ಅಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌: ಭಾರತ 171 ರನ್‌ ಜಯಭೇರಿ


Team Udayavani, Sep 30, 2018, 6:10 AM IST

yashasvi-jaiswal.jpg

ಸಾವರ್‌ (ಬಾಂಗ್ಲಾದೇಶ): ಹಿರಿಯರ 14ನೇ ಏಶ್ಯ ಕಪ್‌ ಕ್ರಿಕೆಟ್‌ ಪಂದ್ಯಾವಳಿ ಮುಗಿದ ಬೆನ್ನಲ್ಲೇ ಬಾಂಗ್ಲಾದೇಶ ಹಾಗೂ ಯುಎಇಯಲ್ಲಿ ಆರಂಭಗೊಂಡ ಅಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌ ಕೂಟದ ತನ್ನ ಮೊದಲ ಪಂದ್ಯದಲ್ಲಿ ಭಾರತ 171 ರನ್ನುಗಳ ಭಾರೀ ಅಂತರದಿಂದ ನೇಪಾಲವನ್ನು ಮಣಿಸಿದೆ.

ಶನಿವಾರ ನಡೆದ “ಎ’ ವಿಭಾಗದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 9 ವಿಕೆಟಿಗೆ 304 ರನ್‌ ಪೇರಿಸಿದರೆ, ನೇಪಾಲ 36.5 ಓವರ್‌ಗಳಲ್ಲಿ 133ಕ್ಕೆ ಕುಸಿಯಿತು.

ಆರಂಭಕಾರ ಯಶಸ್ವಿ ಜೈಸ್ವಾಲ್‌ ಅವರ ಶತಕ (104), ಕೀಪರ್‌ ಸಿಮ್ರಾನ್‌ ಸಿಂಗ್‌ ಅವರ ಬಿರುಸಿನ ಆಟ (82) ಭಾರತದ ಸರದಿಯ ವೈಶಿಷ್ಟéವಾಗಿತ್ತು. ಜೈಸ್ವಾಲ್‌ 113 ಎಸೆತ ಎದುರಿಸಿ 104 ರನ್‌ ಹೊಡೆದರು. ಸಿಡಿಸಿದ್ದು 8 ಬೌಂಡರಿ ಹಾಗೂ 5 ಸಿಕ್ಸರ್‌. ಸಿಮ್ರಾನ್‌ 61 ಎಸೆತಗಳಿಂದ 82 ರನ್‌ ಬಾರಿಸಿದರು. ಇದರಲ್ಲಿ 6 ಫೋರ್‌, 3 ಸಿಕ್ಸರ್‌ ಸೇರಿತ್ತು.

ಅನನುಭವಿ ನೇಪಾಲ ಯಾವ ಹಂತದಲ್ಲೂ ಭಾರತಕ್ಕೆ ಸಾಟಿಯಾಗಲಿಲ್ಲ. 25 ರನ್‌ ಹೊಡೆದ ನಾಯಕ ಆಸಿಫ್ ಶೇಖ್‌ ಅವರದೇ ಹೆಚ್ಚಿನ ಗಳಿಕೆ. ಭಾರತದ ಪರ ಹರ್ಷ್‌ ತ್ಯಾಗಿ ಮತ್ತು ಸಿದ್ಧಾರ್ಥ್ ದೇಸಾಯಿ ತಲಾ 3 ವಿಕೆಟ್‌ ಕಿತ್ತರು.ಭಾರತ ರವಿವಾರ ಯುಎಇ ವಿರುದ್ಧ ಹಾಗೂ ಮಂಗಳವಾರ ಅಫ್ಘಾನಿಸ್ಥಾನ ವಿರುದ್ಧ ಆಡಲಿದೆ.

ರಾಹುಲ್‌ ದ್ರಾವಿಡ್‌ ಗೈರು
ಈ ಪಂದ್ಯಾವಳಿಯಲ್ಲಿ ಭಾರತ ತಂಡ ಕೋಚ್‌ ರಾಹುಲ್‌ ದ್ರಾವಿಡ್‌ ಸೇವೆಯಿಂದ ವಂಚಿತವಾಗಿದೆ. ಅವರು ಭಾರತ “ಎ’ ತಂಡದೊಂದಿಗೆ ಕರ್ತವ್ಯ ನಿಭಾಯಿಸುತ್ತಿರುವುದೇ ಇದಕ್ಕೆ ಕಾರಣ. ದ್ರಾವಿಡ್‌ ಬದಲು ಡಬ್ಲ್ಯು.ವಿ. ರಾಮನ್‌ ಅಂಡರ್‌-19 ತಂಡದ ಕೋಚ್‌ ಆಗಿ ನೇಮಕಗೊಂಡಿದ್ದಾರೆ.

ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ಯಶಸ್ವಿ ಜೈಸ್ವಾಲ್‌.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.