ಅಂಡರ್‌-19 ವಿಶ್ವಕಪ್‌: ವಿಂಡೀಸಿಗೆ ಸೋಲಿನ ಆಘಾತ


Team Udayavani, Jan 16, 2022, 5:30 AM IST

ಅಂಡರ್‌-19 ವಿಶ್ವಕಪ್‌: ವಿಂಡೀಸಿಗೆ ಸೋಲಿನ ಆಘಾತ

ಜಾರ್ಜ್‌ಟೌನ್‌ (ಗಯಾನಾ): ಅಂಡರ್‌-19 ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್‌ ಉದ್ಘಾಟನಾ ಪಂದ್ಯದಲ್ಲಿ ಸೋಲಿನ ಆಘಾತಕ್ಕೆ ಸಿಲುಕಿದೆ.

ಆಸ್ಟ್ರೇಲಿಯ ಎದುರಿನ ಮುಖಾಮುಖಿಯನ್ನು ಅದು 6 ವಿಕೆಟ್‌ಗಳಿಂದ ಕಳೆದುಕೊಂಡಿತು. ದಿನದ ಇನ್ನೊಂದು ಪಂದ್ಯದಲ್ಲಿ ಶ್ರೀಲಂಕಾ 40 ರನ್ನುಗಳಿಂದ ಸ್ಕಾಟ್ಲೆಂಡ್‌ಗೆ ಸೋಲುಣಿಸಿತು.

ಆಸ್ಟ್ರೇಲಿಯ ಘಾತಕ ಬೌಲಿಂಗ್‌ ದಾಳಿ ಸಂಘಟಿಸಿ ವೆಸ್ಟ್‌ ಇಂಡೀಸನ್ನು ಕಟ್ಟಿಹಾಕಿತು. ಮೊದಲು ಬ್ಯಾಟಿಂಗ್‌ ನಡೆಸಿದ ವಿಂಡೀಸ್‌ 40.1 ಓವರ್‌ಗಳಲ್ಲಿ 169ಕ್ಕೆ ಕುಸಿದರೆ, ಆಸೀಸ್‌ 44.5 ಓವರ್‌ಗಳಲ್ಲಿ 4 ವಿಕೆಟಿಗೆ 170 ರನ್‌ ಬಾರಿಸಿ ಗೆದ್ದು ಬಂದಿತು.

ಭಾರತೀಯ ಮೂಲದ ಎನ್‌. ರಾಧಾಕೃಷ್ಣನ್‌ ಸೇರಿ ಆಸ್ಟ್ರೇಲಿಯದ ಮೂವರು ಬೌಲರ್ ತಲಾ 3 ವಿಕೆಟ್‌ ಕೆಡವಿದರು.

ಲಿಯನಗೆ, ವೆಲ್ಲಲಗೆ ಜಯದ ನಗೆ
ಶ್ರೀಲಂಕಾ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಸಕುನ ಲಿಯನಗೆ (85) ಮತ್ತು ನಾಯಕ ದುನಿತ್‌ ವೆಲ್ಲಲಗೆ (27ಕ್ಕೆ 5).

ಮೊದಲು ಬ್ಯಾಟಿಂಗ್‌ ಮಾಡಿದ ಲಂಕೆಯನ್ನು 45.2 ಓವರ್‌ಗಳಲ್ಲಿ 218ಕ್ಕೆ ನಿಯಂತ್ರಿಸಿದ್ದು ಸ್ಕಾಟ್ಲೆಂಡ್‌ ಹೆಗ್ಗಳಿಕೆ. ಆದರೆ ಈ ಸಾಮಾನ್ಯ ಮೊತ್ತವನ್ನು ಬೆನ್ನಟ್ಟುವಲ್ಲಿ ಚಾರ್ಲಿ ಟಿಯರ್‌ ಪಡೆ ವಿಫ‌ಲವಾಯಿತು. 48.4 ಓವರ್‌ಗಳಲ್ಲಿ 178ಕ್ಕೆ ಕುಸಿಯಿತು. ಸ್ಕಾಟ್ಲೆಂಡ್‌ ಪರ ಜಾಕ್‌ ಜಾರ್ವಿಸ್‌ 55 ರನ್‌ ಹೊಡೆದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.