ಪ್ರೊ ಕಬಡ್ಡಿ ಎಲಿಮಿನೇಟರ್‌ ಕಾದಾಟ: ಇಂದು ಬೆಂಗಳೂರು ಬುಲ್ಸ್‌ಗೆ ಗುಜರಾತ್‌ ಜೈಂಟ್ಸ್‌ ಸವಾಲು


Team Udayavani, Feb 21, 2022, 7:15 AM IST

ಪ್ರೊ ಕಬಡ್ಡಿ ಎಲಿಮಿನೇಟರ್‌ ಕಾದಾಟ: ಇಂದು ಬೆಂಗಳೂರು ಬುಲ್ಸ್‌ಗೆ ಗುಜರಾತ್‌ ಜೈಂಟ್ಸ್‌ ಸವಾಲು

ಬೆಂಗಳೂರು: ಪ್ರೊ ಕಬಡ್ಡಿ ಲೀಗ್‌ ಮುಖಾಮುಖಿ ಅಂತ್ಯ ಕಂಡಿದೆ. ಸೋಮವಾರ ಎರಡು ಎಲಿಮಿನೇಟರ್‌ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಯುಪಿ ಯೋಧಾ-ಪುಣೇರಿ ಪಲ್ಟಾನ್‌, ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌-ಗುಜರಾತ್‌ ಜೈಂಟ್ಸ್‌ ಸೆಣಸಲಿವೆ..

ಬುಲ್ಸ್‌ಗೆ ಪವನ್‌ ಬಲ
2018ರ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ನಾಯಕ ಪವನ್‌ ಸೆಹ್ರಾವತ್‌ ಅವರನ್ನು ನೆಚ್ಚಿಕೊಂಡಿದೆ. ಅವರ ರೈಡಿಂಗ್‌ ಮೇಲೆ ಪಂದ್ಯದ ಫ‌ಲಿತಾಂಶ ನಿರ್ಣಾಯವಾಗಿದೆ. ಪ್ರತೀ ಪಂದ್ಯದಲ್ಲಿಯೂ ಅಮೋಘ ಪ್ರದರ್ಶನ ನೀಡಿ ಅಂಕಗಳನ್ನು ಬಾಚುತ್ತಿದ್ದುದ್ದು ಇದಕ್ಕೆ ಉತ್ತಮ ನಿದರ್ಶನ. ಮತ್ತೋರ್ವ ರೈಡರ್‌ ಚಂದ್ರನ್‌ ರಂಜಿತ್‌ ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರದಿರುವುದು ತಂಡಕ್ಕೆ ದೊಡ್ಡ ಹಿನ್ನೆಡೆಯಾಗಿದೆ. ಆದರೆ ಡಿಫೆಂಡಿಂಗ್‌ ವಿಭಾಗದಲ್ಲಿ ಯುವ ಆಟಗಾರರಾದ ಸೌರಭ್‌ ಮತ್ತು ಅಮಾನ್‌ ಬಲಿಷ್ಠವಾಗಿ ಗೋಚರಿಸಿದ್ದಾರೆ, ಇವರಿಗೆ ಮತ್ತೋರ್ವ ಆಲ್‌ರೌಂಡರ್‌ ಭರತ್‌ ಉತ್ತಮ ಸಾಥ್‌ ನೀಡಿದರೆ ಬುಲ್ಸ್‌ ಮೇಲುಗೈ ಸಾಧಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ:ಭಾರತದ ಅವಳಿ ವೈಟ್‌ವಾಶ್‌ ಪರಾಕ್ರಮ

ಗುಜರಾತ್‌ ಸಮತೋಲಿತ
ಆರಂಭಿಕ ಪಂದ್ಯದಲ್ಲಿ ಸತತವಾಗಿ ಎಡವುತ್ತಿದ್ದ ಗುಜರಾತ್‌ ಸೂಪರ್‌ ಜೈಂಟ್ಸ್‌ ಬಳಿಕ ಸಂಘಟಿತ ಹೋರಾಟ ನೀಡುವ ಮೂಲಕ ಪ್ಲೇ ಆಫ್ ಹಂತ ತಲುಪುವಲ್ಲಿ ಯಶಸ್ವಿಯಾಯಿತು. ತಂಡ ಎಲ್ಲ ವಿಭಾಗಗಳಲ್ಲಿಯೂ ಉತ್ತಮ ಸಮತೋಲನ ಹೊದಿದೆ. ರೈಡಿಂಗ್‌ನಲ್ಲಿ ಬುಲ್ಸ್‌ ತಂಡದ ಮಾಜಿ ಆಟಗಾರ ಅಜಯ್‌ ಕುಮಾರ್‌, ಮಹೇಂದರ್‌ ರಜಪೂತ್‌, ರಾಕೇಶ್‌ ಉತ್ತಮ ಲಯದಲ್ಲಿದ್ದಾರೆ. ರಕ್ಷಣಾ ವಿಭಾಗದಲ್ಲಿ ನಾಯಕ ಸುನೀಲ್‌ ಕುಮಾರ್‌ ಹಾಗೂ ಕನ್ನಡಿಗ ಗಿರೀಶ್‌ ಮಾರುತಿ ಎದುರಾಳಿಗಳನ್ನು ಕಟ್ಟಿಹಾಕಬಲ್ಲರು.

ಗೆದ್ದ ತಂಡ ಸೆಮಿಫೈನಲ್‌ಗೆ
ಎಲಿಮಿನೇಟೆರ್‌ ಪಂದ್ಯಗಳಲ್ಲಿ ಗೆದ್ದ ತಂಡಗಳು ಸೆಮಿಫೈನಲ್‌ಗೆ ತೇರ್ಗಡೆಯಾಗಲಿವೆ. ಅದರಂತೆ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡ ಪಾಟ್ನಾ ವಿರುದ್ಧ, ದ್ವಿತೀಯ ಎಲಿಮಿನೇಟರ್‌ ವಿಜೇತ ತಂಡ ದಬಾಂಗ್‌ ದಿಲ್ಲಿ ಜತೆ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ. ಪಾಟ್ನಾ, ದಿಲ್ಲಿ ನೇರವಾಗಿ ಸೆಮಿಫೈನಲ್‌ ಪ್ರವೇಶಿಸಿವೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.