ಹ್ಯಾರಿಸ್‌,ಟ್ರಿಮೇನ್‌ ಆಸೀಸ್‌ ಟೆಸ್ಟ್‌ ತಂಡದಲ್ಲಿ ಇಬ್ಬರು ಹೊಸಬರು


Team Udayavani, Nov 23, 2018, 6:00 AM IST

aus-cricket.jpg

ಮೆಲ್ಬರ್ನ್: ಪ್ರವಾಸಿ ಭಾರತದೆದುರಿನ ಮೊದಲೆರಡು ಟೆಸ್ಟ್‌ ಪಂದ್ಯಗಳಿಗೆ ಆಸ್ಟ್ರೇಲಿಯದ 14 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ವಿಕ್ಟೋರಿಯಾದ ಆರಂಭಕಾರ ಮಾರ್ಕಸ್‌ ಹ್ಯಾರಿಸ್‌ ಮತ್ತು ಇದೇ ರಾಜ್ಯದ ವೇಗದ ಬೌಲರ್‌ ಕ್ರಿಸ್‌ ಟ್ರಿಮೇನ್‌ ಈ ತಂಡದ 2 ಹೊಸ ಮುಖಗಳಾಗಿದ್ದಾರೆ.

ಪಾಕಿಸ್ಥಾನ ವಿರುದ್ಧ ಯುಎಇಯಲ್ಲಿ ನಡೆದ ಸರಣಿಯಿಂದ ಹೊರಗುಳಿದಿದ್ದ ಬ್ಯಾಟ್ಸ್‌ಮನ್‌ ಪೀಟರ್‌ ಹ್ಯಾಂಡ್ಸ್‌ಕಾಂಬ್‌ ಮರಳಿ ತಂಡವನ್ನು ಕೂಡಿಕೊಂಡಿದ್ದಾರೆ. ಆದರೆ ಮ್ಯಾಟ್‌ ರೆನ್‌ಶಾ ಅವರನ್ನು ಕಡೆಗಣಿಸಲಾಗಿದೆ. ಹೀಗಾಗಿ ಡಿ. 6ರಿಂದ ಅಡಿಲೇಡ್‌ನ‌ಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆರನ್‌ ಫಿಂಚ್‌ ಅವರೊಂದಿಗೆ ಮಾರ್ಕಸ್‌ ಹ್ಯಾರಿಸ್‌ ಇನ್ನಿಂಗ್ಸ್‌ ಆರಂಭಿಸುವುದು ಖಚಿತವಾಗಿದೆ. ದ್ವಿತೀಯ ಟೆಸ್ಟ್‌ ಡಿ. 14ರಿಂದ ಪರ್ತ್‌ನಲ್ಲಿ ನಡೆಯಲಿದೆ.

ಮಾರ್ಕಸ್‌ ಹ್ಯಾರಿಸ್‌ ಪ್ರಸಕ್ತ ಋತುವಿನ ಶೆಫೀಲ್ಡ್‌ ಶೀಲ್ಡ್‌ ಕ್ರಿಕೆಟ್‌ ಸರಣಿಯಲ್ಲಿ ಸರ್ವಾಧಿಕ ರನ್‌ ಬಾರಿಸಿದ ಹೆಗ್ಗಳಿಕೆ ಹೊಂದಿದ್ದಾರೆ (6 ಇನ್ನಿಂಗ್ಸ್‌ಗಳಿಂದ 437 ರನ್‌). ಇದರಲ್ಲಿ ಜೀವನಶ್ರೇಷ್ಠ ಅಜೇಯ 250 ರನ್‌ ಕೂಡ ಸೇರಿದೆ. ಅವರೀಗ ದೊಡ್ಡ ಮಟ್ಟದ ಕ್ರಿಕೆಟಿಗೆ ಮಾನಸಿಕವಾಗಿ ಸಜ್ಜುಗೊಂಡಿದ್ದಾರೆ ಎಂಬುದು ಆಯ್ಕೆ ಸಮಿತಿ ಅಧ್ಯಕ್ಷ ಟ್ರೆವರ್‌ ಹಾನ್ಸ್‌ ಹೇಳಿಕೆ.

ವೇಗಿ ಕ್ರಿಸ್‌ ಟ್ರಿಮೇನ್‌ ಕೂಡ ವಿಕ್ಟೋರಿಯಾ ಪರ ಏಕಪ್ರಕಾರದ ಬೌಲಿಂಗ್‌ ನಿರ್ವಹಣೆ ತೋರುತ್ತ ಬಂದಿದ್ದಾರೆ. 8 ಇನ್ನಿಂಗ್ಸ್‌ಗಳಿಂದ 24 ವಿಕೆಟ್‌ ಉರುಳಿಸಿದ್ದು, 3 ಸಲ ಇನ್ನಿಂಗ್ಸ್‌ ಒಂದರಲ್ಲಿ 5 ಪ್ಲಸ್‌ ವಿಕೆಟ್‌ ಕಿತ್ತಿದ್ದಾರೆ.

ಆಯ್ಕೆಯಾದ ಎಲ್ಲ 14 ಮಂದಿ ಆಟಗಾರರೂ ಟೆಸ್ಟ್‌ ಸರಣಿಗಿಂತ ಮೊದಲು ಇನ್ನೂ ಒಂದು ಶೆಫೀಲ್ಡ್‌ ಶೀಲ್ಡ್‌ ಪಂದ್ಯದಲ್ಲಿ ಆಡಲಿದ್ದಾರೆ. ಇಲ್ಲಿನ ಸಾಧನೆಯನ್ನು ಪರಿಗಣಿಸಿ ಅಂತಿಮ 12ರ ಬಳಗವನ್ನು ಆರಿಸಲಾಗುವುದು. ಉಳಿದಿಬ್ಬರು ದೇಶಿ ಸರಣಿಗೆ ಮರಳಲಿದ್ದಾರೆ ಎಂದು “ಕ್ರಿಕೆಟ್‌ ಆಸ್ಟ್ರೇಲಿಯ’ ತಿಳಿಸಿದೆ.

ಆಸ್ಟ್ರೇಲಿಯ ತಂಡ: ಟಿಮ್‌ ಪೇನ್‌ (ನಾಯಕ), ಆರನ್‌ ಫಿಂಚ್‌, ಮಾರ್ಕಸ್‌ ಹ್ಯಾರಿಸ್‌, ಉಸ್ಮಾನ್‌ ಖ್ವಾಜಾ, ಶಾನ್‌ ಮಾರ್ಷ್‌, ಮಿಚೆಲ್‌ ಮಾರ್ಷ್‌, ಪೀಟರ್‌ ಹ್ಯಾಂಡ್ಸ್‌ಕಾಂಬ್‌, ಟ್ರ್ಯಾವಿಸ್‌ ಹೆಡ್‌, ಪ್ಯಾಟ್‌ ಕಮಿನ್ಸ್‌, ಜೋಶ್‌ ಹ್ಯಾಝಲ್‌ವುಡ್‌, ನಥನ್‌ ಲಿಯೋನ್‌, ಪೀಟರ್‌ ಸಿಡ್ಲ್, ಮಿಚೆಲ್‌ ಸ್ಟಾರ್ಕ್‌, ಕ್ರಿಸ್‌ ಟ್ರಿಮೇನ್‌.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.