![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಟೀಮ್ ಇಂಡಿಯಾದ ಮಿಂಚಿನ ದಾಳಿ:104 ರನ್ ಗೆ ಹೋಲ್ಡರ್ ಪಡೆ ಆಲೌಟ್!
Team Udayavani, Nov 1, 2018, 3:50 PM IST
![india.jpg](https://www.udayavani.com/wp-content/uploads/2018/11/1/india-620x349.jpg)
ತಿರುವನಂತಪುರಂ: ಇಲ್ಲಿನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆಯುತ್ತಿರುವ ಐದನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ ಗಳ ಮಿಂಚಿನ ದಾಳಿಗೆ ಕೆರೆಬಿಯನ್ನರು ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ 31.5 ಓವರ್ ಗಳಲ್ಲಿ ಕೇವಲ 104 ರನ್ನಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದೆ.
ಮೊದಲ ಓವರ್ ನಲ್ಲೆ ಕಿರನ್ ಪೊವೆಲ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ವಿಂಡೀಸ್ ನಿರಂತರ ವಿಕೆಟ್ ಕಳೆದುಕೊಳ್ಳುತ್ತಾ ಹೋಯಿತು. ನಾಯಕ ಜೇಸನ್ ಹೋಲ್ಡರ್ (25 ರನ್), ಮರ್ಲಾನ್ ಸ್ಯಾಮುವೆಲ್ಸ್ (24 ರನ್), ರೋವನ್ ಪೊವೆಲ್(16 ರನ್ ) ಮಾತ್ರ ರನ್ ಗಳಿಕೆಯಲ್ಲಿ ಎರಡಂಕೆ ದಾಟಿದವರು .
ಈ ಪಂದ್ಯದಲ್ಲಿ ಭಾರತದ ಬೌಲರ್ ಗಳು ನಿಖರ ದಾಳಿ ನಡೆಸಿದರು. ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾಹ್, ಖಲೀಲ್ ಅಹಮದ್ ತಲಾ ಎರಡು ವಿಕೆಟ್ ಪಡೆದರು. ಒಂದೊಂದು ವಿಕೆಟ್ ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್ ಪಾಲಾಯಿತು.
5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ರ ಅಂತರದಿಂದ ಮುನ್ನಡೆಯಲ್ಲಿದೆ. ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಟೈ ಆಗಿತ್ತು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.