ಸ್ಟೀವನ್‌ ಸ್ಮಿತ್‌: ಮೋಸಗಾರ ಎಂದು ಜರೆದವರ ಮುಂದೆಯೇ ಮೆರೆದ ಮಾಂತ್ರಿಕ


Team Udayavani, Nov 4, 2019, 5:15 PM IST

smith

ಅಂದು ಆ ಆಟಗಾರ ಎಡ್ಜ್ ಬಾಸ್ಟನ್ ಅಂಗಳಕ್ಕೆ ಕಾಲಿಟ್ಟಾಗ ಗ್ಯಾಲರಿಗಳಲ್ಲಿ ಕುಳಿತಿದ್ದ ಪ್ರೇಕ್ಷಕರು ಮೋಸಗಾರ ಎಂದು ಮೂದಲಿಸಿದ್ದರು. ಇಂಗ್ಲೆಂಡ್‌ನ‌ ಹಿರಿಯ ಆಟಗಾರರೆಲ್ಲಾ ವಾಗ್ಬಾಣ ಬಿಟ್ಟು ಆತನ ಆತ್ಮವಿಶ್ವಾಸಕ್ಕೆ ಪೆಟ್ಟು ನೀಡಲು ಪ್ರಯತ್ನಿಸಿದ್ದರು.

30ರ ಹರೆಯದ ಆ ಬ್ಯಾಟ್ಸ್‌ಮನ್‌ ಅದ್ಯಾವುದಕ್ಕೂ ಜಗ್ಗಲಿಲ್ಲ. ಮೊದಲ ಟೆಸ್ಟ್‌ ಎರಡೂ ಇನ್ನಿಂಗ್ಸ್‌ ನಲ್ಲಿ ಶತಕ ಸಿಡಿಸಿ, ಬೈಯ್ದವರಿಂದಲೇ ಭೇಷ್‌ ಎನಿಸಿಕೊಂಡರು. ಹೀಯಾಳಿಸಿದ್ದ ಅಭಿಮಾನಿಗಳಿಂದಲೇ ಚಪ್ಪಾಳೆ ಗಿಟ್ಟಿಸಿ ಖುಷಿಯ ಕಡಲಲ್ಲಿ ತೇಲಿದ್ದರು. ಕಲಾತ್ಮಕ ಆಟದ ಮೂಲಕವೇ ಕ್ರಿಕೆಟ್‌ ಲೋಕದ ಹೃದಯ ಗೆದ್ದ ಆ ತಾರೆ, ಆಸ್ಟ್ರೇಲಿಯಾದ ಸ್ಟೀವನ್‌ ಸ್ಮಿತ್‌.

ಒಂದು ವರ್ಷದ ಹಿಂದಿನ ಮಾತು. ಕೇಪ್‌ಟೌನ್‌ ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಟೆಸ್ಟ್‌ ಪಂದ್ಯದ ವೇಳೆ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸ್ಮಿತ್‌ ಭಾಗಿಯಾಗಿದ್ದರು. ಆಗ ಆಸ್ಟ್ರೇಲಿಯಾ ತಂಡದ ಸಾರಥ್ಯ ವಹಿಸಿದ್ದ ಅವರನ್ನು ಎಲ್ಲರೂ ವಂಚಕ, ಮೋಸಗಾರ ಎಂದೇ ಜರೆದಿದ್ದರು. 2018ರ ಮಾರ್ಚ್‌ 29ರಂದು ಸಿಡ್ನಿಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಅಭಿಮಾನಿಗಳ ಕ್ಷಮೆಯಾಚಿಸಿದ್ದ ಸ್ಮಿತ್‌ ಮಾಧ್ಯಮದವರ ಮುಂದೆ ಬಿಕ್ಕಿ ಬಿಕ್ಕಿ ಅತ್ತಿದ್ದರು.

