ಕ್ರೀಡೆ ಗೆದ್ದ ಕ್ಷಣವಿದು!


Team Udayavani, Aug 3, 2021, 8:30 PM IST

Untitled-2

ಒಲಿಂಪಿಕ್ಸ್ ಕೂಟದ ಸ್ಪರ್ಧಾತ್ಮಕ ದೃಶ್ಯಗಳ ನಡುವೆ ಇಂತಹ ಮಾನವೀಯ ಮುಖಗಳು ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರವನ್ನು ಪಡೆಯುವುದಿಲ್ಲ. ಈ ದೃಶ್ಯವು ಟೋಕಿಯೊ ಓಲಂಪಿಕ್ ನ  ಪುರುಷರ ಹೈಜಂಪ್ ಫೈನಲ್ ಪಂದ್ಯದಲ್ಲಿ ನಡೆದ ಒಂದು ಘಟನೆ. ಯಾರ ಮನಸ್ಸನ್ನೂ ಗಾಢವಾಗಿ ತಟ್ಟುವ ಸಂದೇಶ ಇಲ್ಲಿ ಅಡಗಿದೆ. ಓದುತ್ತಾ ಹೋಗಿ.

ಪುರುಷರ ಹೈಜಂಪ್ ಫೈನಲ್ಲಿನಲ್ಲಿ ಇಟಲಿಯ ಜಿಯಾನ್ ಮಾರ್ಕೊ ತಂಬರಿ ಸ್ಪರ್ಧೆಯು ಕತಾರ್ ದೇಶದ ಮುತಾಜ್ ಈಸಾ ಬಾರ್ಶಿಮ್ ಜೊತೆಗಿತ್ತು.ಇಬ್ಬರು ಸ್ಪರ್ಧಿಗಳೂ 2.37 ಮೀಟರ್ ಎತ್ತರ ಹಾರಿದ್ದರಿಂದ ರಿಸಲ್ಟ್ ಲೆವೆಲ್ ಆಯಿತು.

ನಂತರದಲ್ಲಿ ತೀರ್ಪುಗಾರರು ಇಬ್ಬರೂ ಸ್ಪರ್ಧಿಗಳಿಗೆ ತಲಾ ಮೂರು ಜಂಪ್ ಮಾಡುವ ಅವಕಾಶಗಳನ್ನು ನೀಡಿದರು. ಇಬ್ಬರೂ ಮೂರೂ ಬಾರಿಯೂ 2.37 ಮೀ.ಗಿಂತ ಹೆಚ್ಚಿನ ಎತ್ತರ ಹಾರಲೆ ಇಲ್ಲ! ಹಾಗಾಗಿ ಇಬ್ಬರಿಗೂ ಮತ್ತೊಂದು  ಅವಕಾಶವನ್ನು ನೀಡಲಾಯಿತು.

ಆದರೆ ಇಟಲಿಯ ಸ್ಪರ್ಧಿ ತಂಬರಿಯ ಕಾಲಿಗೆ ಗಂಭೀರ ಪೆಟ್ಟಾದ್ದರಿಂದ ಆತನು ದುಃಖದಿಂದ ಕೊನೆಯ ಅವಕಾಶವನ್ನು ಉಪಯೋಗ ಮಾಡದೆ ಹಿಂದೆ ಸರಿದನು.

ಈ ಕ್ಷಣದಲ್ಲಿ ಕತಾರ್ ದೇಶದ  ಬಾರ್ಶಿಮ್ ಎದುರಿಗೆ ಯಾವ ಸ್ಪರ್ಧಿ ಕೂಡ ಇಲ್ಲದೆ ಆತನು   ಸುಲಭವಾಗಿ ಚಿನ್ನದ ಪದಕ ಧರಿಸಲು ಕೊರಳು ಒಡ್ಡಬಹುದಿತ್ತು.

ಆದರೆ ಬಾರ್ಶಿಮ್ ತಲೆಯಲ್ಲಿ ನಡೆಯುತ್ತಿದ್ದ ವಿಚಾರವೇ ಬೇರೆ ಇತ್ತು. ಅವನು ಅಲ್ಲಿದ್ದ ಒಲಿಂಪಿಕ್ಸ್  ಅಧಿಕಾರಿಗಳನ್ನು “ನಾನು ಕೂಡ  ಈ ಅಂತಿಮ ಅವಕಾಶವನ್ನು ಬಳಸಿಕೊಳ್ಳದಿದ್ದರೆ ಬಂಗಾರದ ಪದಕವನ್ನ ಇಬ್ಬರಿಗೂ ಹಂಚುತ್ತೀರಲ್ಲವೇ?” ಅಂತ ಪ್ರಶ್ನಿಸಿದ!

