ಟೋಕಿಯೊ ಒಲಿಂಪಿಕ್ಸ್‌ ಹಾಕಿ-2020: ಮೊದಲ ಗುರಿ ಸೆಮಿ: ಮನ್‌ಪ್ರೀತ್‌


Team Udayavani, Jan 1, 2020, 11:39 PM IST

MANPREETH-SINGH

ಹೊಸದಿಲ್ಲಿ: ಇದು ಒಲಿಂಪಿಕ್ಸ್‌ ವರ್ಷ. ಜುಲೈ-ಆಗಸ್ಟ್‌ ತಿಂಗಳಲ್ಲಿ ಜಪಾನ್‌ ರಾಜಧಾನಿ ಟೋಕಿಯೋದಲ್ಲಿ ವಿಶ್ವದ ಮಹೋನ್ನತ ಕ್ರೀಡಾಕೂಟ ಜರಗಲಿದೆ. ಭಾರತದ ಪಾಲಿಗೆ ಒಲಿಂಪಿಕ್ಸ್‌ ಎಂದೊಡನೆ ಕಣ್ಮುಂದೆ ಸುಳಿಯುವ ಕ್ರೀಡೆಯೆಂದರೆ ಹಾಕಿ. ಒಂದು ಕಾಲದ ಹಾಕಿ ಸಾಮ್ರಾಟ ನಾಗಿ ಮೆರೆದ ಭಾರತವಿಲ್ಲಿ ಗತವೈಭ ವವನ್ನು ಪುನರಾವರ್ತಿಸಲು ಶಕ್ತಿಮೀರಿ ಪ್ರಯತ್ನಿಸಲಿದೆ.

ಈ ಸಂದರ್ಭದಲ್ಲಿ ಮಾತಾಡಿದ ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌, ಅಗ್ರ ನಾಲ್ಕರಲ್ಲಿ ಸ್ಥಾನ ಸಂಪಾದಿಸುವುದು ಭಾರತದ ಮೊದಲ ಗುರಿ ಆಗಿದೆ, ಆದರೆ ನಾವು ಫೈನಲ್‌ನಲ್ಲಿ ಆಡುವ ವಿಶ್ವಾಸವಿದೆ ಎಂದಿದ್ದಾರೆ.

“ಒಲಿಂಪಿಕ್ಸ್‌ ಹಾಕಿ ತಯಾರಿಗೆ ಉಳಿದಿರುವುದು 6 ತಿಂಗಳು ಮಾತ್ರ. ಪ್ರತೀ ದಿನವೂ, ಪ್ರತಿಯೊಂದು ಹಂತದಲ್ಲೂ ನಮ್ಮ ಯೋಜನೆ, ಕಾರ್ಯತಂತ್ರಗಳಲ್ಲಿ ಸುಧಾರಣೆ ಆಗಬೇಕಿದೆ. ಈಗಾಗಲೇ ಕೋಚ್‌ ಗ್ರಹಾಂ ರೀಡ್‌ ಮಾರ್ಗದರ್ಶನದಲ್ಲಿ ನಾವು ಕಠಿನ ದುಡಿಮೆಯಲ್ಲಿ ತೊಡಗಿದ್ದೇವೆ. ನಿರೀಕ್ಷಿತ ಫ‌ಲಿತಾಂಶ ಲಭಿಸುವ ವಿಶ್ವಾಸ ಇದೆ’ ಎಂದು ಮನ್‌ಪ್ರೀತ್‌ ಹೇಳಿದರು.

“ಟೋಕಿಯೊದಲ್ಲಿ ಸೆಮಿಫೈನಲ್‌ ತಲಪುವುದು ಮೊದಲ ಗುರಿ. ಇಲ್ಲಿಂದ ಮುಂದೆ ಪಂದ್ಯಾವಳಿ ಮುಕ್ತವಾಗಿರುತ್ತದೆ. ಅದು ಯಾರದೇ ಪಂದ್ಯ ವಾಗಿರಬಹುದು. ಫೈನಲ್‌ ಆಡುವ ಸಾಮರ್ಥ್ಯ ಭಾರತಕ್ಕಿದೆ ಎಂಬುದು ನನ್ನ ನಂಬಿಕೆ..’ ಎಂಬುದಾಗಿ ಮನ್‌ಪ್ರೀತ್‌ ಅಭಿಪ್ರಾಯಪಟ್ಟರು.

2019 ಫ‌ಲಪ್ರದ ವರ್ಷ
“2019 ನಮ್ಮ ಪಾಲಿಗೆ ಫ‌ಲಪ್ರದ ವರ್ಷ ವಾಗಿತ್ತು. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಸಂಪಾದಿಸುವುದೇ ಮುಖ್ಯ ಗುರಿ ಆಗಿತ್ತು. ಹಾಗೆಯೇ ವಿಶ್ವ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನ ಕಾಯ್ದುಕೊಂಡದ್ದು ಕೂಡ ದೊಡ್ಡ ಸಾಧನೆ’ ಎಂದರು.

“ಕಳೆದ ವರ್ಷ ಬಹಳಷ್ಟು ಮಂದಿ ಯುವ ಆಟಗಾರರು ಮೊದಲ ಅಂತಾ ರಾಷ್ಟ್ರೀಯ ಪಂದ್ಯವನ್ನಾಡಿದರು. ಎಲ್ಲರೂ ಪ್ರತಿಭಾನ್ವಿತರೇ ಆಗಿದ್ದರು. ಆಡುವ ಬಳಗವೀಗ ದೊಡ್ಡ ಮಟ್ಟದಲ್ಲಿ ವಿಸ್ತರಿಸಲ್ಪಟ್ಟಿದೆ. ಇದೊಂದು ಉತ್ತಮ ಬೆಳವಣಿಗೆ. ಅಂತಾರಾಷ್ಟ್ರೀಯ ಪಂದ್ಯಗಳ ಒತ್ತಡವನ್ನು ನಿಭಾಯಿಸಬಲ್ಲ ಸಾಮರ್ಥ್ಯ ಇವರಲ್ಲಿ ಕಂಡುಬಂದಿದೆ…’ ಎಂಬುದಾಗಿ ಮನ್‌ಪ್ರೀತ್‌ ಹೇಳಿದರು.

ಏಶ್ಯನ್‌ ಚಾಂಪಿಯನ್ಸ್‌
ಭಾರತ ಸತತವಾಗಿ 2016 ಮತ್ತು 2018ರ “ಏಶ್ಯನ್‌ ಚಾಂಪಿಯನ್ಸ್‌’ ಹಾಕಿ ಪ್ರಶಸ್ತಿ ಜಯಿಸಿದ್ದನ್ನೂ ಮನ್‌ಪ್ರೀತ್‌ ಈ ಸಂದರ್ಭದಲ್ಲಿ ಪ್ರಸ್ತಾವಿಸಿದರು. 2020ರ ಅಕ್ಟೋಬರ್‌ನಲ್ಲಿ ಮತ್ತೆ ಈ ಪಂದ್ಯಾವಳಿ ಏರ್ಪಡಲಿದ್ದು, ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸುವುದು ತಮ್ಮ ಗುರಿ ಎಂದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.