ಈ ತಪ್ಪು ನನಗೆ ಒಳ್ಳೆಯ ಪಾಠ ಕಲಿಸಿದೆ. ಈಗ ಕಳೆದುಕೊಂಡಿರುವ ಘನತೆ, ಗೌರವವನ್ನು ಖಂಡಿತಾ ಮರಳಿ ಪಡೆಯುತ್ತೇನೆ’ ಎಂದು ಅವರು ಅಂದು ಹೇಳಿದ್ದ ಆ ಮಾತು ಈಗ ಅಕ್ಷರಶಃ ನಿಜವಾಗಿದೆ.

ಮಾಡಿದ ತಪ್ಪಿಗಾಗಿ 12 ತಿಂಗಳ ವನವಾಸ ಮುಗಿಸಿ ಬಂದಿರುವ ಸ್ಮಿತ್‌ ಇಂಗ್ಲೆಂಡ್‌ನ‌ಲ್ಲಿ ನಡೆದ ಆ್ಯಷಸ್‌ ಟೆಸ್ಟ್‌ ಸರಣಿಯಲ್ಲಿ ರನ್‌ ಮಳೆ ಹರಿಸಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ತಂಡ ಕುಸಿತದ ಹಾದಿ ಹಿಡಿದಿದ್ದಾಗ ತಂಡಕ್ಕೆ ಆಸರೆಯಾಗಿದ್ದು ಇದೇ ಸ್ಮಿತ್‌. ಬರೋಬ್ಬರಿ 336 ನಿಮಿಷ ಕ್ರೀಸ್ ನಲ್ಲಿದ್ದ ಅವರು ಇಂಗ್ಲೆಂಡ್‌ ಬೌಲರ್‌ಗಳನ್ನು ಹೈರಾಣಾಗಿಸಿಬಿಟ್ಟಿದ್ದರು. ಅವರು ಕಟ್ಟಿದ ಆ ಇನ್ನಿಂಗ್ಸ್‌ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಎರಡನೇ ಇನ್ನಿಂಗ್ಸ್‌ನಲ್ಲೂ ಜಾದೂ ಮಾಡಿದ್ದ ಸ್ಮಿತ್‌ ತಂಡದ ಗೆಲುವಿನ ರೂವಾರಿಯೂ ಆಗಿದ್ದರು.

