ಭಾರತಕ್ಕೆ ಇಂದು ಸುಲಭ ಸವಾಲು


Team Udayavani, Jan 16, 2018, 12:22 PM IST

19-23.jpg

ಮೌಂಟ್‌ ಮಾಂಗನಿ: ಬಲಿಷ್ಠ ಆಸ್ಟ್ರೇಲಿಯವನ್ನು ಭರ್ತಿ 100 ರನ್ನುಗಳಿಂದ ಉರುಳಿಸಿದ ಸಂಭ್ರಮದಲ್ಲಿರುವ ಭಾರತದ ಕಿರಿಯರು ಮಂಗಳವಾರದ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಮುಖಾಮುಖೀಯಲ್ಲಿ “ಕ್ರಿಕೆಟ್‌ ಗುಬ್ಬಚ್ಚಿ’ ಪಪುವಾ ನ್ಯೂ ಗಿನಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಜ್ಜಾಗಿದೆ. ಈ ಪಂದ್ಯ ಗೆದ್ದರೆ ಪೃಥ್ವಿ ಶಾ ಪಡೆ ನಾಕೌಟ್‌ ಪ್ರವೇಶ ಬಹುತೇಕ ಖಚಿತವಾಗಲಿದೆ. 

3 ಬಾರಿಯ ಚಾಂಪಿಯನ್‌ ಭಾರತ, ಇಷ್ಟೇ ಸಲ ಪ್ರಶಸ್ತಿ ಎತ್ತಿದ ಆಸ್ಟ್ರೇಲಿಯವನ್ನು ಮೊದಲ ಪಂದ್ಯದಲ್ಲೇ ಮಣಿಸಿ ಇಡೀ ಕೂಟಕ್ಕಾಗುವಷ್ಟು ಆತ್ಮವಿಶ್ವಾಸವನ್ನು ತುಂಬಿಕೊಂಡಿದೆ. ಹೀಗಾಗಿ ಪಪುವಾ ನ್ಯೂ ಗಿನಿಯನ್ನು ಭಾರೀ ಅಂತರದಿಂದ ಮಣಿಸುವುದು ಭಾರತದ ಕಿರಿಯರ ಯೋಜನೆ. ಇನ್ನೊಂದೆಡೆ ನ್ಯೂ ಗಿನಿ ತನ್ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆಗೆ ಶರಣಾಗಿದೆ. ಕೊನೆಯ ಲೀಗ್‌ ಪಂದ್ಯದಲ್ಲಿ ಶಾ ಬಳಗ ಜಿಂಬಾಬ್ವೆಯನ್ನು ಎದುರಿಸಲಿದೆ. ಅಜೇಯವಾಗಿ ನಾಕೌಟ್‌ ಪ್ರವೇಶಿಸುವ ದ್ರಾವಿಡ್‌ ಹುಡುಗರ ಯೋಜನೆ ಇಲ್ಲಿ ಸಾಕಾರಗೊಳ್ಳುವ ಎಲ್ಲ ಸಾಧ್ಯತೆ ಇದೆ.

ಭಾರತದ ಯಶಸ್ವಿ ಕಾರ್ಯತಂತ್ರ
ಆಸ್ಟ್ರೇಲಿಯ ಎದುರಿನ ಮೊದಲ ಪಂದ್ಯ ಭಾರತದ ಯೋಜನೆಯಂತೆಯೇ ಸಾಗಿದ್ದನ್ನು ಮರೆಯುವಂತಿಲ್ಲ. ಪೃಥ್ವಿ ಶಾ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಕ್ಷಣದಿಂದ ಎಲ್ಲ ಅಂಶಗಳೂ ಭಾರತಕ್ಕೆ ಪೂರಕವಾಗಿಯೇ ಪರಿಣಮಿಸಿದವು. ಆಕ್ರಮಣಕಾರಿ ಆಟದ ಮೂಲಕ ತಂಡದ ಮೊತ್ತವನ್ನು ಮುನ್ನೂರರಾಚೆ ವಿಸ್ತರಿಸಿದ್ದು, ಬಳಿಕ ಸಾಂ ಕ ಬೌಲಿಂಗ್‌ ದಾಳಿ ನಡೆಸಿ ಕಾಂಗರೂ ಮೇಲೆ ಮುಗಿಬಿದ್ದದ್ದೆಲ್ಲ ಕಿರಿಯರ ಯಶಸ್ವಿ ಕಾರ್ಯತಂತ್ರಕ್ಕೆ ಉತ್ತಮಮ ಉದಾಹರಣೆ. ಅಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಭಾರತ, ವಿಶ್ವಕಪ್‌ನಲ್ಲಿ ಇದಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಯೋಜನೆ ರೂಪಿಸಿರುವುದರಲ್ಲಿ ಅನುಮಾನವಿಲ್ಲ.

