಪ್ರತಾಪ್‌ ಈಗ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿರುವುದು ನಮ್ಮ ಊರಿಗೂ ಹೆಮ್ಮೆ.
-ಎಸ್‌.ಎನ್‌. ಮನ್ಮಥ, ಜಿ.ಪಂ. ಸದಸ್ಯ

ಕಬಡ್ಡಿಯೇ ಜೀವಾಳ…
ಪ್ರಾಥಮಿಕ, ಪ್ರೌಢ ಮತ್ತು ಪ.ಪೂ. ಶಿಕ್ಷಣವನ್ನು ಐವರ್ನಾಡಿನಲ್ಲಿ ಪೂರೈಸಿರುವ ಸಚಿನ್‌ ಪ್ರತಾಪ್‌, ಈ ಬಾರಿ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದಿದ್ದು, ಫಲಿತಾಂಶ ಪ್ರಕಟವಾಗಬೇಕಿದೆ. 10ನೇ ತರಗತಿ ತನಕ ಖೋ-ಖೋ ಆಟಗಾರನಾಗಿದ್ದ ಪ್ರತಾಪ್‌ ಅನಂತರ ಕಬಡ್ಡಿ ಕ್ರೀಡೆಯತ್ತ ಆಸಕ್ತಿ ತೋರಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಜತೆಗೆ ಹರ್ಷಿತ್‌ ಬೇಂಗಮಲೆ, ವೀರನಾಥ, ಕುಮಾರ್‌ ಅವರು ಆರಂಭದಲ್ಲಿ ತರಬೇತಿ ನೀಡಿ ಪ್ರೋತ್ಸಾಹಿಸಿದರು. ಅನಂತರ ಉಜಿರೆ ಎಸ್‌ಡಿಎಂ ಕಾಲೇಜಿಗೆ ಕ್ರೀಡಾ ಕೋಟಾದಡಿ ಸೇರ್ಪಡೆಗೊಂಡು ಇಲ್ಲಿನ ಕಬಡ್ಡಿ ತರಬೇತುದಾರ ಕೃಷ್ಣಾನಂದ ಅವರು ಪೂರ್ಣ ಸಹಕಾರ ನೀಡಿ ಪ್ರತಾಪ್‌ ಅವರ ಪ್ರತಿಭೆಗೆ ಇನ್ನಷ್ಟು ನೀರೆರೆದು ಪೋಷಿಸಿದರು.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.