
ಐಸಿಸಿ ಟಿ 20 ವಿಶ್ವಕಪ್ ಗೆ ಟೀಮ್ ಇಂಡಿಯಾ : ಸಂಜು ಸ್ಯಾಮ್ಸನ್ ಅಭಿಮಾನಿಗಳ ತೀವ್ರ ನಿರಾಸೆ
Team Udayavani, Sep 12, 2022, 8:18 PM IST

ಮುಂಬಯಿ:ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ ಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಘೋಷಿಸಿದ್ದು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ಆದರೆ, ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅವರು ಸಂಜು ಸ್ಯಾಮ್ಸನ್ ಅವರನ್ನು ಪರಿಗಣಿಸದಿದ್ದುದಕ್ಕೆ ಅಭಿಮಾನಿಗಳು ತೀವ್ರ ನಿರಾಸೆಗೊಂಡಿದ್ದಾರೆ.
ಗಾಯಾಳಾಗಿರುವ ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ತಂಡ ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ಎರಡು ವಿಕೆಟ್ ಕೀಪಿಂಗ್ ಆಯ್ಕೆಗಳೊಂದಿಗೆ ಹೋಗುತ್ತಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ರೋಹಿತ್ ನಾಯಕತ್ವದಲ್ಲಿ ಬಲಿಷ್ಠ ತಂಡ ಕಟ್ಟಿದ ಬಿಸಿಸಿಐ
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಐಪಿಎಲ್ 2022 ರಲ್ಲಿ ತಂಡವನ್ನು ಮುನ್ನಡೆಸಿದ್ದರು, ಅಲ್ಲಿ ಅವರು ರನ್ನರ್ ಅಪ್ ಆಗಿದ್ದರು.
ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರಂತಹ ಪ್ರಮುಖ ಹೆಸರುಗಳು ನಿರೀಕ್ಷಿತ ಸಾಲಿನಲ್ಲಿ ಕಾಣಿಸಲಿಲ್ಲ ಇಬ್ಬರೂ ಇತ್ತೀಚಿನ ದಿನಗಳಲ್ಲಿ ಭಾರತ ತಂಡಕ್ಕಾಗಿ ಟಿ 20 ಕ್ರಿಕೆಟ್ ಆಡಿದ್ದಾರೆ ಆದರೆ ಟಿ 20 ವಿಶ್ವಕಪ್ ತಂಡದಲ್ಲಿ ಮತ್ತು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಟಿ 20 ಸರಣಿಗಳ ಗಳ ತಂಡಗಳಲ್ಲಿ ಸ್ಥಾನವನ್ನು ಕಂಡುಕೊಂಡಿಲ್ಲ.
ಸ್ಯಾಮ್ಸನ್ ಜಿಂಬಾಬ್ವೆ ವಿರುದ್ಧ ತನ್ನ ಕೊನೆಯ ಏಕದಿನ ಸರಣಿಯನ್ನು ಮತ್ತು ವೆಸ್ಟ್ ಇಂಡೀಸ್ ವಿರುದ್ಧ ತನ್ನ ಕೊನೆಯ ಟಿ 20 ಸರಣಿಯನ್ನು ಆಡಿದ್ದರು. ಈ ವರ್ಷದ ಆರಂಭದಲ್ಲಿ ಐರ್ಲೆಂಡ್ ವಿರುದ್ಧದ ಟಿ 20 ಸರಣಿಯಲ್ಲಿ ಅವರು ತಮ್ಮ ಅತ್ಯಧಿಕ ಸ್ಕೋರ್ ಗಳಿಸಿದ್ದರು. ಭಾರತದ ಏಷ್ಯಾಕಪ್ ತಂಡದಿಂದಲೂ ಕೇರಳದ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಅವರನ್ನು ಕಡೆಗಣಿಸಲಾಗಿತ್ತು.
ಟ್ವಿಟರ್ ನಲ್ಲಿ ಅಭಿಮಾನಿಗಳು ಪ್ರತಿಕ್ರಿಯಿಸಿ ನೋವನ್ನು ಹೊರ ಹಾಕಿದ್ದಾರೆ. ಸಾವಿರಾರು ಮಂದಿ ಸಾಮಾಜಿಕ ತಾಣಗಳಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವನಿತಾ ಅಂಡರ್ 19 ವಿಶ್ವಕಪ್: ಕಿವೀಸ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ

ರಾಹುಲ್-ಅಥಿಯಾ ಮದುವೆಗೆ ದುಬಾರಿ ಗಿಫ್ಟ್ ಬಂದಿದ್ದು ನಿಜವೇ? ಇಲ್ಲಿದೆ ಸ್ಪಷ್ಟನೆ

ರನ್ನರ್ ಅಪ್ ಪ್ರಶಸ್ತಿಯೊಂದಿಗೆ ಸಾನಿಯಾ ಮಿರ್ಜಾ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ

ಪುರುಷರ ಹಾಕಿ ವಿಶ್ವಕಪ್: ಇಂದು ಸೆಮಿಫೈನಲ್ ಹೋರಾಟ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…