ಪೃಥ್ವಿ ಶಾ, ಮನೋಜ್‌ ಕಾಲಾ, ಶುಭಂ ಗಿಲ್‌ ಅವರ ಅಮೋಘ ಬ್ಯಾಟಿಂಗ್‌ ಭಾರತದ ಭಾರೀ ಮೊತ್ತದಲ್ಲಿ ಮಹತ್ವದ ಪಾತ್ರ ವಹಿಸಿತ್ತು. ಕಮಲೇಶ್‌ ನಾಗರ್ಕೋಟಿ, ಶಿವಂ ಮಾವಿ ಘಾತಕ ಬೌಲಿಂಗ್‌ ಮೂಲಕ ಗಮನ ಸೆಳೆದಿದ್ದರು. ಅದರಲ್ಲೂ ರಾಜಸ್ಥಾನದ ನಾಗರ್ಕೋಟಿ ಅವರ 150 ಕಿ.ಮೀ. ವೇಗದ ಎಸೆತಗಳು, ಆ ಶೈಲಿ ಎಲ್ಲರನ್ನೂ ಮೋಡಿ ಮಾಡಿದ್ದವು. ಇವರ ದಾಳಿಯನ್ನು ಮೆಟ್ಟಿ ನಿಲ್ಲುವುದು ಪಪುವಾ ನ್ಯೂ ಗಿನಿ ತಂಡದ ಅನನುಭವಿ ಬ್ಯಾಟ್ಸ್‌ಮನ್‌ಗಳಿಗೆ ಸುಲಭವಲ್ಲ. 

ಅರ್ಹತಾ ಸುತ್ತಿನಲ್ಲಿ ಅಜೇಯ
ಪಪುವಾ ನ್ಯೂ ಗಿನಿ ಆಡುತ್ತಿರುವ 8ನೇ ವಿಶ್ವಕಪ್‌ ಪಂದ್ಯಾವಳಿ ಇದಾಗಿದೆ. 2014ರ ಬಳಿಕ ಮೊದಲ ಸಲ ಆಡುತ್ತಿದೆ. ಸಮೋವಾದಲ್ಲಿ ನಡೆದ “ಈಸ್ಟ್‌ ಏಶ್ಯ ಪೆಸಿಫಿಕ್‌’ ಅರ್ಹತಾ ಸುತ್ತಿನ ಸ್ಪರ್ಧೆಗಳಲ್ಲಿ ಅಜೇಯವಾಗಿ ಉಳಿದ ಹೆಗ್ಗಳಿಕೆ ನ್ಯೂ ಗಿನಿಯದ್ದು. ಉತ್ತಮ ಹೋರಾಟ ಹಾಗೂ ಪರಿಣಾಮಕಾರಿ ಪ್ರದರ್ಶನದಿಂದ ಅದು ಗಮನ ಸೆಳೆದಿತ್ತು. ಆದರೆ ಬಲಾಡ್ಯ ತಂಡಗಳನ್ನು ಹೊಂದಿರುವ ವಿಶ್ವಕಪ್‌ನಂಥ ಪ್ರಧಾನ ಸುತ್ತಿನಲ್ಲಿ ಸ್ಪರ್ಧಿಸುವುದು ಸುಲಭವಲ್ಲ. ಈ ಅರಿವನ್ನು ಅದು ಹೊಂದಿದೆ. ಆದರೆ ಪಪುವಾ ನ್ಯೂ ಗಿನಿಯಂಥ ತಂಡಗಳಿಗೆ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಲಭಿಸಿದ್ದೇ ಪ್ರತಿಷ್ಠೆಯ ಸಂಗತಿ!

ಪಾಕಿಗೆ ಐರಿಷ್‌ ಸವಾಲು
ವಾಂಗರಿಯಲ್ಲಿ ನಡೆಯುವ ದಿನದ ಇನ್ನೊಂದು ಪಂದ್ಯ ದಲ್ಲಿ ಪಾಕಿಸ್ಥಾನ-ಅಯರ್‌ಲ್ಯಾಂಡ್‌ ಸೆಣಸಲಿವೆ. ಆರಂಭಿಕ ಪಂದ್ಯದಲ್ಲಿ ಅಫ್ಘಾನಿಸ್ಥಾನಕ್ಕೆ ಶರಣಾದ ಪಾಕಿಸ್ಥಾನಕ್ಕೆ ಇದು ಮಹತ್ವದ ಪಂದ್ಯ. ಅಯರ್‌ಲ್ಯಾಂಡ್‌ ಕೂಡ ಮೊದಲ ಮುಖಾ ಮುಖೀಯಲ್ಲಿ ಶ್ರೀಲಂಕಾ ವಿರುದ್ಧ ನಾಟಕೀಯ ಕುಸಿತ ಕಂಡು ಸೋಲನುಭವಿಸಿತ್ತು. ಹೀಗಾಗಿ ಮಂಗಳವಾರದ ಪಂದ್ಯದಲ್ಲಿ ಗೆಲ್ಲುವ ತಂಡಕ್ಕಷ್ಟೇ ಉಳಿಗಾಲ ಎಂಬುದು ಸದ್ಯದ ಸ್ಥಿತಿ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.