ಫೈನಲ್‌ ಪ್ರವೇಶದ ಕನಸಿನಲ್ಲಿ ಬುಲ್ಸ್‌

ಇಂದು ಪ್ರೊ ಕಬಡ್ಡಿ: ಸೆಮಿಫೈನಲ್‌ ಸಮರ

Team Udayavani, Oct 16, 2019, 5:23 AM IST

u-31

ಅಹ್ಮದಾಬಾದ್‌: ಪ್ರೊ ಕಬಡ್ಡಿ 7ನೇ ಆವೃತ್ತಿ ಸೆಮಿಫೈನಲ್‌ ಕಾಳಗ ಬುಧವಾರ ಜರಗಲಿದೆ. ಅಹ್ಮದಾಬಾದ್‌ನ ಟ್ರಾನ್ಸ್‌ ಸ್ಟೇಡಿಯಾದಲ್ಲಿನ ಪಂದ್ಯ ಭಾರೀ ಕುತೂಹಲ
ಕೆರಳಿಸಿದೆ.

ಸೆಮಿಫೈನಲ್‌ ಒಂದರಲ್ಲಿ ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡವು ಅಂಕಪಟ್ಟಿಯ ಅಗ್ರಸ್ಥಾನಿ ಬಲಿಷ್ಠ ದಬಾಂಗ್‌ ಡೆಲ್ಲಿ ತಂಡವನ್ನು ಎದುರಿಸಲಿದೆ. ಸೆಮಿಫೈನಲ್‌ ಎರಡರಲ್ಲಿ ಯು ಮುಂಬಾ ತಂಡವು ಬೆಂಗಾಲ್‌ ವಾರಿಯರ್ ವಿರುದ್ಧ ಸೆಣಸಲಿದೆ. ಸೋಮವಾರ ನಡೆದಿದ್ದ ಮೊದಲ ಎಲಿಮಿನೇಟರ್‌ನಲ್ಲಿ ಬೆಂಗಳೂರು ಬುಲ್ಸ್‌ ತಂಡವು ಯುಪಿ ಯೋಧಾವನ್ನು ಮಣಿಸಿದ್ದರೆ, ಎರಡನೇ ಎಲಿಮಿನೇಟರ್‌ನಲ್ಲಿ ಯು ಮುಂಬಾ ತಂಡವು ಹರ್ಯಾಣ ಸ್ಟೀಲರ್ ತಂಡಕ್ಕೆ ಆಘಾತ ನೀಡಿ ಸೆಮಿಫೈನಲ್‌ಗೆ ಪ್ರವೇಶಿಸಿತ್ತು.

ಗೆಲುವಿಗಾಗಿ ಹಾತೊರೆಯುತ್ತಿರುವ ಅಗ್ರ ನಾಲ್ಕು ತಂಡಗಳು ಇದೀಗ ಅ.19ರಂದು ನಡೆಯಲಿರುವ ಫೈನಲ್‌ಗೆ ಪ್ರವೇಶಿಸುವತ್ತ ಚಿತ್ತ ನೆಟ್ಟಿವೆ. ಆದರೆ ಬುಲ್ಸ್‌ ತಂಡವನ್ನು ಎದುರಿಸುತ್ತಿರುವ ಡೆಲ್ಲಿ ಹಾಗೂ ಯು ಮುಂಬಾ ತಂಡಕ್ಕೆ ಎದುರಾಗುತ್ತಿರುವ ಬೆಂಗಾಲ್‌ ತಂಡವನ್ನು ಅಷ್ಟು ಸುಲಭದಲ್ಲಿ ಮಣಿಸುವುದು ಅಸಾಧ್ಯ, ಇದು ಕಬಡ್ಡಿ ಪಂಡಿತರ ಲೆಕ್ಕಾಚಾರ.

