ಅಂಡರ್‌ 17 ವಿಶ್ವಕಪ್‌ ಯಶಸ್ವಿ


Team Udayavani, Oct 27, 2017, 8:28 AM IST

27-8.jpg

ಕೋಲ್ಕತಾ: ಫ‌ುಟ್ಬಾಲ್‌ನ ಗುಣಮಟ್ಟ ಮತ್ತು ಸಂಘಟನೆಯಲ್ಲಿ ಭಾರತ ಅತ್ಯಂತ ಯಶಸ್ವಿಯಾಗಿ ಅಂಡರ್‌ 17 ವಿಶ್ವಕಪ್‌ ಫ‌ುಟ್ಬಾಲ್‌ ಕೂಟವನ್ನು ಆಯೋಜಿಸಿದೆ ಎಂದು ಮುಕ್ತಕಂಠದಿಂದ ಹೊಗಳಿದ ಫಿಫಾ ಭವಿಷ್ಯದಲ್ಲಿ ಭಾರತ ಬೃಹತ್‌ ಜಾಗತಿಕ ಕೂಟದ ಆತಿಥ್ಯ ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದೆ.

ಅಖೀಲ ಭಾರತ ಫ‌ುಟ್ಬಾಲ್‌ ಫೆಡರೇಶನ್‌ ಅಧ್ಯಕ್ಷ ಪ್ರಫ‌ುಲ್‌ ಪಟೇಲ್‌ ಜತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫಿಫಾ ಸ್ಪರ್ಧೆಗಳ ಮುಖ್ಯಸ್ಥ ಜೇಮ್‌ ಯಾರ್ಝ ಅವರು ದೇಶದಲ್ಲಿ ಆಯೋಜಿಸಲಾದ ಚೊಚ್ಚಲ ಫಿಫಾ ಕೂಟಕ್ಕೆ ವಿಶ್ವದರ್ಜೆಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಮತ್ತು ಎಲ್ಲ ತಂಡಗಳು ಕೂಟದ ಸಂಘಟನೆಗೆ ಸಂತೋಷ ವ್ಯಕ್ತಪಡಿಸಿವೆ ಎಂದರು.

ಇದೊಂದು ಗರಿಷ್ಠ ಸಂಖ್ಯೆಯಲ್ಲಿ ವೀಕ್ಷಿಸಿದ ಅಂಡರ್‌ 17 ವಿಶ್ವಕಪ್‌ ಫ‌ುಟ್ಬಾಲ್‌ ಕೂಟವಾಗಿದೆ. ಮೈದಾನದಲ್ಲಿ ಎಲ್ಲ ಪಂದ್ಯಗಳೂ ಉನ್ನತ ಗುಣಮಟ್ಟದ ಸೌಕರ್ಯ ಗಳೊಂದಿಗೆ ನಡೆದಿವೆ. ತಾಂತ್ರಿಕವಾಗಿಯೂ ಉನ್ನತ ದರ್ಜೆಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದವರು ಹೇಳಿದರು.

ಪಂದ್ಯಗಳು ನಡೆದ ಆರು ತಾಣಗಳು ಮತ್ತು ವಿವಿಧ ತಂಡಗಳಿಗೆ ನೀಡಲಾದ ಅಭ್ಯಾಸ ಪಿಚ್‌ಗಳು ಉತ್ತಮ ಗುಣ ಮಟ್ಟದಿಂದ ಕೂಡಿತ್ತು. ಆತಿಥ್ಯ, ಊಟ ಮತ್ತು ಸಾರಿಗೆ ವ್ಯವಸ್ಥೆ ಬಗ್ಗೆ ಎಲ್ಲ ತಂಡಗಳ ಆಟಗಾರರು ಮತ್ತು ತರಬೇತುದಾರರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಯಾರ್ಝ ವಿವರಿಸಿದರು.

ಫಿಫಾ ಅಧ್ಯಕ್ಷರಿಗೆ ಸಿದ್ಧವಾಗಿದೆ ಕುರ್ತಾ, ಪೈಜಾಮ!
ಕೋಲ್ಕತಾ: ಅಂತಾರಾಷ್ಟ್ರೀಯ ಫ‌ುಟ್‌ಬಾಲ್‌ ಒಕ್ಕೂಟ (ಫಿಫಾ) ಅಧ್ಯಕ್ಷ ಗಿಯಾನ್ನಿ ಇನಾ#ಂಟಿನೊ ಗುರುವಾರ ಬಿಗಿ ಭದ್ರತೆ ನಡುವೆ ಭಾರತಕ್ಕೆ ಬಂದಿಳಿದರು. ಫಿಫಾ ಕಿರಿಯರ ವಿಶ್ವಕಪ್‌ ಕೂಟದ ಫೈನಲ್‌ ವೀಕ್ಷಣೆಗಾಗಿ ಅವರು ಕೋಲ್ಕತಾಕ್ಕೆ ಆಗಮಿಸಿದ್ದಾರೆ. ಕೋಲ್ಕತಾದ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವರಿಗೆ ಭಾರೀ ಸ್ವಾಗತ ಸಿಕ್ಕಿತು. 

ಈ ವೇಳೆ ಮಾತನಾಡಿದ ಅವರು, ಭಾರತ ಈಗ ಫ‌ುಟ್‌ಬಾಲ್‌ ಆಡುವ ರಾಷ್ಟ್ರವಾಗಿದೆ ಎಂದು ತಿಳಿಸಲು ಸಂತಸವಾಗುತ್ತಿದೆ ಎಂದರು. ಫೈನಲ್‌ ವೀಕ್ಷಿಸಲು ಬಂದಿರುವ ಅವರಿಗಾಗಿ ಅಗ್ನಿಮಿತ್ರ ಪೌಲ್‌ ವಿನ್ಯಾಸಗೊಳಿಸಿರುವ ವಿಶೇಷ ಕುರ್ತಾ ಹಾಗೂ ಪೈಜಾಮ ಸಿದ್ಧಪಡಿಸಲಾಗಿದೆ. ಅಲ್ಲದೆ ವಿಶೇಷ ಮಾಂಸಾಹಾರದ ಭೋಜನದ ವ್ಯವಸ್ಥೆಯಾಗಿದೆ. ಫೈನಲ್‌ ಪಂದ್ಯದಂದು ಅವರು ಕುರ್ತಾ, ಪೈಜಾಮ ಧರಿಸಲಿದ್ದಾರೆ. ಅಕ್ಟೋಬರ್‌ 28ರಂದು ಕೋಲ್ಕತಾದ ಸಾಲ್ಟ್ಲೇಕ್‌ನಲ್ಲಿರುವ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.