ಜಪಾನ್‌ ಎದುರಾಳಿ: ಭಾರತಕ್ಕೆ ಸುಲಭ ಜಯದ ನಿರೀಕ್ಷೆ


Team Udayavani, Jan 21, 2020, 6:45 AM IST

sulaba-jaya

ಬ್ಲೋಮ್‌ಫಾಂಟೈನ್‌ (ದಕ್ಷಿಣ ಆಫ್ರಿಕಾ): ಪ್ರಶಸ್ತಿ ಉಳಿಸಿಕೊಳ್ಳುವ ಹಾದಿಯಲ್ಲಿ ಮೊದಲ ಹೆಜ್ಜೆಯನ್ನು ಯಶಸ್ವಿಯಾಗಿ ಇರಿಸಿರುವ ಭಾರತ, ಅಂಡರ್‌-19 ಏಕದಿನ ವಿಶ್ವಕಪ್‌ ಕೂಟದ ತನ್ನ ದ್ವಿತೀಯ ಪಂದ್ಯದಲ್ಲಿ ಮಂಗಳವಾರ “ಕ್ರಿಕೆಟ್‌ ಶಿಶು’ ಜಪಾನ್‌ ವಿರುದ್ಧ ಸೆಣಸಲಿದೆ.

“ಎ’ ವಿಭಾಗದ ತನ್ನ ಮೊದಲ ಪಂದ್ಯದಲ್ಲಿ ಭಾರತ 90 ರನ್ನುಗಳಿಂದ ಶ್ರೀಲಂಕಾವನ್ನು ಕೆಡವಿತ್ತು. ಇನ್ನೊಂದೆಡೆ ನ್ಯೂಜಿಲ್ಯಾಂಡ್‌ ಎದುರಿನ ಪಂದ್ಯ ಮಳೆಯಿಂದ ರದ್ದುಗೊಂಡಿದ್ದರಿಂದ ಜಪಾನ್‌ ಒಂದಂಕವನ್ನು ಸಂಪಾದಿಸಲು ಯಶಸ್ವಿಯಾಗಿತ್ತು. ಪೂರ್ಣ ಅಂಕದ ನಿರೀಕ್ಷೆಯಲ್ಲಿದ್ದ ಕಿವೀಸ್‌ಗೆ ಇದರಿಂದ ಭಾರೀ ನಷ್ಟ ಸಂಭವಿಸಿದ್ದು ಸುಳ್ಳಲ್ಲ.

ಮುಂದಿನ ಸುತ್ತಿನತ್ತ…
ಮಂಗಳವಾರ ಜಪಾನನ್ನು ಮಣಿಸಿದರೆ ಭಾರತದ ಕಿರಿಯರು ಎಂಟರ ಸುತ್ತಿಗೆ ಲಗ್ಗೆ ಇಡಲಿದ್ದಾರೆ. ಜ. 24ರಂದು ನ್ಯೂಜಿಲ್ಯಾಂಡ್‌ ವಿರುದ್ಧ ಪ್ರಿಯಂ ಗರ್ಗ್‌ ಬಳಗ ತನ್ನ ಅಂತಿಮ ಲೀಗ್‌ ಪಂದ್ಯವನ್ನು ಆಡಲಿದೆ.

ಶ್ರೀಲಂಕಾ ವಿರುದ್ಧ ಭಾರತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡರಲ್ಲೂ ನಿಚ್ಚಳ ಮೇಲುಗೈ ಸಾಧಿಸಿತ್ತು. ಆರಂಭಕಾರ ಯಶಸ್ವಿ ಜೈಸ್ವಾಲ್‌ (59), ನಾಯಕ ಪ್ರಿಯಂ ಗರ್ಗ್‌ (56), ಉಪನಾಯಕ ಧ್ರುವ ಜುರೆಲ್‌ (52), ಆಲ್‌ರೌಂಡರ್‌ ಸಿದ್ದೇಶ್‌ ವೀರ್‌ (ಅಜೇಯ 44) ಬ್ಯಾಟಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಪ್ರತಿಯೊಂದು ವಿಕೆಟಿಗೂ ಉತ್ತಮ ಜತೆಯಾಟ ನಡೆಸುವ ಮೂಲಕ ಇವರೆಲ್ಲ ಲಂಕಾ ಬೌಲರ್‌ಗಳ ಮೇಲೆ ಸವಾರಿ ಮಾಡಿದರು.

