ಅಂಡರ್‌ – 19 ಟಿ20 ವನಿತಾ ವಿಶ್ವಕಪ್‌: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಜಯ

ಶ್ವೇತಾ ಸೆಹ್ರಾವತ್‌, ಶಫಾಲಿ ಭರ್ಜರಿ ಆಟ

Team Udayavani, Jan 14, 2023, 11:17 PM IST

ಅಂಡರ್‌ – 19 ಟಿ20 ವನಿತಾ ವಿಶ್ವಕಪ್‌: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಜಯ

ಬೆನೋನಿ: ಆರಂಭಿಕ ಆಟಗಾರ್ತಿ ಶ್ವೇತಾ ಸೆಹ್ರಾವತ್‌ ಮತ್ತು ನಾಯಕಿ ಶಫಾಲಿ ವರ್ಮ ಅವರ ಭರ್ಜರಿ ಆಟದಿಂದಾಗಿ ಭಾರತ ತಂಡವು ಅಂಡರ್‌ -19 ಟಿ20 ವನಿತಾ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ.

ಸೆಹ್ರಾವತ್‌ ಅವರ ಅಜೇಯ 92 ರನ್‌ ಮತ್ತು ಶಫಾಲಿ ಅವರ ಸ್ಫೋಟಕ ಆಟದಿಂದಾಗಿ ಭಾರತ ತಂಡವು 16.3 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್‌ ಕಳೆದುಕೊಂಡು 170 ರನ್‌ ಗಳಿಸಿ ಜಯಭೇರಿ ಬಾರಿಸಿತು. ಈ ಮೊದಲು ದಕ್ಷಿಣ ಆಫ್ರಿಕಾ ತಂಡವು 5 ವಿಕೆಟಿಗೆ 166 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು.

ಸೀನಿಯರ್‌ ತಂಡದ ಪರ ಈಗಾಗಲೇ 51 ಟಿ20 ಮತ್ತು 21 ಏಕದಿನ ಪಂದ್ಯಗಳನ್ನಾಡಿದ ಅನುಭವ ಹೊಂದಿರುವ ಶಫಾಲಿ ವರ್ಮ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಕೇವಲ 16 ಎಸೆತಗಳಿಂದ 45 ರನ್‌ ಸಿಡಿಸಿದ ಅವರು ಮೊದಲ ವಿಕೆಟಿಗೆ ಶ್ವೇತಾ ಅವರೊಂದಿಗೆ 77 ರನ್‌ ಪೇರಿಸಿದರು. 9 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದ ಅವರು ಬೌಲಿಂಗ್‌ನಲ್ಲಿಯೂ ಎರಡು ವಿಕೆಟ್‌ ಹಾರಿಸಿದ್ದರು.

ಉಪನಾಯಕಿ ಶ್ವೇತಾ ಸೆಹ್ರಾವತ್‌ ಆಬಳಿಕ ಇತರ ಆಟಗಾರ್ತಿಯರ ನೆರವು ಪಡೆದು ತಂಡಕ್ಕೆ ಜಯ ತಂದುಕೊಟ್ಟರು. 57 ಎಸೆತ ಎದುರಿಸಿದ ಅವರು 20 ಬೌಂಡರಿ ಬಾರಿಸಿ ರಂಜಿಸಿದರು.

ಸಂಕ್ಷಿಪ್ತ ಸ್ಕೋರು: ದಕ್ಷಿಣ ಆಫ್ರಿಕಾ ವನಿತೆಯರು 5 ವಿಕೆಟಿಗೆ 166 (ಸಿಮೋನ್‌ ಲಾರೆನ್ಸ್‌ 61, ಮ್ಯಾಡಿಸನ್‌ ಲ್ಯಾಂಡ್ಸ್‌ಮನ್‌ 32, ಶಫಾಲಿ ವರ್ಮ 31ಕ್ಕೆ 2); ಭಾರತ ವನಿತೆಯರು 16.3 ಓವರ್‌ಗಳಲ್ಲಿ 3 ವಿಕೆಟಿಗೆ 170 (ಶ್ವೇತಾ ಸೆಹ್ರಾವತ್‌ 92 ಔಟಾಗದೆ, ಶಫಾಲಿ ವರ್ಮ 45).

ಬಾಂಗ್ಲಾ ಕೈಯಲ್ಲಿ ಆಸ್ಟ್ರೇಲಿಯಕ್ಕೆ ಆಘಾತ
ಈ ಮೊದಲು ನಡೆದ ಪಂದ್ಯದಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯ ತಂಡವು “ಎ’ ವಿಭಾಗದಲ್ಲಿ ಬಾಂಗ್ಲಾದೇಶ ತಂಡದೆದುರು 7 ವಿಕೆಟ್‌ಗಳಿಂದ ಸೋಲನ್ನು ಕಂಡು ಆಘಾತಕ್ಕೆ ಒಳಗಾಗಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ ತಂಡವು ಬಾಂಗ್ಲಾದ ಬಿಗು ಬೌಲಿಂಗ್‌ ದಾಳಿಯೆದುರು ರನ್‌ ಪೇರಿಸಲು ಒದ್ದಾಡಿ 5 ವಿಕೆಟಿಗೆ 130 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಇದಕ್ಕುತ್ತರವಾಗಿ ಎಚ್ಚರಿಕೆಯ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಬಾಂಗ್ಲಾ ವನಿತೆಯರು ಕೇವಲ 3 ವಿಕೆಟ್‌ ಕಳೆದುಕೊಂಡು 18 ಓವರ್‌ಗಳಲ್ಲಿ 132 ರನ್‌ ಪೇರಿಸಿ ಜಯಭೇರಿ ಬಾರಿಸಿತು.

ಸಂಕ್ಷಿಪ್ತ ಸ್ಕೋರು: ಆಸ್ಟ್ರೇಲಿಯ 5 ವಿಕೆಟಿಗೆ 130 (ಕ್ಲೇರ್‌ ಮೂರೆ 52, ಎಲ್ಲಾ ಹೇವಾರ್ಡ್‌ 32, ಮರುಫಾ ಅಕ್ತೆರ್‌ 29ಕ್ಕೆ 2, ದಿಶಾ ಬಿಸ್ವಾಸ್‌ 25ಕ್ಕೆ 2); ಬಾಂಗ್ಲಾದೇಶ 18 ಓವರ್‌ಗಳಲ್ಲಿ 3 ವಿಕೆಟಿಗೆ 132 (ಅಫಿಯಾ ಪ್ರೊಟಾಶಾ 24, ದಿಲಾರಾ ಅಕ್ತೆರ್‌ 40, ಶೋರ್ನಾ ಅಕ್ತೆರ್‌ 23 ಔಟಾಗದೆ, ಐನ್ಸ್‌ವರ್ತ್‌ 9ಕ್ಕೆ 2).

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.