ಪವನ್‌ ಬಲಿಷ್ಠ ಆಟಗಾರ
ಪವನ್‌ ಸೆಹ್ರಾವತ್‌ ಬಲಿಷ್ಠ ಆಟಗಾರರಾಗಿ ಮೂಡಿ ಬಂದಿದ್ದಾರೆ. ಎದುರಾಳಿ ತಂಡಕ್ಕೆ ಬಿಡಿಸಲಾರದ ಒಗಟಾಗಿದ್ದಾರೆ. ಒಟ್ಟಾರೆ ಹೇಳುವುದಾದರೆ “ವನ್‌ ಮ್ಯಾನ್‌ ಆರ್ಮಿ’. ರೈಡಿಂಗ್‌ನಲ್ಲಿ ಮಿಂಚಿನಂತೆ ಅಂಕ ಕಲೆ ಹಾಕಬಲ್ಲ ವೇಗದೂತ. ಅಂತಹ ಆಟಗಾರನನ್ನು ನಿಯಂತ್ರಿಸುವುದು ಸುಲಭವಲ್ಲ. ಇದನ್ನು ಈಗಾಗಲೇ ಎದುರಾಳಿ ತಂಡವು ಸರಿಯಾಗಿ ಅರಿತುಕೊಂಡಂತಿದೆ. ಪಂದ್ಯದಿಂದ ಪಂದ್ಯಕ್ಕೆ ಪವನ್‌ ರೈಡಿಂಗ್‌ ಗುಣಮಟ್ಟ ದ್ವಿಗುಣಗೊಂಡಿದೆ. ಪವನ್‌ ಹೆಚ್ಚು ಆಕ್ರಮಣಕಾರಿ ಆಟ ಆಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ, ಕೊನೆಯ 10 ನಿಮಿಷ ಇರುವಾಗ ಹಲವು ಪಂದ್ಯಗಳನ್ನು ಬುಲ್ಸ್‌ಗೆ ಗೆಲ್ಲಿಸಿಕೊಟ್ಟಿದ್ದಾರೆ. ಒಟ್ಟಾರೆ ಕೊನೆಯ 10 ನಿಮಿಷ ಇರುವಾಗ ಅವರು ದಾಖಲಿಸಿರುವ ಒಟ್ಟಾರೆ ರೈಡಿಂಗ್‌ ಅಂಕಗಳ ಸಂಖ್ಯೆ 100. ಇದು ಪವನ್‌ ಎಷ್ಟು ಆಕ್ರಮಣಕಾರಿ ಎನ್ನುವುದಕ್ಕೆ ಸಾಕ್ಷಿ.

ರಕ್ಷಣಾ ವಿಭಾಗದಲ್ಲಿ ಬುಲ್‌ಗೆ ಸೌರಭ್‌, ಅಮಿತ್‌ ಹಾಗೂ ಮಹೇಂದರ್‌ ಸಾಥ್‌ ನೀಡಿದ್ದೇ ಆದರೆ ಬೆಂಗಳೂರು ಫೈನಲ್‌ಗೆ ಲಗ್ಗೆ ಇಡುವುದರಲ್ಲಿ ಯಾವುದೇ ಅನುಮಾನ ಬೇಡ.

ಡೆಲ್ಲಿ ಪ್ರಬಲ ಸ್ಪರ್ಧಿ
ಡೆಲ್ಲಿ ತಂಡವು ಸಂಘಟಿತ ಆಟವಾಡುತ್ತಿದೆ. ಈ ಲೆಕ್ಕದಲ್ಲಿ ನೋಡುವುದಾದರೆ ಬೆಂಗಳೂರಿಗಿಂತ ಡೆಲ್ಲಿಗೆ ಗೆಲುವಿನ ಅವಕಾಶ ಹೆಚ್ಚಿದೆ. ನವೀನ್‌ ಕುಮಾರ್‌ ರೈಡಿಂಗ್‌ನಲ್ಲಿ ಡೆಲ್ಲಿ ತಂಡದ ಬೆನ್ನೆಲುಬು, ಅವರನ್ನು ಕಟ್ಟಿಹಾಕುವುದು ಸುಲಭವಲ್ಲ. ಚಂದ್ರನ್‌ ರಂಜಿತ್‌, ವಿಜಯ್‌, ಮೆರಾಜ್‌ ಶೇಖ್‌ ಅಪ್ರತಿಮ ಫಾರ್ಮ್ನಲ್ಲಿದ್ದು ಡೆಲ್ಲಿ ಗೆಲುವಿನ ಸಾಧ್ಯತೆ ಹೆಚ್ಚಿಸಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.