ಬೌಲಿಂಗ್‌ ವೇಳೆ ಎಡಗೈ ಪೇಸರ್‌ ಆಕಾಶ್‌ ಸಿಂಗ್‌, ಸಿದ್ದೇಶ್‌ ವೀರ್‌, ಲೆಗ್‌ಸ್ಪಿನ್ನರ್‌ ರವಿ ಬಿಶ್ನೋಯ್‌, 140 ಕಿ.ಮೀ. ವೇಗದ ಎಸೆತಗಳಿಗೆ ಸಾಕ್ಷಿಯಾದ ಕಾರ್ತಿಕ್‌ ತ್ಯಾಗಿ ಸೇರಿಕೊಂಡು ಲಂಕಾ ಬ್ಯಾಟಿಂಗಿಗೆ ಉಳಿಗಾಲವಿಲ್ಲದಂತೆ ಮಾಡಿದ್ದರು.

ಅನನುಭವಿ ಜಪಾನ್‌
ಕ್ರಿಕೆಟಿಗೆ ಅಪರಿಚಿತವಾದ ಅನನುಭವಿ ಜಪಾನಿಗೆ ಭಾರತದ ಸವಾಲನ್ನು ನಿಭಾಯಿಸುವುದು ಖಂಡಿತ ಅಸಾಧ್ಯ. ಏರುಪೇರಿನ ಫ‌ಲಿತಾಂಶ ದಾಖಲಿಸುವ ಸಾಮರ್ಥ್ಯವನ್ನೂ ಅದು ಹೊಂದಿಲ್ಲ. ಹೀಗಾಗಿ ಜಪಾನ್‌ ಹಾಲಿ ಚಾಂಪಿಯನ್ನರಿಗೆ ಸುಲಭದ ತುತ್ತಾಗುವ ಎಲ್ಲ ಸಾಧ್ಯತೆ ಇದೆ.

ಹೆಸರಿಗೆ ಜಪಾನ್‌ ಆದರೂ ಇದಲ್ಲಿ ತವರಿನ ಆಟಗಾರರ ಸಂಖ್ಯೆ ಕೆಲವೇ ಕೆಲವು. ಮೊರಿಟ, ಡಾಟೆ, ನೊಗುಚಿ, ಸುಟೊ, ಟಕಹಾಶಿ ಮೊದಲಾದವರಷ್ಟೇ ಜಪಾನ್‌ ಮೂಲದವರು. ಉಳಿದವರಲ್ಲಿ ಏಶ್ಯನ್ನರದೇ ಸಿಂಹಪಾಲು. ಇದರಲ್ಲಿ ಭಾರತೀಯರೂ ಇದ್ದಾರೆ.

ಜಪಾನ್‌ ತಂಡ
ಮಾರ್ಕಸ್‌ ತುಗೇìಟ್‌ (ನಾಯಕ), ತುಷಾರ್‌ ಚತುರ್ವೇದಿ, ಮ್ಯಾಕ್ಸಿಮಿಲಿಯನ್‌ ಕ್ಲೆಮೆಂಟ್ಸ್‌, ನೀಲ್‌ ಡಾಟೆ, ಕೆಂಟೊ ಡೋಬೆಲ್‌, ಸೋರ ಲಿಶಿಕಿ, ಇಶಾನ್‌ ಫ‌ರ್ಟಿಯಲ್‌, ಲಿಯೋನ್‌ ಮೆಹ್ಲಿಂಗ್‌, ಮಸಾಟೊ ಮೊರಿಟ, ಶು ನೊಗುಚಿ, ಯುಗಂಧರ್‌ ರೆತಾರೇಕರ್‌, ದೇಬಶಿಷ್‌ ಸಾಹೂ, ರೀಜಿ ಸುಟೊ, ಕಝುಮಸ ಟಕಹಾಶಿ, ಅÂಶ್ಲಿ ತುಗೇìಟ್‌.

ಆಸೀಸ್‌, ವಿಂಡೀಸ್‌ ಗೆಲುವು
ಸೋಮವಾರದ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ಡಿ-ಎಲ್‌ ನಿಯಮದಂತೆ 71 ರನ್ನುಗಳಿಂದ ಇಂಗ್ಲೆಂಡನ್ನು ಮಣಿಸಿದೆ. ಇನ್ನೊಂದು ಪಂದ್ಯದಲ್ಲಿ ನೈಜೀರಿಯಾ ಮೇಲೆ ಸವಾರಿ ಮಾಡಿದ ಆಸ್ಟ್ರೇಲಿಯ 10 ವಿಕೆಟ್‌ಗಳ ಗೆಲುವು ಸಾಧಿಸಿತು. ನೈಜೀರಿಯಾ 61ಕ್ಕೆ ಆಲೌಟ್‌ ಆಯಿತು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.