Panchkula Home: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ… ತಾಯಿಯಿಂದ ದೂರು
Team Udayavani, Feb 17, 2024, 8:37 AM IST
ಮುಂಬಯಿ: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಪಂಚಕುಲದ ಎಂಡಿಸಿ ಸೆಕ್ಟರ್ 4ರಲ್ಲಿರುವ ನಿವಾಸದಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಯುವರಾಜ್ ಸಿಂಗ್ ಅವರ ಮನೆಯಲ್ಲಿದ್ದ 75 ಸಾವಿರ ನಗದು ಹಾಗೂ ಚಿನ್ನಾಭರಣಗಳನ್ನು ಕಳ್ಳರು ಕದ್ದೊಯ್ದಿದ್ದು, ಮನೆಗೆಲಸದವರ ಮೇಲೆ ಆರೋಪ ಕೇಳಿ ಬರುತ್ತಿದೆ.
ಈ ಕುರಿತು ಯುವರಾಜ್ ಸಿಂಗ್ ಅವರ ತಾಯಿ ಶಬ್ನಮ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಮನೆಗೆಲಸದ ಸಿಬ್ಬಂದಿಗಳಾದ ಲಲಿತಾ ದೇವಿ ಮತ್ತು ಬಿಹಾರ ಮೂಲದ ಅಡುಗೆ ಸಿಬಂದಿ ಸಿಲ್ದಾರ್ ಪಾಲ್ ಅವರ ಮೇಲೆ ಅನುಮಾನವಿದೆ ಎಂದು ಹೇಳಿಕೊಂಡಿದ್ದಾರೆ.
ಪೊಲೀಸರಿಂದ ತನಿಖೆ:
ತಾಯಿ ಶಬನಮ್ ಸಿಂಗ್ ಅವರ ಪ್ರಕಾರ, ಅವರು ಸೆಪ್ಟೆಂಬರ್ 2023 ರಿಂದ ಗುರ್ಗಾಂವ್ನಲ್ಲಿರುವ ತಮ್ಮ ಎರಡನೇ ನಿವಾಸದಲ್ಲಿ ವಾಸಿಸುತ್ತಿದ್ದರು ಬಳಿಕ ಅಕ್ಟೋಬರ್ 5, 2023 ರಂದು ಅವರು ಪಂಚಕುಲದ ಮನೆಗೆ ಹಿಂದಿರುಗಿದ್ದಾರೆ, ಈ ವೇಳೆ ಮನೆಯಲ್ಲಿದ್ದ ಸುಮಾರು 75,000 ರೂಪಾಯಿ ಮೌಲ್ಯದ ಆಭರಣಗಳು ಮತ್ತು ಇತರ ವಸ್ತುಗಳು ಕಪಾಟಿನಲ್ಲಿ ಕಾಣೆಯಾಗಿವೆ ಎಂದು ಹೇಳಿದ್ದಾರೆ. ಇದೇ ಹೊತ್ತಿಗೆ ಮನೆಕೆಲಸದ ಸಿಬಂದಿಗಳಾದ ಲಲಿತಾ ದೇವಿ ಮತ್ತು ಸಿಲ್ದಾರ್ ಪಾಲ್ ಇದ್ದಕ್ಕಿದ್ದಂತೆ ತಮ್ಮ ಕೆಲಸವನ್ನು ತೊರೆದು ಹೋಗಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಕಳ್ಳತನವಾದ ವಿಚಾರದಲ್ಲಿ ಮನೆಕೆಲಸದ ಸಿಬ್ಬಂದಿಗಳ ಕೈಚಳಕ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದು ಕೂಲಂಕುಷ ವಿಚಾರಣೆ ನಡೆಸಬೇಕೆಂದು ಯುವರಾಜ್ ಸಿಂಗ್ ತಾಯಿ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೆ ಶಬ್ನಮ್ ಸಿಂಗ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Daily Horoscope: ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯೇ ಯಶಸ್ಸಿನ ಸೂತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್