ಭಾರತ ಏಕದಿನ ತಂಡಕ್ಕೆ ಮರಳಿದ ಉಮೇಶ್, ಶಮಿ
Team Udayavani, Sep 11, 2017, 6:55 AM IST
ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ 16 ಸದಸ್ಯರ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ವೇಗಿಗಳಾದ ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದಾರೆ.
ಬಿಸಿಸಿಐಯ ರೊಟೇಶನ್ ನಿಯಮದಂತೆ ಪ್ರಮುಖ ಸ್ಪಿನ್ನರ್ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜ ಅವರಿಗೆ ಮೊದಲ ಮೂರು ಪಂದ್ಯಗಳಿಗೆ ವಿಶ್ರಾಂತಿ ನೀಡಲು ಆಯ್ಕೆಗಾರರು ನಿರ್ಧರಿಸಿದ್ದಾರೆ. ಏಕದಿನ ಸರಣಿಯ ಮೊದಲ ಪಂದ್ಯ ಚೆನ್ನೆçಯಲ್ಲಿ ಸೆ. 17ರಂದು ನಡೆಯಲಿದೆ.
ಶಾದೂìಲ್ ಠಾಕುರ್ ಅವರನ್ನು ಕೈಬಿಟ್ಟಿರುವುದು ವಿರಾಟ್ ಕೊಹ್ಲಿ ನೇತೃತ್ವದ ಪಡೆಯಲ್ಲಿ ಮಾಡಲಾದ ಏಕೈಕ ಬದಲಾವಣೆಯಾಗಿದೆ. ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಬಳಿಕ ವಿಶ್ರಾಂತಿ ನೀಡಲಾಗಿದ್ದ ಯಾದವ್ ಮತ್ತು ಶಮಿ ಅವರನ್ನು ಮರಳಿ ಕರೆಸಿಕೊಳ್ಳಲಾಗಿದೆ.
ಮೊದಲ ಮೂರು ಪಂದ್ಯಗಳಿಗೆ 15 ಸದಸ್ಯರ ಬದಲು 16 ಸದಸ್ಯರನ್ನು ಹೆಸರಿಸಲು ಆಯ್ಕೆಗಾರರು ನಿರ್ಧರಿಸಲಾಗಿದೆ. ತಂಡದಿಂದ ಕೈಬಿಟ್ಟ ಮುಂಬಯಿಗೆ ವೇಗಿ ಶಾದೂìಲ್ ಠಾಕುರ್ ಅವರು ನ್ಯೂಜಿಲ್ಯಾಂಡ್ ವಿರುದ್ಧ ನಡೆಯಲಿರುವ ಭಾರತ “ಎ’ ಸರಣಿಗೆ ತೆರಳಲಿದ್ದಾರೆ.
ಶ್ರೀಲಂಕಾ ಪ್ರವಾಸದ ವೇಳೆ ನೀಡಿದ ಅಮೋಘ ನಿರ್ವಹಣೆಯ ಆಧಾರದಲ್ಲಿ ಯುಜ್ವೇಂದ್ರ ಚಾಹಲ್ ಮತ್ತು ಅಕ್ಷರ್ ಪಟೇಲ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ಆಯ್ಕೆ ಸಮಿತಿಯ ಚೇರ್ಮನ್ ಎಂಎಸ್ಕೆ ಪ್ರಸಾದ್ ತಿಳಿಸಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ಆಡಲಾದ ಎಲ್ಲ ಪಂದ್ಯಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.
ಅಶ್ವಿನ್ ಸದ್ಯ ಇಂಗ್ಲೆಂಡ್ನಲ್ಲಿ ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ. ನಾಲ್ಕು ಪಂದ್ಯಗಳ ಒಪ್ಪಂದದಂತೆ ಅಶ್ವಿನ್ ಅವರ ಇನ್ನೂ ಎರಡು ಪಂದ್ಯಗಳಲ್ಲಿ ವೂರ್ಸೆಸ್ಟರ್ಶೈರ್ ತಂಡದ ಪರ ಆಡಬೇಕಾಗಿದೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಬಳಿಕ ಎಡಗೈ ಸ್ಪಿನ್ನರ್ ಜಡೇಜ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.
ಭಾರತೀಯ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪ ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮನೀಷ್ ಪಾಂಡೆ, ಕೇದಾರ್ ಜಾಧವ್, ಅಜಿಂಕ್ಯ ರಹಾನೆ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