ಮೊದಲ ಟೆಸ್ಟ್‌ನಲ್ಲಿ ಶತಕ ಸಿಡಿಸಿದರೂ ಸ್ಮಿತ್‌ ಸಂತೃಪ್ತರಾಗಿರಲಿಲ್ಲ. ಸಂತಸದಲ್ಲಿ ಮೈ ಮರೆತಿರಲೂ ಇಲ್ಲ. ಬದಲಾಗಿ ನೆಟ್‌ನಲ್ಲಿ ಗಂಟೆಗಟ್ಟಲೆ ಬೆವರು ಹರಿಸುತ್ತಿದ್ದರು. ಆಟದ ಬಗ್ಗೆ ಹೊಂದಿದ್ದ ಈ ಬದ್ಧತೆಯೇ ಅವರು ವಿಶ್ವಶ್ರೇಷ್ಠ ಬ್ಯಾಟ್ಸ್‌ಮನ್‌ ಆಗಿ ರೂಪುಗೊಳ್ಳಲು ಕಾರಣ’ ಎಂದು ಆಸ್ಟ್ರೇಲಿಯಾದ ಆಟಗಾರ ಮಿಚೆಲ್‌ ಮಾರ್ಷ್‌ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಬೌನ್ಸರ್‌ ಪೆಟ್ಟಿಗೂ ಅಂಜಲಿಲ್ಲ
ಕ್ರಿಕೆಟ್‌ ಕಾಶಿ ಲಾರ್ಡ್ಸ್‌ನಲ್ಲಿ ನಡೆದಿದ್ದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಜೋಫ್ರಾ ಆರ್ಚರ್‌ 77ನೇ ಓವರ್‌ನ ಎರಡನೇ ಎಸೆದ ಬೌನ್ಸರ್‌ ಸ್ಮಿತ್‌ ಅವರ ಕುತ್ತಿಗೆಗೆ ಬಡಿದಿತ್ತು. ನೋವು ಸಹಿಸಲಾರದ ಸ್ಮಿತ್‌ ಕ್ರೀಸ್‌ನಲ್ಲಿಯೇ ಕುಸಿದು ಬಿದ್ದಿದ್ದರು. ತಂಡದ ವೈದ್ಯಕೀಯ ಸಿಬ್ಬಂದಿ ಅವರನ್ನು ಅಂಗಳದ ಆಚೆ ಕರೆದುಕೊಂಡು ಹೋದರು. ಪೀಟರ್‌ ಸಿಡಲ್‌ ಔಟಾದ ನಂತರ ಮತ್ತೆ ಮೈದಾನಕ್ಕೆ ಮರಳಿದ್ದ ಸ್ಮಿತ್‌ ಬೆನ್‌ ಸ್ಟೋಕ್ಸ್‌ ಹಾಕಿದ 86ನೇ ಓವರ್‌ನಲ್ಲಿ ಸತತ ಎರಡು ಬೌಂಡರಿ ಬಾರಿಸಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಮೆಕ್ಸಿಕನ್‌ ಅಲೆ ಏಳುವಂತೆ ಮಾಡಿದ್ದರು. 92ರನ್‌ ಗಳಿಸಿ ಔಟ್‌ ಆಗಿದ್ದರು. ಕುತ್ತಿಗೆಗೆ ಬಿದ್ದಿದ್ದ ಪೆಟ್ಟು ಗಂಭೀರ ಸ್ವರೂಪದ್ದಾಗಿದ್ದರಿಂದ ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಕಣಕ್ಕಿಳಿಯಲಿಲ್ಲ. ಮೂರನೇ ಟೆಸ್ಟ್‌ಗೆ ಅಲಭ್ಯರಾದರು. ಆ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸೋತಿತು!

ನಾಲ್ಕನೇ ಟೆಸ್ಟ್‌ನಲ್ಲಿ ಸ್ಮಿತ್‌ ಮತ್ತೆ ಪರಾಕ್ರಮ ಮೆರೆದರು. ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ದಾಖಲಿಸಿದ್ದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿಯೂ ಪರಿಣಾಮಕಾರಿ ಬ್ಯಾಟಿಂಗ್‌ ಮಾಡಿ ಮತ್ತೂಮ್ಮೆ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದರು. ಜೊತೆಗೆ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಮರಳಿದ್ದರು. ಈ ಹಾದಿಯಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರನ್ನು ಹಿಂದಿಕ್ಕಿದ್ದರು. ಅಷ್ಟೇ ಅಲ್ಲದೆ ಟೆಸ್ಟ್‌ನಲ್ಲಿ ಅತಿ ವೇಗವಾಗಿ 26 ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್‌ ಎಂಬ ಶ್ರೇಯಕ್ಕೂ ಭಾಜನರಾಗಿದ್ದರು. ಆ್ಯಶಸ್‌ ಸರಣಿಯಲ್ಲಿ ಸತತ ಎಂಟು ಅರ್ಧಶತಕ ಸಿಡಿಸಿದ ಹಿರಿಮೆಯೂ ಅವರದ್ದಾಗಿತ್ತು. ಒಟ್ಟಾರೆಯಾಗಿ ತನ್ನನ್ನು ಮೋಸಗಾರ ಎಂದು ಪದೇ ಪದೆ ಟೀಕಿಸುವವರ ನೆಲದಲ್ಲೆ ಸ್ಮಿತ್‌ ಈ ಸಾಧನೆ ಮಾಡಿರುವುದು ವಿಶೇಷ.

ಅಭಿ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.