ಪ್ರಥಮ ಏಕದಿನ: ವಿಲಿಯಮ್ಸನ್ -ಲ್ಯಾಥಂ ದಾಖಲೆಯ ಜೊತೆಯಾಟಕ್ಕೆ ಮಣಿದ ಭಾರತ


Team Udayavani, Nov 25, 2022, 3:02 PM IST

Tom Latham and Kane Williamson master match winning chase against India

ಆಕ್ಲಂಡ್: ಭಾರತದ ಅನನುಭವಿ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ನ್ಯೂಜಿಲ್ಯಾಂಡ್ ನ ಅನುಭವಿ ಆಟಗಾರರಾದ ಕೇನ್ ವಿಲಿಯಮ್ಸನ್ ಮತ್ತು ಟಾಮ್ ಲ್ಯಾಥಂ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಗೆ ಜಯ ತಂದಿತ್ತಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿದರೆ, ಕಿವೀಸ್ ಕೇವಲ ಮೂರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಧವನ್- ಅಯ್ಯರ್ ಆಟ: ಟಾಸ್ ಸೋತರು ಮೊದಲು ಬ್ಯಾಟಿಂಗ್ ನಡೆಸುವ ಅವಕಾಶ ಪಡೆದ ಧವನ್ ಪಡೆಗೆ ಉತ್ತಮ ಆರಂಭ ದೊರಕಿತು. ನಾಯಕ ಧವನ್ ಮತ್ತು ಗಿಲ್ ಮೊದಲ ವಿಕೆಟ್ ಗೆ 124 ರನ್ ಜೊತೆಯಾಟವಾಡಿದರು. ಇಬ್ಬರೂ ತಲಾ ಅರ್ಧಶತಕ ಬಾರಿಸಿದರು. 50 ರನ್ ಗಳಿಸಿದ ಗಿಲ್ ಫರ್ಗ್ಯುಸನ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ನಾಯಕ ಧವನ್ 72 ರನ್ ಗೆ ಔಟಾದರು.

ವಿಕೆಟ್ ಕೀಪರ್ ಪಂತ್ ಕೇವಲ 15 ರನ್ ಮಾಡಿ ಔಟಾದರು. ಸೂರ್ಯಕುಮಾರ್ ಯಾದವ್ ಅವರು ಕೇವಲ ನಾಲ್ಕು ರನ್ ಮಾಡಿ ಅಗ್ಗಕ್ಕೆ ಔಟಾದರು. ಇದರ ಮಧ್ಯೆ ಕ್ರೀಸ್ ಕಚ್ಚಿ ನಿಂತ ಶ್ರೇಯಸ್ ಅಯ್ಯರ್ ನಾಲ್ಕು ಸಿಕ್ಸರ್ ನೆರವಿನಿಂದ 80 ರನ್ ಗಳಿಸಿದರು. ಅವರಿಗೆ ನೆರವು ನೀಡಿದ ಸಂಜು ಸ್ಯಾಮ್ಸನ್ 36 ರನ್ ಮಾಡಿದರು. ಕೊನೆಯಲ್ಲಿ ಸಿಡಿದ ವಾಷಿಂಗ್ಟನ್ ಸುಂದರ್ ಕೇವಲ 16 ಎಸೆತಗಳಲ್ಲಿ ಅಜೇಯ 37 ರನ್ ಬಾರಿಸಿದರು. ಸುಂದರ್ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ಹೊಡೆದರು.

ಕಿವೀಸ್ ಪರ ಟಿಮ್ ಸೌಥಿ ಮತ್ತು ಲ್ಯೂಕಿ ಫರ್ಗ್ಯುಸನ್ ತಲಾ ಮೂರು ವಿಕೆಟ್ ಕಿತ್ತರು. ಧವನ್ ವಿಕೆಟ್ ಕಿತ್ತ ವೇಳೆ ಟಿಮ್ ಸೌಥಿ ಏಕದಿನ ಕ್ರಿಕೆಟ್ ನಲ್ಲಿ 200 ವಿಕೆಟ್ ಪಡೆದ ಸಾಧನೆ ಮಾಡಿದರು.

