ದ್ರಾವಿಡ್ ಗರಡಿಯ ಖಲೀಲ್ ಅಹಮದ್ ಏಶ್ಯಾಕಪ್ ಗೆ ಆಯ್ಕೆ


Team Udayavani, Sep 1, 2018, 4:56 PM IST

khaleel.jpg

ಖಲೀಲ್ ಅಹಮದ್. ಈ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಪರಿಚಿತ ಹೆಸರು. 2016ರ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನಲ್ಲಿ ಆಡಿ ಗಮನ ಸೆಳೆದಿದ್ದ ಈ ಎಡಗೈ ವೇಗಿ ಈಗ ಮತ್ತೆ ಸುದ್ದಿಯಾಗಿದ್ದಾರೆ. ಸಪ್ಟೆಂಬರ್ 15 ರಿಂದ ದುಬೈನಲ್ಲಿ ನಡೆಯುವ ಏಶ್ಯಾಕಪ್ ಏಕದಿನ ಸರಣಿಗೆ ಖಲೀಲ್ ಅಹಮದ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. 

ಮೂಲತಃ ರಾಜಸ್ಥಾನದವರಾದ ಖಲೀಲ್ ಹುಟ್ಟಿದ್ದು 1997ರ ಡಿಸೆಂಬರ್ 5ರಂದು. ಅಂಡರ್ 16 ಮತ್ತು ಅಂಡರ್ 19 ಕೂಟಗಳಲ್ಲಿ ರಾಜಸ್ಥಾನ ತಂಡವನ್ನು ಪ್ರತಿನಿಧಿಸಿದ್ದರು. 2016ರ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತದ ಪ್ರಮುಖ ವೇಗಿಯಾಗಿದ್ದರು. ರಾಹುಲ್ ದ್ರಾವಿಡ್ ಕೋಚಿಂಗ್ ನಲ್ಲಿ ಖಲೀಲ್ ಅಹಮದ್ ಭಾರತ ಟೂರ್ನಿಯಲ್ಲಿ ಫೈನಲ್ ಗೇರಲು ಪ್ರಮುಖ ಪಾತ್ರ ವಹಿಸಿದ್ದರು. 


ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಅಷ್ಟೇನು ಗಮನ ಸೆಳೆಯದ ಖಲೀಲ್ ಎರಡು ಪಂದ್ಯಗಳಿಂದ ಎರಡು ವಿಕಟ್ ಅಷ್ಟೇ ಪಡೆದಿದ್ದಾರೆ. ಆದರೆ ಲಿಸ್ಟ್ ಎ ಕ್ರಿಕೆಟ್ ನಲ್ಲಿ 17 ಪಂದ್ಯಗಳಿಂದ ಬರೋಬ್ಬರಿ 28 ವಿಕೆಟ್ ಕಬಳಿಸಿದ್ದಾರೆ. ದೇಶೀಯ ಟಿ20ಯ 12 ಪಂದ್ಯಗಳಿಂದ 17 ವಿಕೆಟ್ ಉರುಳಿಸಿರುವ ಖಲೀಲ್ ಅಹಮದ್ ಸಾಧನೆ ಕಡಿಮೆಯೇನಲ್ಲ.  2018ರ ಸೈಯ್ಯದ್ ಮುಶ್ತಾಕ್ ಅಲಿ ಕೂಟದಲ್ಲಿ ಖಲೀಲ್ 10 ಪಂದ್ಯಗಳಿಂದ 17 ವಿಕಟ್ ಉರುಳಿಸಿದ ಖಲೀಲ್ ಎಕಾನಮಿ ರೇಟ್ ಕೇವಲ 6.77.

ಭಾರತ ಎ ತಂಡದಲ್ಲಿ ಸಾಧನೆ:
ಭಾರತ ಎ ತಂಡದ ಪರವಾಗಿ ಖಲೀಲ್ ತೋರ್ಪಡಿಸಿದ ಅದ್ಭುತ ಸಾಧನೆ ರಾಷ್ಟ್ರೀಯ ಆಯ್ಕೆಗಾರರ ಚಿತ್ತ ಸೆಳೆಯುವಲ್ಲಿ ಕಾರಣವಾಯಿತು. ಎ ತಂಡದ ಪರವಾಗಿ ಇಂಗ್ಲೆಂಡ್ ಸರಣಿ ಮತ್ತು ಇತ್ತೀಚೆಗೆ ಮುಗಿದ ಚತುಷ್ಕೋನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೊರಿದ್ದರು.  ಕಳೆದ 9 ಪಂದ್ಯಗಳಿಂದ 15 ವಿಕೆಟ್ ಪಡೆದ ಖಲೀಲ್ ಪ್ರತೀ ಪಂದ್ಯದಲ್ಲೂ ವಿಕೆಟ್ ಕಬಳಿಸಿದ್ದಾರೆ ಎನ್ನುವುದು ವಿಶೇಷ. 

ಐಪಿಎಲ್ ನಲ್ಲೂ ಆಡಿರುವ ಖಲೀಲ್ ಅಹಮದ್ ಕಳೆದ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದರು. 20 ಲಕ್ಷ ಮೂಲ ಬೆಲೆ ಹೊಂದಿದ್ದ ಖಲೀಲ್ ಬಿಕರಿಯಾಗಿದ್ದು ಮಾತ್ರ ಬರೋಬ್ಬರಿ ಮೂರೂ ಕೋಟಿ ರೂಪಾಯಿಗಳಿಗೆ. 

ಭಾರತದ ಮಾಜಿ ಎಡಗೈ ವೇಗಿ ಜಹೀರ್ ಖಾನ್ ಅವರನ್ನು ಬಹುವಾಗಿ ಮೆಚ್ಚುವ ಖಲೀಲ್ ಅಹಮದ್ ಕೂಡಾ ಎಡಗೈ ವೇಗಿ. ತಾನು ವೇಗದ ಬೌಲರ್ ಆಗಲು ಜಹೀರ್ ಖಾನ್ ಸ್ಪೂರ್ತಿ ಎನ್ನುವ ಖಲೀಲ್ ಬೌಲಿಂಗ್ ಶೈಲಿ ಕೂಡಾ ಜಹೀರ್ ಬೌಲಿಂಗ್ ಶೈಲಿಯನ್ನು ಹೋಲುತ್ತದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು.  

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.