ಇಂದು ಬೆಂಗಳೂರಿಗೆ ಹೈದರಾಬಾದ್‌ ಸವಾಲು


Team Udayavani, Apr 25, 2017, 11:00 AM IST

rcb.jpg

ಬೆಂಗಳೂರು: ಐಪಿಎಲ್‌ ಇತಿಹಾಸದಲ್ಲೇ ಭಾರೀ ಅವಮಾನಕರ ರೀತಿಯಲ್ಲಿ ಕೋಲ್ಕತಾ ನೈಟ್‌ ರೈಡರ್ ವಿರುದ್ಧ ಸೋಲುಂಡ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡ ತವರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸನ್‌ರೈಸರ್ ಹೈದರಾಬಾದ್‌ ತಂಡವನ್ನು ಮಂಗಳವಾರ ಎದುರಿಸಲಿದೆ. ಇಡೀ ಐಪಿಎಲ್‌ ತಂಡಗಳಲ್ಲೇ ಅತ್ಯಂತ ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನು ಹೊಂದಿರುವ ಆರ್‌ಸಿಬಿ ಐಪಿಎಲ್‌ ಇತಿಹಾಸದಲ್ಲೇ ಕನಿಷ್ಠ 49 ರನ್‌ಗೆ ಆಲೌಟಾಗಿ ಆಘಾತಕ್ಕೊಳಗಾಗಿದೆ. ಇದರಿಂದ ಹೊರಬರಬೇಕಾದರೆ ತಂಡ ಮಂಗಳವಾರ ಸಿಡಿಯಲೇಬೇಕಾಗಿದೆ.

ಆರ್‌ಸಿಬಿಗೆ ಬ್ಯಾಟಿಂಗ್‌, ಬೌಲಿಂಗ್‌ ತಲೆ ನೋವು: ಆರ್‌ಸಿಬಿ ಬ್ಯಾಟಿಂಗ್‌ ವಿಭಾಗ ಮೇಲ್ನೋಟಕ್ಕೆ ಬಲಿಷ್ಠವಾಗಿದೆ.ಕೊಹ್ಲಿ, ಎಬಿಡಿ, ಗೇಲ್‌, ವಾಟ್ಸನ್‌, ಕೇದಾರ್‌ರಂತಹ ವಿಶ್ವಶ್ರೇಷ್ಠ ಬ್ಯಾಟ್ಸ್‌ಮನ್‌ಗಳು ತಂಡದಲ್ಲಿದ್ದಾರೆ. ಇವರಲ್ಲಿ ಯಾರಾದರೂ ಒಬ್ಬರು ಸಿಡಿದರೆ ಎದುರಾಳಿ ಬೌಲರ್‌ಗಳಿಗೆ ತಡೆಯುವುದು ಕಷ್ಟವಾಗಬಹುದು. ಆದರೆ, ಕೋಲ್ಕತಾ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ ವಿಭಾಗ ಹೀನಾಯವಾಗಿ ಪತನಗೊಂಡಿದ್ದನ್ನು ನೋಡಿದರೆ ಒಟ್ಟಾರೆ ಆರ್‌ಸಿಬಿಯ ಬ್ಯಾಟಿಂಗ್‌ ವಿಭಾಗವನ್ನೇ ಪ್ರಶ್ನೆ ಮಾಡುವಂತಾಗಿದೆ.

ಜತೆಗೆ ಬೌಲಿಂಗ್‌ ವಿಭಾಗ ಕೂಡ ದುರ್ಬಲವಾಗಿದೆ. ಟೈಮಲ್‌ ಮಿಲ್ಸ್‌ರಿಂದ ಮ್ಯಾಜಿಕ್‌ ನಡೆಯುತ್ತಿಲ್ಲ. ಶ್ರೀನಾಥ್‌ ಅರವಿಂದ್‌ ವಿಕೆಟ್‌ ಪಡೆಯುತ್ತಿಲ್ಲ. ಇರುವುದರಲ್ಲಿ ಸ್ಪಿನ್‌ ಬೌಲರ್‌ಗಳಾದ ಚಹಲ್‌, ಬದ್ರಿ ಮೇಲೆ ಸ್ವಲ್ಪ ಭರವಸೆ ಇಡಬಹುದು. ತವರಿನಲ್ಲಿ ಆರ್‌ಸಿಬಿ ಬಲಿಷ್ಠ ಎನ್ನಲಾಗುತ್ತಿದೆಯಾದರೂ ಈ ಆವೃತ್ತಿಯಲ್ಲಿ ಅದು ನಿಜವಾಗಿಲ್ಲ.

ಬೆಂಗಳೂರಿನ ಪಿಚ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಬೆಂಗಳೂರು ಗೆಲುವು ಗಳಿಸಿತ್ತು. ಆನಂತರ ನಡೆದ ಪಂದ್ಯದಲ್ಲಿ ಮುಂಬೈ ಹಾಗೂ ಪುಣೆ ವಿರುದ್ಧ ಸೋಲು ಕಂಡಿತ್ತು. ಇದೀಗ 4ನೇ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಲ್ಲಿ ಗೆದ್ದು ಬೆಂಗಳೂರು ಮತ್ತೆ ಎದ್ದು ನಿಲ್ಲುತ್ತದೆಯೆ? ಮತ್ತೆ ಎದುರಾಳಿಗಳಿಗೆ ನಡುಕ ಹುಟ್ಟಿಸುವಂತಹ ಆಟ
ಪ್ರದರ್ಶಿಸಲಿದೆಯೇ? ಎನ್ನುವುದು ಕುತೂಹಲದ ಪ್ರಶ್ನೆಯಾಗಿದೆ. ಹೈದರಾಬಾದ್‌ ಅಪಾಯಕಾರಿ: ಸನ್‌ರೈಸರ್ ಹೈದರಾಬಾದ್‌ ತಂಡ ಬೆಂಗಳೂರಿಗೆ ಪ್ರಬಲ ಹೊಡೆತವನ್ನು ನೀಡಲು ಸಜ್ಜಾಗಿದೆ. ಸನ್‌ರೈಸರ್ ಒಟ್ಟು 7 ಪಂದ್ಯಗಳನ್ನು ಆಡಿದೆ. 4 ಪಂದ್ಯದಲ್ಲಿ ಗೆಲುವು ಕಂಡಿದೆ. 3 ಪಂದ್ಯದಲ್ಲಿ ಸೋಲು ಕಂಡಿದೆ. ಗೆದ್ದಿರುವ 4 ಪಂದ್ಯಗಳು ತವರಿನಲ್ಲೇ
ಎನ್ನುವುದು ವಿಶೇಷ. ತವರು ಬಿಟ್ಟು ಹೊರಗಡೆ ಆಡಿದ ಪಂದ್ಯದಲ್ಲಿ ಹೈದರಾಬಾದ್‌ ಸೋಲು ಕಂಡಿದೆ. ಹೀಗಾಗಿ ಬೆಂಗಳೂರು ವಿರುದ್ಧದ ಪಂದ್ಯ ರೈಸರ್ಗೆ ಸವಾಲಾಗಬಹುದು. ಡೇವಿಡ್‌ ವಾರ್ನರ್‌, ಧವನ್‌, ವಿಲಿಯಮ್ಸನ್‌, ಹೆನ್ರಿಕ್ಸ್‌, ಹೂಡಾ, ರಶೀದ್‌ ಖಾನ್‌ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಇದು ಸನ್‌ರೈಸರ್ಗೆ ಪ್ಲಸ್‌ ಪಾಯಿಂಟ್‌ ಆಗಿದೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.