ಲ್ಯಾಥಂ- ಕೇನ್ ದಾಖಲೆ: ಭಾರತದ ಬೃಹತ್ ಗುರಿಯನ್ನು ಬೆನ್ನತ್ತಿದ ಕಿವೀಸ್ ಗೆ ಉತ್ತಮ ಆರಂಭವೇನು ಸಿಕ್ಕಿರಲಿಲ್ಲ. ಫಿನ್ ಅಲೆನ್ 22 ರನ್ ಮತ್ತು ಡೆವೋನ್ ಕಾನ್ವೆ 24 ರನ್ ಗಳಿಸಿ ಔಟಾದರು. ಡ್ಯಾರೆಲ್ ಮಿಚೆಲ್ ಕೂಡಾ ಕೇವಲ 11 ರನ್ ಔಟಾದರು. 88 ರನ್ ಆಗುವಷ್ಟರಲ್ಲಿ ಕಿವೀಸ್ ನ ಮೂರು ಹುದ್ದರಿ ಬಿದ್ದಿತ್ತು.

ಬಳಿಕ ಜೊತೆಯಾದ ನಾಯಕ ವಿಲಿಯಮ್ಸನ್ ಮತ್ತು ಕೀಪರ್ ಟಾಮ್ ಲ್ಯಾಥಂ ನಾಲ್ಕನೇ ವಿಕೆಟ್ ಗೆ ಅಜೇಯ ಜೊತೆಯಾಟ ನಡೆಸಿದರು. ಇವರಿಬ್ಬರು 221 ರನ್ ಗಳ ದಾಖಲೆಯ ಜೊತೆಯಾಟವಾಡಿದರು.

ಆರಂಭದಲ್ಲಿ ನಿಧಾನವಾಗಿ ಇನ್ನಿಂಗ್ ಕಟ್ಟಿದ ಇಬ್ಬರು ನಂತರ ದೊಡ್ಡ ಹೊಡೆತಗಳಿಗೆ ಕೈಹಾಕಿದರು. ಅದರಲ್ಲೂ ಕೊನೆಯಲ್ಲಿ ಸ್ಫೋಟಕವಾಗಿ ಆಡಿದ ಲ್ಯಾಥಂ ಶತಕ ಬಾರಿಸಿದರು. 104 ಎಸೆತ ಎದುರಿಸಿದ ಲ್ಯಾಥಂ ಐದು ಸಿಕ್ಸರ್ ನೆರವಿನಿಂದ ಅಜೇಯ 145 ರನ್ ಗಳಿಸಿದರು. ನಾಯಕ ವಿಲಿಯಮ್ಸನ್ 94 ರನ್ ಗಳಿಸಿ ಔಟಾಗದೆ ಉಳಿದರು.

ಭಾರತದ ಪರ ಇಂದು ಪದಾರ್ಪಣೆ ಮಾಡಿದ ಉಮ್ರಾನ್ ಮಲಿಕ್ ಎರಡು ವಿಕೆಟ್ ಕಿತ್ತರು. ಒಂದು ವಿಕೆಟ್ ಶಾರ್ದೂಲ್ ಠಾಕೂರ್ ಪಾಲಾಯಿತು.

ನ್ಯೂಜಿಲೆಂಡ್ ಎರಡನೇ ಬಾರಿಗೆ ಏಕದಿನದಲ್ಲಿ ಭಾರತದ ವಿರುದ್ಧ 300+ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದೆ. ಅತ್ಯಧಿಕ: 348 ಹ್ಯಾಮಿಲ್ಟನ್, 2020

ಕೇನ್ ಮತ್ತು ಲ್ಯಾಥಂ ಭಾರತದ ವಿರುದ್ಧ ಏಕದಿನ ಪಂದ್ಯದಲ್ಲಿ ನಾಲ್ಕನೇ ವಿಕೆಟ್ ಗೆ ಅತ್ಯಧಿಕ ರನ್ ಜೊತೆಯಾಟವಾಡಿದ ಸಾಧನೆ ಮಾಡಿದರು. 2009 ರಲ್ಲಿ ಸೆಂಚುರಿಯನ್‌ ನಲ್ಲಿ ಮೊಹಮ್ಮದ್ ಯೂಸುಫ್ ಮತ್ತು ಶೋಯೆಬ್ ಮಲಿಕ್ ಅವರ 206 ರನ್‌ ದಾಖಲೆ ಮುರಿಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.