ಅಧಿಕಾರಿಗಳು ತಮ್ಮಲ್ಲಿ ಪರಾಮರ್ಶೆ ಮಾಡಿ ‘ಹೌದು.  ಹಾಗಾದಲ್ಲಿ ನಿಯಮದ ಪ್ರಕಾರ ನಿಮ್ಮಿಬ್ಬರನ್ನೂ ಜಂಟಿಯಾಗಿ ವಿಜೇತರೆಂದು ಘೋಷಿಸಲಾಗುತ್ತದೆ.’ ಎಂದರು.

ಆಗ ಬಾರ್ಶಿಮ್ ಹೆಚ್ಚು ಸಮಯವನ್ನು ತೆಗೆದುಕೊಳ್ಳದೇ ತಕ್ಷಣವೇ ತಾನು ಕೂಡ ಕೊನೆಯ ಅವಕಾಶದಿಂದ ಹಿಂದೆ ಸರಿಯುವುದಾಗಿ ತಿಳಿಸಿದನು! ಅಧಿಕಾರಿಗಳು ಒಂದು ಕ್ಷಣ ಚಕಿತರಾದರು. ಯಾಕೆಂದರೆ ಅಂತಹ ಘಟನೆ ಒಲಿಂಪಿಕ್ಸ್ ಕೂಟದಲ್ಲಿ ಅದುವರೆಗೂ ನಡೆದಿರಲಿಲ್ಲ! ಅಧಿಕಾರಿಗಳು ಇಬ್ಬರೂ ಸ್ಪರ್ಧಿಗಳನ್ನು ಜಂಟಿಯಾಗಿ ಚಿನ್ನದ ಪದಕದ ವಿಜೇತರೆಂದು ಘೋಷಿಸಿದರು.

ಇದನ್ನು ತಿಳಿದ ಇಟಲಿಯ ಪ್ರತಿಸ್ಪರ್ಧಿ ಜಿಯಾನ್ ಮಾರ್ಕೊ ತಂಬರಿ ಅತ್ಯಂತ ಸಂತಸ ಮತ್ತು ಭಾವಸ್ಪರ್ಶದಿಂದ ಹಾರಿ  ಬಾರ್ಶಿಮನನ್ನು ಅಪ್ಪಿಕೊಂಡ. ಅವರಿಬ್ಬರು ಕೂಡ ಭಾವುಕರಾಗಿ ಕಣ್ಣೀರು ಹರಿಸಿದರು.

ಇದನ್ನು ನೋಡಿದ ಜನರೆಲ್ಲರೂ ಕೂಡ ಕಣ್ಣೀರು ಸುರಿಸಿ ಚಪ್ಪಾಳೆ ತಟ್ಟಿದರು. ಅಲ್ಲದೇ ಸ್ಪರ್ಧಿಗಳ, ಅದರಲ್ಲೂ ಕತಾರ್ ದೇಶದ ಮುತಾಜ್ ಈಸಾ ಬಾರ್ಶಿಮರ ಕ್ರೀಡಾ ಮನೋಭಾವಕ್ಕೆ ಮನಸೋತಿದ್ದರು.

ಕ್ರೀಡೆಯಲ್ಲಿ ಸೋಲು, ಗೆಲುವುಗಳನ್ನು ಮೀರಿ ನಿಂತ ಹೃದಯಸ್ಪರ್ಶಿ ಘಟನೆ ಇದು. ಕ್ರೀಡೆಗೆ ಭಾಷೆ, ದೇಶ, ಮತ ಮತ್ತು ಧರ್ಮಗಳ ಗಡಿ ಇರುವುದಿಲ್ಲ ಎಂಬುದನ್ನು ಈ ಘಟನೆಯು ನಿರೂಪಿಸಿತು. ಗೆದ್ದವರು, ಸೋತವರು ಯಾರು ಎಂಬುದಕ್ಕಿಂತ ಕ್ರೀಡೆ ಗೆದ್ದಿತು ಎಂದು ಪ್ರೂವ್ ಆದ ಘಟನೆ ಇದು!

ಸಣ್ಣ ಸಣ್ಣ ವಸ್ತುವನ್ನು ಹಂಚಿಕೊಳ್ಳುವ ವಿಷಯಕ್ಕೂ ಮನುಷ್ಯ ಸ್ವಾರ್ಥಿಯಾಗುತ್ತಿರುವ ಇಂದಿನ ದಿನಗಳಲ್ಲಿ ಅನಾಯಾಸವಾಗಿ ತನ್ನದಾಗುತ್ತಿದ್ದ ವಿಶ್ವ ಮಟ್ಟದ  ಬಂಗಾರ ಪದಕವನ್ನು ಪ್ರತಿಸ್ಪರ್ಧಿಯೊಂದಿಗೆ ಹಂಚಿಕೊಳ್ಳಲು ತಾನಾಗಿಯೇ ಮುಂದಾದ ಕತಾರನ ಮುತಾಜ್ ಈಸಾ ಬಾರ್ಶಿಮ್ ಗೆ ಹೃತ್ಪೂರ್ವಕ ಅಭಿನಂದನೆಗಳು.

 

-ರಾಜೇಂದ್ರ ಭಟ್,ಶಿಕ್ಷಕರು

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.