ಭಾರತ ಏಕದಿನ ತಂಡಕ್ಕೆ ಮರಳಿದ ಉಮೇಶ್‌, ಶಮಿ


Team Udayavani, Sep 11, 2017, 6:55 AM IST

Umesh-09.jpg

ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ 16 ಸದಸ್ಯರ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ವೇಗಿಗಳಾದ ಉಮೇಶ್‌ ಯಾದವ್‌ ಮತ್ತು ಮೊಹಮ್ಮದ್‌ ಶಮಿ ತಂಡಕ್ಕೆ ಮರಳಿದ್ದಾರೆ.

ಬಿಸಿಸಿಐಯ ರೊಟೇಶನ್‌ ನಿಯಮದಂತೆ ಪ್ರಮುಖ ಸ್ಪಿನ್ನರ್‌ಗಳಾದ ರವಿಚಂದ್ರನ್‌ ಅಶ್ವಿ‌ನ್‌ ಮತ್ತು ರವೀಂದ್ರ ಜಡೇಜ ಅವರಿಗೆ ಮೊದಲ ಮೂರು ಪಂದ್ಯಗಳಿಗೆ ವಿಶ್ರಾಂತಿ ನೀಡಲು ಆಯ್ಕೆಗಾರರು ನಿರ್ಧರಿಸಿದ್ದಾರೆ. ಏಕದಿನ ಸರಣಿಯ ಮೊದಲ ಪಂದ್ಯ ಚೆನ್ನೆçಯಲ್ಲಿ ಸೆ. 17ರಂದು ನಡೆಯಲಿದೆ.

ಶಾದೂìಲ್‌ ಠಾಕುರ್‌ ಅವರನ್ನು ಕೈಬಿಟ್ಟಿರುವುದು ವಿರಾಟ್‌ ಕೊಹ್ಲಿ ನೇತೃತ್ವದ ಪಡೆಯಲ್ಲಿ ಮಾಡಲಾದ ಏಕೈಕ ಬದಲಾವಣೆಯಾಗಿದೆ. ಶ್ರೀಲಂಕಾ ವಿರುದ್ಧ ಟೆಸ್ಟ್‌ ಸರಣಿ ಬಳಿಕ ವಿಶ್ರಾಂತಿ ನೀಡಲಾಗಿದ್ದ ಯಾದವ್‌ ಮತ್ತು ಶಮಿ ಅವರನ್ನು ಮರಳಿ ಕರೆಸಿಕೊಳ್ಳಲಾಗಿದೆ.

ಮೊದಲ ಮೂರು ಪಂದ್ಯಗಳಿಗೆ 15 ಸದಸ್ಯರ ಬದಲು 16 ಸದಸ್ಯರನ್ನು ಹೆಸರಿಸಲು ಆಯ್ಕೆಗಾರರು ನಿರ್ಧರಿಸಲಾಗಿದೆ. ತಂಡದಿಂದ ಕೈಬಿಟ್ಟ ಮುಂಬಯಿಗೆ ವೇಗಿ ಶಾದೂìಲ್‌ ಠಾಕುರ್‌ ಅವರು ನ್ಯೂಜಿಲ್ಯಾಂಡ್‌ ವಿರುದ್ಧ ನಡೆಯಲಿರುವ ಭಾರತ “ಎ’ ಸರಣಿಗೆ ತೆರಳಲಿದ್ದಾರೆ.

ಶ್ರೀಲಂಕಾ ಪ್ರವಾಸದ ವೇಳೆ ನೀಡಿದ ಅಮೋಘ ನಿರ್ವಹಣೆಯ ಆಧಾರದಲ್ಲಿ ಯುಜ್ವೇಂದ್ರ ಚಾಹಲ್‌ ಮತ್ತು ಅಕ್ಷರ್‌ ಪಟೇಲ್‌ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ಆಯ್ಕೆ ಸಮಿತಿಯ ಚೇರ್ಮನ್‌ ಎಂಎಸ್‌ಕೆ ಪ್ರಸಾದ್‌ ತಿಳಿಸಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ಆಡಲಾದ ಎಲ್ಲ ಪಂದ್ಯಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.

ಅಶ್ವಿ‌ನ್‌ ಸದ್ಯ ಇಂಗ್ಲೆಂಡ್‌ನ‌ಲ್ಲಿ ಕೌಂಟಿ ಕ್ರಿಕೆಟ್‌ ಆಡುತ್ತಿದ್ದಾರೆ. ನಾಲ್ಕು ಪಂದ್ಯಗಳ ಒಪ್ಪಂದದಂತೆ ಅಶ್ವಿ‌ನ್‌ ಅವರ ಇನ್ನೂ ಎರಡು ಪಂದ್ಯಗಳಲ್ಲಿ ವೂರ್ಸೆಸ್ಟರ್‌ಶೈರ್‌ ತಂಡದ ಪರ ಆಡಬೇಕಾಗಿದೆ. ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿ ಬಳಿಕ ಎಡಗೈ ಸ್ಪಿನ್ನರ್‌ ಜಡೇಜ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.

ಭಾರತೀಯ ತಂಡ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮ (ಉಪ ನಾಯಕ), ಶಿಖರ್‌ ಧವನ್‌, ಕೆಎಲ್‌ ರಾಹುಲ್‌, ಮನೀಷ್‌ ಪಾಂಡೆ, ಕೇದಾರ್‌ ಜಾಧವ್‌, ಅಜಿಂಕ್ಯ ರಹಾನೆ, ಎಂಎಸ್‌ ಧೋನಿ, ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌, ಯುಜ್ವೇಂದ್ರ ಚಾಹಲ್‌, ಜಸ್‌ಪ್ರೀತ್‌ ಬುಮ್ರಾ, ಭುವನೇಶ್ವರ್‌ ಕುಮಾರ್‌, ಉಮೇಶ್‌ ಯಾದವ್‌, ಮೊಹಮ್ಮದ್‌ ಶಮಿ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.